ನವದೆಹಲಿ: ಚಂದನವನದ ಯುವರತ್ನ ಪುನೀತ್ ರಾಜ್ಕುಮಾರ್ ಅವರಿಗೆ ಅಮೂಲ್ ವಿಶೇಷವಾಗಿ ಗೌರವವನ್ನು ಸಲ್ಲಿಸಿದೆ.
ಶುಕ್ರವಾರದಂದು ಕನ್ನಡದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನವು ಅವರ ಅಭಿಮಾನಿಗಳು, ಸ್ನೇಹಿತರು ಮತ್ತು ಹಿತೈಷಿಗಳಿಗೆ ಆಘಾತವನ್ನುಂಟು ಮಾಡಿತ್ತು. ಇಂದು ಅವರ ಅಂತ್ಯಸಂಸ್ಕಾರವಾಗಿದ್ದು, ಇದನ್ನು ಇನ್ನೂ ಕೆಲವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಕರ್ನಾಟಕ ಮಾತ್ರವಲ್ಲ ಪುನೀತ್ ಸಾವಿಗೆ ಇಡೀ ಭಾರತವೇ ಶೋಕಚರಣೆಯಲ್ಲಿ ಮುಳುಗಿತ್ತು. ಇದನ್ನೂ ಓದಿ: ಇಂದಿರಾ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ
ಇನ್ಸ್ಟಾಗ್ರಾಮ್ ನಲ್ಲಿ, ‘ಯುವರತ್ನಾ ಫಾರ್ ಮಿಲಿಯನ್ಸ್’ ಅಂಡ್ ‘ಪುನೀತ್ ರಾಜ್ಕುಮಾರ್ 1975-2021’ ಎಂಬ ಪೋಸ್ಟ್ ಹಾಕಿದ್ದು, ಕನ್ನಡದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಎಂದು ಬರೆದು ಶೇರ್ ಮಾಡಿದೆ. ಈ ಹಿನ್ನೆಲೆ ಅಪ್ಪು ಅಭಿಮಾನಿಗಳು ಈ ಪೋಸ್ಟ್ ಗೆ ಹಾರ್ಟ್ ಎಮೋಜಿಗಳನ್ನು ಕಳುಹಿಸುತ್ತಿದ್ದಾರೆ.
View this post on Instagram
46ನೇ ವಯಸ್ಸಿಗೆ ಪುನೀತ್ ಶುಕ್ರವಾರ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾದರು. ಈ ಹಿನ್ನೆಲೆ ಇವರನ್ನು ನೋಡಲು ಲಕ್ಷಾಂತರ ಅಭಿಮಾನಿ ಬಳಗ ಬಂದಿದ್ದು, ಕನ್ನಡದ ಸ್ಟಾರ್ ನಟರು ಮಾತ್ರವಲ್ಲದೇ ಬೇರೆ ಭಾಷೆಯ ಸ್ಟಾರ್ ನಟರೂ ಸಹ ಅಪ್ಪುನನ್ನು ನೋಡಲು ಬಂದಿದ್ದರು. ಇಂದು ನಮ್ಮ ಚಿತ್ರತಂಡ ಒಬ್ಬ ಯಶಸ್ವಿ ನಟನನ್ನು ಕಳೆದುಕೊಂಡಿದೆ. ಇದನ್ನೂ ಓದಿ: ಪ್ರತಿಭಟನಾಕಾರರನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದರೆ ಪರಿಣಾಮ ಎದುರಿಸಬೇಕಾಗುತ್ತೆ: ರಾಕೇಶ್ ಟಿಕಾಯತ್