Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಅಮೃತ ಅಪಾರ್ಟ್‌ಮೆಂಟ್ಸ್’ನಲ್ಲೊಂದು ಮರ್ಡರ್ ಮಿಸ್ಟ್ರಿ ಕಥೆ ಹೇಳ ಹೊರಟ ಗುರುರಾಜ್ ಕುಲಕರ್ಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಅಮೃತ ಅಪಾರ್ಟ್‌ಮೆಂಟ್ಸ್’ನಲ್ಲೊಂದು ಮರ್ಡರ್ ಮಿಸ್ಟ್ರಿ ಕಥೆ ಹೇಳ ಹೊರಟ ಗುರುರಾಜ್ ಕುಲಕರ್ಣಿ

Cinema

‘ಅಮೃತ ಅಪಾರ್ಟ್‌ಮೆಂಟ್ಸ್’ನಲ್ಲೊಂದು ಮರ್ಡರ್ ಮಿಸ್ಟ್ರಿ ಕಥೆ ಹೇಳ ಹೊರಟ ಗುರುರಾಜ್ ಕುಲಕರ್ಣಿ

Public TV
Last updated: November 21, 2021 10:59 pm
Public TV
Share
2 Min Read
gururaj kulkarni
SHARE

ನಿರ್ದೇಶಕ ನಿರ್ಮಾಪಕನಾಗುತ್ತಾನೆ, ಆದ್ರೆ ನಿರ್ಮಾಪಕ ನಿರ್ದೇಶಕನಾಗೋದು ಬೆರಳೆಣಿಕೆಯವರಷ್ಟೇ. ಆ ಬೆರಳೆಣಿಕೆಯವರ ಸಾಲಿಗೆ ಸೇರುವವರು ಆಕ್ಸಿಡೆಂಟ್ ಹಾಗೂ ಲಾಸ್ಟ್ ಬಸ್ ಸಿನಿಮಾ ನಿರ್ಮಾಪಕ ಗುರುರಾಜ ಕುಲಕರ್ಣಿ. ನಿರ್ಮಾಪಕನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಗುರುರಾಜ ಕುಲಕರ್ಣಿ ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಅಮೃತ ಅಪಾರ್ಟ್‌ಮೆಂಟ್ಸ್‌’ ಸಿನಿಮಾ ನವೆಂಬರ್ 26ಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ.

ಅಮೃತ ಅಪಾರ್ಟ್‌ಮೆಂಟ್ಸ್‌ ಫ್ಯಾಮಿಲಿ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಸಿನಿಮಾ. ಚಿತ್ರದ ಹಾಡು ಟೀಸರ್, ಟ್ರೇಲರ್ ನೋಡಿದವರಿಗೆ ಸಿನಿಮಾ ಮೇಲೆ ಒಂದು ನಿರೀಕ್ಷೆ ಈಗಾಗಲೇ ಚಿಗುರಿದೆ. ಭರವಸೆ ಮೂಡಿಸುವಂತ ಕಟೆಂಟ್ ಇದೆ ಎಂಬ ಅರಿವೂ ಆಗಿದೆ. ಆದ್ರಿಂದ ಸಿನಿಮಾವನ್ನೊಮ್ಮೆ ನೋಡಬೇಕು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಪ್ರವಾಹಪೀಡಿತ ಜನರ ನೆರವಿಗೆ ನಿಂತ ಸೋನು ಸೂದ್‌

amruth apartments1

ಗುರುರಾಜ ಕುಲಕರ್ಣಿ ಈ ಚಿತ್ರದ ಸೂತ್ರಧಾರಿ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಷ್ಟಕ್ಕೆ ನಿಂತಿಲ್ಲ ನಿರ್ಮಾಣದ ನೊಗವನ್ನು ಇವರೇ ಹೊತ್ತಿದ್ದಾರೆ. ಒಂದು ರೀತಿ ಒನ್ ಮ್ಯಾನ್ ಆರ್ಮಿಯಾಗಿ ಸಿನಿಮಾವನ್ನು ನಿಭಾಯಿಸಿದ್ದಾರೆ. ಫ್ಯಾಮಿಲಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳು ಸಾಲು ಸಾಲು ಬಂದಿವೆ. ಇದರಲ್ಲೇನು ವಿಶೇಷ ಅಂದ್ರೆ ವಿಶೇಷತೆ ಹಲವು ಅನ್ನುತ್ತೆ ಚಿತ್ರತಂಡ. ಇಲ್ಲಿ ಪ್ರತಿಯೊಬ್ಬ ಬೆಂಗಳೂರಿಗನ ಕಥೆಯಿದೆ, ಬೆಂಗಳೂರಿನಲ್ಲಿ ಚಿಗುರೊಡೆಯೋ ಪ್ರೀತಿಕಥೆಯಿದೆ, ಭಾವನೆಗಳಿವೆ, ರಿಯಾಲಿಸ್ಟಿಕ್ ಜೀವನಕ್ಕೆ ಹತ್ತಿರವಾದ ಹಲವು ಸಂಗತಿಗಳಿವೆ ಎನ್ನುವುದು ಚಿತ್ರತಂಡದ ಉತ್ತರ.

ಬೆಂಗಳೂರು ಬಹು ಭಾಷೆಯ, ಬಹು ಸಂಸ್ಕೃತಿಯ ಆಗರ ಇಂತಹದ್ದೊಂದು ಊರಲ್ಲಿ ಸಾಮಾನ್ಯವಾಗಿ ಘಟಿಸುವ ಘಟನೆಯನ್ನು ಸಿನಿಮ್ಯಾಟಿಕ್ ಟಚ್ ಕೊಟ್ಟು ಪ್ರೇಕ್ಷಕರನ್ನು ರಂಜಿಸಲಿದ್ದಾರೆ ನಿರ್ದೇಶಕರು. ಬದುಕು ಕಟ್ಟಿಕೊಳ್ಳಲು ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ, ದೇಶಗಳಿಂದ ಜನರು ಇಲ್ಲಿಗೆ ಬರ್ತಾನೆ ಇರ್ತಾರೆ. ಹೀಗೆ ಬೇರೆ ಪ್ರದೇಶದ, ಬೇರೆ ಸಂಸ್ಕೃತಿಯ ನಾಯಕ ನಾಯಕಿ ನಡುವೆ ಚಿಗುರೊಡೆಯೋ ಪ್ರೀತಿ ಕಥೆಯೇ ಅಮೃತ ಅಪಾರ್ಟ್ ಮೆಂಟ್ಸ್. ಈ ಪ್ರೀತಿ ಮುಂದೆ ಯಾವೆಲ್ಲ ತಿರುವು ಪಡೆಯುತ್ತೆ, ಇಬ್ಬರೂ ಒಂದಾಗಿ ಇರ್ತಾರ ಎನ್ನುವುದೇ ಅಮೃತ್ ಅಪಾರ್ಟ್‌ಮೆಂಟ್ಸ್‌ ಒನ್ ಲೈನ್ ಕಹಾನಿ. ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

amruth apartments

ಕೆಜಿಎಫ್, ಯುವರತ್ನ ಸಿನಿಮಾಗಳ ಮೂಲಕ ಮುನ್ನೆಲೆಗೆ ಬಂದಿರುವ, ವಿಲನ್ ಪಾತ್ರಗಳಲ್ಲಿ ಮಿಂಚಿರುವ ತಾರಕ್ ಪೊನ್ನಪ್ಪ ಈ ಚಿತ್ರದಲ್ಲಿ ನಾಯಕ ನಟನಾಗಿ ಕಾಣಸಿಗಲಿದ್ದಾರೆ. ಇವರಿಗೆ ನಾಯಕಿಯಾಗಿ ಊರ್ವಶಿ ಗೋವರ್ಧನ್ ಬಣ್ಣ ಹಚ್ಚಿದ್ದಾರೆ. ಚಿತ್ರದ ಕಥೆಗೆ ತಕ್ಕಂತೆ ಸಿನಿಮಾದಲ್ಲಿನ ಪೋಷಕ ಪಾತ್ರಗಳು ಕೂಡ ಅಷ್ಟೇ ಎಫೆಕ್ಟಿವ್ ಆಗಿದ್ದು, ಪ್ರತಿಭಾವಂತ ನಟ ಬಾಲಾಜಿ ಮನೋಹರ್, ಸಂಪತ್ ಮೈತ್ರೇಯ, ಮಾನಸ ಜೋಶಿ, ಸೀತಾ ಕೋಟೆ, ಪ್ರಧಾನ ಪಾತ್ರಗಳಲ್ಲಿ ಮಿಂಚಿದ್ದಾರೆ. ಉಳಿದಂತೆ ಸಿತಾರಾ, ಮಾಲತೇಶ, ರಾಜ ನೀನಾಸಂ, ಜಗದೀಶ್ ಜಾಲಾ, ರಂಗಸ್ವಾಮಿ ಒಳಗೊಂಡ ರಂಗಭೂಮಿ ಕಲಾವಿದರ ದಂಡು ಚಿತ್ರದಲ್ಲಿದೆ.

ಖ್ಯಾತ ಸಂಕಲನಕಾರ ಬಿ.ಎಸ್.ಕೆಂಪರಾಜು ಸಂಕಲನ ಚಿತ್ರಕ್ಕಿದ್ದು, ಅರ್ಜುನ್ ಅಜಿತ್ ಕ್ಯಾಮೆರಾ ವರ್ಕ್, ಎಸ್.ಡಿ ಅರವಿಂದ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಜಿ-9 ಕಮ್ಯನಿಕೇಶನ್ ಮೀಡಿಯಾ ಅಂಡ್ ಎಂಟಟೈನ್ಮೆಂಟ್ ಬ್ಯಾನರ್‌ನಡಿ ಸಿನಿಮಾ ನಿರ್ಮಾಣವಾಗಿದ್ದು, ನವೆಂಬರ್ 26ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

TAGGED:Amruth Apartmentsgururaj kulkarniಅಮೃತ ಅಪಾರ್ಟ್ ಮೆಂಟ್ಸ್ಗುರುರಾಜ್ ಕುಲಕರ್ಣಿ
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
15 minutes ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
1 hour ago
Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
2 hours ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
3 hours ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
3 hours ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?