ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಣ-ಸಚಿವ ಅನಂತ್ ಕುಮಾರ್ ಹೆಗಡೆ ಹೀಗಂದ್ರು

Public TV
1 Min Read
ANANTH KUMAR HEGDE

ದಾವಣಗೆರೆ: ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಬೆಳಗಾಗಿ ಜಿಲ್ಲಾಡಳಿತ ವಿಶೇಷ ಅತಿಥಿಯಾಗಿ ಹೆಸರು ಮುದ್ರಿಸಿದ್ದಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಜಿಲ್ಲೆಯ ಚನ್ನಗಿರಿಯಲ್ಲಿ ತುಮ್ಕೋಸ್ ಅಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಬೇಡಿ ಎಂದು ಮನವಿ ಮಾಡಿದ್ದೆ. ಆದರೂ ಹಾಕಿದ್ದಾರೆ. ಕಾರ್ಯಕ್ರಮಕ್ಕೆ ಹೋಗುತ್ತೇನೋ, ಇಲ್ಲವೋ ಕಾದು ನೋಡಿ ಅಂತ ಹೇಳಿದ್ದಾರೆ.

ಇದನ್ನೂ ಓದಿ:  ಟಿಪ್ಪು ಜಯಂತಿ ಆಮಂತ್ರಣದಲ್ಲಿ ನನ್ನ ಹೆಸರು ಹಾಕ್ಬೇಡಿ: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಪತ್ರ  

ANANTH HEGADE

ಸಂಸದ ಸುರೇಶ ಅಂಗಡಿ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮನವಿಯನ್ನು ಪರಿಗಣಿಸದೆ ಟಿಪ್ಪು ಜಯಂತಿಗೆ ವಿಶೇಷ ಆಮಂತ್ರಿತರು ಎಂದು ಬೆಳಗಾವಿ ಜಿಲ್ಲಾಡಳಿತ ಆಮಂತ್ರಣ ನೀಡಿದೆ. ಅಲ್ಲದೆ, ಆಮಂತ್ರಣ ಪತ್ರಿಕೆಯಲ್ಲೂ ಹೆಸರು ಮುದ್ರಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಹೆಗಡೆ ಟಿಪ್ಪು ಜಯಂತಿಯಲ್ಲಿ ಭಾಗವಹಿಸುವ ಬಗ್ಗೆ ಸ್ಪಷ್ಟ ಪ್ರತಿಕ್ರಿಯೆ ನೀಡಲಿಲ್ಲ.

ಇದನ್ನೂ ಓದಿ: ಆಹ್ವಾನಪತ್ರಿಕೆಯಲ್ಲಿ ಹೆಸರು ಹಾಕ್ಸೋದು ಪ್ರೋಟೋಕಾಲ್, ಬರೋದು ಬಿಡೋದು ಸಚಿವರಿಗೆ ಬಿಟ್ಟಿದ್ದು- ಸಿಎಂ

ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಟಿಪ್ಪು ಜಯಂತಿ ಆಮಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಬೇಡಿ ಅಂದ್ರೂ ಹಾಕಿದ್ದಾರೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಟಿಪ್ಪುವಿನ ಜನ್ಮ ಜಾಲಾಡುತ್ತೇನೆ ಅಂತ ಸಚಿವರು ಹೇಳಿದ್ದರು.

ANANTH HEGADE 2

ANANTH HEGADE 1

CM ANANTH

KWR ANANTHKUMAR 1

Share This Article
Leave a Comment

Leave a Reply

Your email address will not be published. Required fields are marked *