Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೀನಾಮೆ ನೀಡಿದ್ದೇನೆ, ಬೇಕಾದರೆ ಮತ್ತೊಮ್ಮೆ ನೀಡುತ್ತೇನೆ – ಆನಂದ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜೀನಾಮೆ ನೀಡಿದ್ದೇನೆ, ಬೇಕಾದರೆ ಮತ್ತೊಮ್ಮೆ ನೀಡುತ್ತೇನೆ – ಆನಂದ್ ಸಿಂಗ್

Bengaluru City

ರಾಜೀನಾಮೆ ನೀಡಿದ್ದೇನೆ, ಬೇಕಾದರೆ ಮತ್ತೊಮ್ಮೆ ನೀಡುತ್ತೇನೆ – ಆನಂದ್ ಸಿಂಗ್

Public TV
Last updated: July 1, 2019 1:07 pm
Public TV
Share
3 Min Read
anand singh bng a copy
SHARE

ಬೆಂಗಳೂರು: ದಿಢೀರ್ ರಾಜಕೀಯ ಬೆಳವಣಿಗೆಗಳ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆನಂದ್ ಸಿಂಗ್ ಅವರು ನಿರ್ಧಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ರಾಜಭವನದ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ ಸ್ಪೀಕರ್ ಅವರಿಗೆ ರಾಜೀನಾಮೆಯನ್ನು ನೀಡಿದ್ದು, ಬೇಕಾದರೆ ಮತ್ತೊಮ್ಮೆ ರಾಜೀನಾಮೆ ನೀಡುತ್ತೇನೆ ಎಂದರು. ಈ ವೇಳೆ ತಮ್ಮ ರಾಜೀನಾಮೆ ನಿರ್ಧಾರದ ಕಾರಣವನ್ನು ತಿಳಿಸಲು ಇಚ್ಛಿಸದ ಅವರು, ನಾನು ಸದ್ಯ ರಾಜ್ಯಪಾಲರ ಭೇಟಿಗೆ ಆಗಮಿಸಿದ್ದೇನೆ. ಅವರ ಭೇಟಿಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇನೆ ಎಂದರು.

anand singh bng

ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಹಲವು ಅನುಮಾನಗಳು ಮೂಡಿದೆ. ಇತ್ತ ಸರ್ಕಾರ ಜಿಂದಾಲ್ ಸಂಸ್ಥೆ ಭೂಮಿ ಮಂಜೂರು ಮಾಡುತ್ತಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ಕುರಿತ ಸುದೀರ್ಘ ಪತ್ರವನ್ನು ಜೂನ್ 27 ರಂದು ಗೃಹ ಸಚಿವರಾದ ಎಂಬಿ ಪಾಟೀಲ್ ಅವರಿಗೆ ಬರೆದು ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರದಲ್ಲಿ ಜಿಂದಾಲ್‍ಗೆ ಭೂಮಿ ವಿವಾದ ನೀಡುವ ಸರ್ಕಾರ ಮುಂದಾಗಿರುವ ಬಗ್ಗೆ ಪ್ರಸ್ತಾಪಿಸಿರುವ ಆನಂದ್ ಸಿಂಗ್ ಅವರು, ಈ ಕುರಿತು ಚರ್ಚೆ ನಡೆಸಲು ಸರ್ಕಾರ ನೇಮಿಸಿರುವ ಸಚಿವ ಸಂಪುಟ ಉಪಸಮಿತಿಯ ಕ್ರಮವನ್ನು ಸ್ವಾಗತ ಮಾಡುವುದಾಗಿ ತಿಳಿಸಿದ್ದಾರೆ. ಆದರೆ ತಾವು ಕ್ಷೇತ್ರದ ರೈತರ ಹಾಗೂ ಯುವಕರ ಪರ ಇದ್ದು, ಅವರ ಭವಿಷ್ಯದ ದೃಷ್ಟಿಯಿಂದ ಹಲವು ಚರ್ಚೆಗಳನ್ನು ನಡೆಸಿ ಮಾಹಿತಿ ಸಂಗ್ರಹಿಸಿದ್ದಾಗಿ ತಿಳಿಸಿದ್ದಾರೆ.

Jindal

ಪತ್ರದಲ್ಲಿ ಏನಿದೆ?
ಈಗಾಗಲೇ ಬಳ್ಳಾರಿ ಜಿಲ್ಲೆ ಗಣಿಗಾರಿಕೆಯಿಂದ ನಲುಗಿ ಹೋಗಿದೆ. ಈ ಹಿಂದೆಯೂ ಹಲವು ಸಂಸ್ಥೆಗಳು ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಲು ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಟಿಸುವ, ಅಭಿವೃದ್ಧಿಯ ಆಸೆಯನ್ನು ತೋರಿಸಿ ಸರ್ಕಾರದ ವತಿಯಿಂದ ಅನೇಕ ಸೌಲಭ್ಯಗಳನ್ನು ಪಡೆದುಕೊಂಡಿದೆ. ಇಂದು ಕೂಡ ಇದೇ ಹಿನ್ನೆಲೆಯಲ್ಲಿ ಭೂಮಿ ಪಡೆದುಕೊಳ್ಳುವ ಸಂಚು ನಡೆಸಲಾಗುತ್ತಿದೆ. ಈಗಾಗಲೇ ಜಿಂದಾಲ್ 11 ಸಾವಿರ ಎಕರೆಗಿಂತಲೂ ಹೆಚ್ಚು ಭೂಮಿಯನ್ನು ಸರ್ಕಾರದಿಂದ ಪಡೆದುಕೊಂಡಿದ್ದು, ಈ ಭೂಮಿಯ ಸ್ಥಿತಿ ಗತಿಗಳ ಬಗ್ಗೆ ಸದನ ಉಪಸಮಿತಿಯಲ್ಲಿ ಪರಿಶೀಲನೆ ನಡೆಸಬೇಕಿದೆ. ಅಲ್ಲದೇ 11 ಸಾವಿರ ಎಕರೆ ಪ್ರದೇಶ ಪಡೆದ ಮೇಲೂ ಮತ್ತೆ 3667 ಎಕರೆ ಭೂಮಿ ಪಡೆಯುವ ಅಗತ್ಯ ಏನಿದೆ ಎಂಬ ಪ್ರಶ್ನೆ ಉದ್ಭವಾಗಿದೆ.

M.B.Patil

ಈಗಾಗಲೇ ನೀಡಿರುವ 11 ಸಾವಿರ ಎಕರೆ ಪ್ರದೇಶದಲ್ಲೇ ಈಗ ಪಡೆಯುತ್ತಿರುವ 3667 ಎಕರೆ ಬಂದರೆ ಅದನ್ನು ಲೀಸ್ ನಲ್ಲಿಯೇ ಮುಂದುವರಿಸಬಹುದು. ಆದರೆ ಈಗ ಅದನ್ನು ಶುದ್ಧ ಕ್ರಯಕ್ಕೆ ಪಡೆಯುತ್ತಿರುವುದು ಏಕೆ? ಈಗಾಗಲೇ ನನಗೆ ಲಭಿಸಿರುವ ಮಾಹಿತಿ ಅನ್ವಯ ಜಿಂದಾಲ್ ಸಂಸ್ಥೆ 11 ಸಾವಿರ ಎಕರೆ ಭೂ ಪ್ರದೇಶಕ್ಕಿಂತ ಹೆಚ್ಚಿನ ಭೂಮಿಯನ್ನು ಪಡೆದುಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುವ ಅಗತ್ಯ ಏನಿದೆ? ಸಮ್ಮಿಶ್ರ ಸರ್ಕಾರ ವಿರುದ್ಧ ವಿರೋಧಿ ಪಕ್ಷಗಳಿಂದ ಕೇಳಿ ಬಂದಿರುವ ಆರೋಪಗಳಿಗೆ ಪಕ್ಷ ನಾಯಕರು ನೀಡುತ್ತಿರುವ ಸಮರ್ಥನೆಯೂ ನನಗೆ ಬೇಸರ ತರಿಸಿದೆ. ಅಧಿಕಾರ ಉಳಿಸಿಕೊಳ್ಳಲು ಕೆಲವರು ಈ ರೀತಿ ಮಾತನಾಡುತ್ತಿರುವುದು ಬೇಸರ ತಂದಿದೆ. ಕಾರ್ಖಾನೆಯಿಂದ ಈಗ ಜಿಲ್ಲೆಯ ಜನತೆಗೆ ಆಗಿರುವ ಅನಾನುಕೂಲಗಳೇ ಹೆಚ್ಚಾಗಿದೆ. ಜಿಲ್ಲೆಯಿಂದ ಸಾವಿರಾರು ಕೋಟಿ ವ್ಯವಹಾರ ನಡೆಸುವ ಜಿಂದಾಲ್ ಸಂಸ್ಥೆ 11 ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಕೇವಲ 10 ಕೋಟಿ ರೂ.ಗಳಷ್ಟೇ ಖರ್ಚು ಮಾಡಿದೆ. ಜಿಂದಾಲ್ ಸಂಸ್ಥೆ ಜಿಲ್ಲೆಯನ್ನು ಖಬ್ಜಕ್ಕೆ ತೆಗೆದುಕೊಂಡಂತೆ ಭಾಸವಾಗುತ್ತಿದೆ.

Capture copy

ರಾಜ್ಯದಲ್ಲಿ ಹಲವು ಸಂಸ್ಥೆಗಳು ಇದೇ ರೀತಿ ಮಾಡಿಕೊಂಡು ಸರ್ಕಾರದಿಂದ ಭೂಮಿಯನ್ನು ಪಡೆದುಕೊಂಡಿದೆ. ಆದರೆ ಆ ಬಳಿಕ ಲ್ಯಾಂಡ್ ಬ್ಯಾಂಕ್ ಮಾಡಿಕೊಂಡು ಕೈಗಾರಿಕಾ ಉದ್ದೇಶದಿಂದ ಪಡೆದ ಭೂಮಿಯನ್ನ ರಿಯಲ್ ಎಸ್ಟೇಟ್ ದಂಧೆಗೆ ಬಳಕೆ ಮಾಡುತ್ತಿದೆ ಎಂಬ ಮಾಹಿತಿ ಇದ್ದು, ಈ ಬಗ್ಗೆಯೂ ತನಿಖೆ ನಡೆಸಬೇಕಿದೆ ಎಂದು ಮನವಿ ಮಾಡಿದ್ದಾರೆ. ತಮ್ಮ ನಿರ್ಧಾರಕ್ಕೆ ಜಿಲ್ಲೆಯ ರಾಜ್ಯಸಭಾ ಸದಸ್ಯರು, ಜನಪ್ರತಿನಿಧಿಗಳು ಕೂಡ ಸಮ್ಮತಿ ಸೂಚಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಇಡೀ ರಾಜ್ಯಕ್ಕೆ ಮಾದರಿಯಾಗಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

TAGGED:Anand SinghbengalurujindalPublic TVಆನಂದ್ ಸಿಂಗ್ಜಿಂದಾಲ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

bigg boss season 12 kannada Dhanush becomes captain for the second time
ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌
Cinema Latest Top Stories TV Shows
Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories

You Might Also Like

shivananda patil handloom mela
Bengaluru City

ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ

Public TV
By Public TV
36 seconds ago
Raichuru Ambadevi Fair
Districts

400 ವರ್ಷಗಳ ಇತಿಹಾಸವಿರುವ ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಘಾಟು – ಸಾಧು ಸಂತರಿಗೆ, ಭಕ್ತರಿಗೂ ಕಿಕ್

Public TV
By Public TV
12 minutes ago
gold in india
Latest

ದೇಶದ ಜಿಡಿಪಿಗಿಂತಲೂ ಹೆಚ್ಚು ಮೌಲ್ಯದ ಚಿನ್ನ ಹೊಂದಿದ್ದಾರೆ ಭಾರತೀಯರು!

Public TV
By Public TV
26 minutes ago
Ballari 1
Bellary

Video | ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಂದೂಡಿಕೆ

Public TV
By Public TV
9 hours ago
Madikeri
Districts

Kodagu | ಕಾವೇರಿ ನದಿ ತಟದಲ್ಲಿರೋ ನಿವಾಸಿಗಳ ಬದುಕು ಇಂದಿಗೂ ಅತಂತ್ರ

Public TV
By Public TV
9 hours ago
Park
Bengaluru City

ಬೆಂಗಳೂರಿನಲ್ಲಿ 250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್‌ ಒಪ್ಪಿಗೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?