Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ಕ್ಷಮೆ ಕೇಳಿದ ಅನಂತ್ ಕುಮಾರ್ ಹೆಗ್ಡೆ: ವಿಡಿಯೋ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭೆಯಲ್ಲಿ ಕ್ಷಮೆ ಕೇಳಿದ ಅನಂತ್ ಕುಮಾರ್ ಹೆಗ್ಡೆ: ವಿಡಿಯೋ ನೋಡಿ

Latest

ಲೋಕಸಭೆಯಲ್ಲಿ ಕ್ಷಮೆ ಕೇಳಿದ ಅನಂತ್ ಕುಮಾರ್ ಹೆಗ್ಡೆ: ವಿಡಿಯೋ ನೋಡಿ

Public TV
Last updated: December 28, 2017 1:44 pm
Public TV
Share
3 Min Read
ANANTHKUMAR HEGDE COLLAGE
SHARE

ನವದೆಹಲಿ: ಜಾತ್ಯತೀತ ಮತ್ತು ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಲೋಕಸಭಾ ಕಲಾಪದಲ್ಲಿ ಕ್ಷಮೆ ಕೇಳಿ ವಿವಾದಕ್ಕೆ ಪೂರ್ಣವಿರಾಮ ಹಾಕಿದ್ದಾರೆ.

ಬುಧವಾರ ಸಂಪುಟದಿಂದ ಹೆಗ್ಡೆಯನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದ ಪ್ರತಿಪಕ್ಷಗಳ ಸದಸ್ಯರು ಗುರುವಾರ ಲೋಕಸಭಾ ಕಲಾಪ ಆರಂಭವಾಗುತ್ತಲೇ ಮತ್ತೆ ಅನಂತ್ ಕುಮಾರ್ ಹೆಗ್ಡೆ ವಿಚಾರವನ್ನು ಎತ್ತಿ ಆಕ್ಷೇಪ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಅನಂತ್ ಕುಮಾರ್ ಹೆಗ್ಡೆ ಅವರೇ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡುತ್ತಾರೆ ಎಂದು ಹೇಳಿದರು. ನಂತರ ಭಾಷಣ ಆರಂಭಿಸಿದ ಅನಂತ್ ಕುಮಾರ್ ಹೆಗ್ಡೆ, ಅಧ್ಯಕ್ಷರೇ ನಿಮ್ಮ ಮೂಲಕ ನಾನು ಸ್ಪಷ್ಟಪಡಿಸುತ್ತೇನೆ. ಸಂವಿಧಾನ, ಸಂಸತ್ ಹಾಗೂ ಅಂಬೇಡ್ಕರ್ ವಿಚಾರದಲ್ಲಿ ನನ್ನ ನಿಷ್ಟೆ ಕಡಿಮೆ ಇಲ್ಲ. ಈ ವಿಚಾರಕ್ಕೆ ಯಾವುದೇ ಪ್ರಶ್ನಾರ್ಥಕ ಚಿಹ್ನೆ ಹಾಕುವ ಅಗತ್ಯವಿಲ್ಲ. ಒಬ್ಬ ನಾಗರಿಕನಾಗಿ ನಾನು ಈ ಸಂವಿಧಾನದ ವಿರುದ್ಧ ಹೋಗಲು ಸಾಧ್ಯವಿಲ್ಲ ಎಂದು ಹೇಳಲಷ್ಟೇ ಸಾಧ್ಯ ಎಂದು ಹೇಳಿದರು.

ANANTHKUMAR HEGDE 3

ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ರೀತಿ ಹೇಳಿಕೆ ನೀಡಿದ್ದು ಸರಿಯಲ್ಲ, ಕ್ಷಮೆ ಕೇಳುವಂತೆ ಪಟ್ಟು ಹಿಡಿದರು. ಇದಕ್ಕೆ ಉಳಿದ ವಿರೋಧ ಪಕ್ಷಗಳ ನಾಯಕರು ಸಹ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಸುಮಿತ್ರಾ ಮಹಾಜನ್ ಹೆಗ್ಡೆ ಅವರನ್ನು ಉದ್ದೇಶಿಸಿ, ನಿಮ್ಮ ಮನದಲ್ಲಿ ಅಂಬೇಡ್ಕರ್ ವಿರುದ್ಧ ಯಾವುದೇ ಕೆಟ್ಟ ಅಭಿಪ್ರಾಯ ಇಲ್ಲ. ಜೀವನದಲ್ಲಿ ನೀವು ಆಡಿದ ಕೆಲವೊಂದು ಮಾತು ನಿಮಗೆ ಸರಿ ಎನಿಸುತ್ತದೆ. ಆದರೆ ನಿಮ್ಮ ಮುಂದೆ ಇರುವವರಿಗೆ ಅದು ನೋವಾಗುತ್ತದೆ. ಅಷ್ಟೇ ಅಲ್ಲದೇ ಕ್ಷಮೆ ಕೇಳುವುದರಿಂದ ಯಾರೂ ಚಿಕ್ಕವರಾಗುವುದಿಲ್ಲ. ಬೇರೆಯವರಿಗೆ ನೋವಾಗಿರುವುದರಿಂದ ನೀವು ಕ್ಷಮೆ ಕೇಳಬಹುದು. ಇದು ಸದನ ಇಲ್ಲಿ ನಾವು ಎಲ್ಲರೂ ಒಗ್ಗಟಾಗಿ ಇರುತ್ತೇವೆ ಎಂದು ಹೇಳಿದರು.

ANANTHKUMAR HEGDE 2

ಇದಕ್ಕೆ ಅನಂತ್ ಕುಮಾರ್ ಹೆಗ್ಡೆ, ನಾನು ಆಡಿದ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಸಂವಿಧಾನವನ್ನು ಗೌರವಿಸುತ್ತೇನೆ ಅಷ್ಟೆ ಅಲ್ಲೇ ಅದರಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಅವರಲ್ಲಿ ನಾನು ಕ್ಷಮೆ ಕೇಳಲು ನನಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿ ಕುಳಿತುಕೊಂಡರು.

ಹೆಗ್ಡೆ ಹೇಳಿದ್ದು ಏನು?
ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅನಂತ್ ಕುಮಾರ್ ಹೆಗ್ಡೆ, ಇತ್ತೀಚೆಗೆ ಹೊಸದೊಂದು ಸಂಪ್ರದಾಯ ಬಂದುಬಿಟ್ಟಿದೆ. ಅದ್ಯಾವುದೆಂದರೆ ಜಾತ್ಯತೀತರು. ನಾನೊಬ್ಬ ಹಿಂದೂ ಅಥವಾ ಮುಸ್ಲಿಂ ಅಥವಾ ಕ್ರೈಸ್ತ, ಲಿಂಗಾಯತ ಅಂತಾ ಯಾರದ್ರೂ ತಮ್ಮ ಧರ್ಮವನ್ನು ಹೆಮ್ಮೆಯಿಂದ ಹೇಳಿಕೊಂಡರೆ ನನಗೆ ಖುಷಿ ಅನಿಸುತ್ತೆ. ಯಾಕಂದ್ರೆ ಅವರಿಗೆ ಅವರ ರಕ್ತದ ಅರಿವಿದೆ ಎಂದರ್ಥ. ಆದ್ರೆ ಈ ಜಾತ್ಯತೀತರು ಅಂತ ಕರೆದುಕೊಳ್ಳುತ್ತಾರೆ ಅಲ್ವ. ಅಂಥವರು ಅಪ್ಪ-ಅಮ್ಮನ ಗುರುತು ಇಲ್ಲದೇ ಇರುವ ರಕ್ತವನ್ನು ಹೊಂದಿರುವವರು ಜಾತ್ಯತೀತರು ಅಂತ ಕರೆದುಕೊಳ್ಳುತ್ತಾರೆ ಎಂದು ಲೇವಡಿ ಮಾಡಿದ್ದರು.

vlcsnap 2017 12 28 13h34m01s158

ಜಾತ್ಯತೀತರಿಗೆ ತಮ್ಮ ಗುರುತೇ ತಮಗಿರುವುದಿಲ್ಲ. ಮಾತು ಎತ್ತಿದ್ರೆ ದೊಡ್ಡ ವಿಚಾರವಾದಿಗಳು. ಅಪ್ಪ-ಅಮ್ಮನ ಪರಿಚಯ ಇಲ್ಲದೇ ಇರೋ ಇವರುಗಳು ದೊಡ್ಡ ವಿಚಾರವಾದಿಗಳು. ಇವರನ್ನು ಜಾತಿಯ ಜೊತೆ ಕೂರಿಸಿಕೊಳ್ಳುತ್ತಿರೋ ಅಥವಾ ನಿಮ್ಮ ಕುಲದ ಜೊತೆ ಕೂರಿಸಿಕೊಳ್ಳುತ್ತಿರೋ ಗುರುತಿಸಿಕೊಳ್ಳಿ ಸ್ವಾಮಿ. ನಿಮಗೆ ನಿಮ್ಮ ರಕ್ತದ ಪರಿಚಯ ಇದ್ದಿದ್ದೇ ಆದ್ರೆ ನಿಮ್ಮ ಕಾಲು ಮುಟ್ಟಿ ನಮಸ್ಕರಿಸುತ್ತೇನೆ. ಆದ್ರೆ ಜಾತ್ಯತೀತರು ಅಂತ ಹೇಳಿದ್ರೆ ಮಾತ್ರ ಸ್ವಲ್ಪ ನೀವು ಯಾರು ಅಂತ ಸಂಶಯ ಬರುತ್ತೆ ಅಂತ ಹೇಳಿದ್ದರು.

ಹೌದು. ಸಂವಿಧಾನ ಜಾತ್ಯತೀತರು ಅಂತ ಹೇಳಿದೆ. ನಾವು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದ್ರೆ ಸಂವಿಧಾನ ಕಾಲಕ್ಕೆ ತಕ್ಕಂತೆ ಅದೆಷ್ಟೋ ಬಾರಿ ಬದಲಾಗಿದೆ. ಮುಂದಿನ ದಿನಗಳಲ್ಲೂ ಬದಲಾಗುತ್ತೆ. ನಿಮಗೆ ಸಂಪ್ರದಾಯ, ಪರಂಪರೆ, ಸಂಸ್ಕೃತಿ ಇದರ ಐತಿಹಾಸಿಕ ಹೆಜ್ಜೆಯ ಗುರುತುಗಳೇ ನಿಮಗೆ ಗೊತ್ತಿಲ್ಲ. ನೀವು ಮೂರ್ಖರು. ಜಗತ್ತಿನ ಭೂಪಟಗಳು, ಸಾಮಾಜಿಕ ಚಿತ್ರಣ ಬದಲಾಗಿ ಹೋಗಿದೆ. ಹೀಗಾಗಿ ನಾವು ಸಂವಿಧಾನವನ್ನು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.

ಯಾರಿಗೆ ಸಭ್ಯತೆಯ ಅರಿವಿದೆ ಅಂತವರು ಸಂಸ್ಕಾರ ಎಂಬ ಶಬ್ಧವನ್ನು ಒಪ್ಪಿಕೊಳ್ಳಲೇ ಬೇಕು. ಆದ್ರೆ ಯಾರಿಗೆ ಈ ಶಬ್ಧ ಪರಿಚಯ ಇಲ್ಲವೋ ಅಥವಾ ಒಳ್ಳೆದು ಮತ್ತು ಕೆಟ್ಟದರ ಮಧ್ಯೆ ಇರೋ ಕಂದಕ ಗೊತ್ತಿಲ್ಲವೋ ಅಂತವರು ಶಿಕ್ಷಣವೇ ಸಂಸ್ಕಾರ ಅಂದುಕೊಂಡಿರುತ್ತಾರೆ. ಅಂತಹ ಮೂಢಮತಿಗಳ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಹೇಳಿದ್ದರು.

https://www.youtube.com/watch?v=_3Hz_6SnMAE

vlcsnap 2017 12 28 13h34m07s211

vlcsnap 2017 12 28 13h34m27s160

TAGGED:assemblyContraversial StatementloksabhaNew DelhiOpinionPublic TVಅಭಿಪ್ರಾಯನವದೆಹಲಿಪಬ್ಲಿಕ್ ಟಿವಿಲೋಕಸಭೆವಿವಾದ್ಮಾಕ ಹೇಳಿಕೆಸಂವಿಧಾನ
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

Siddaramaiah Congress D.K Shivakumar
Bengaluru City

ಸದ್ಯಕ್ಕಿಲ್ಲ ಸಿಎಂ ಡೆಲ್ಲಿ ಟೂರ್.. ಜ.27ರ ಬಳಿಕ‌ ಪ್ಲ್ಯಾನ್, ಡಿಕೆಶಿಗೆ ರಾಹುಲ್ ಸಿಗ್ತಾರಾ?

Public TV
By Public TV
3 minutes ago
KN Rajanna
Bengaluru City

ನಾಯಕತ್ವ ಗೊಂದಲದ ಬಗ್ಗೆ ರಾಹುಲ್ ಗಾಂಧಿ ಇತ್ಯರ್ಥ ಮಾಡಲಿ: ಕೆ.ಎನ್.ರಾಜಣ್ಣ

Public TV
By Public TV
20 minutes ago
CT RAVI
Bengaluru City

ಪ.ಬಂಗಾಳ, ಅಸ್ಸಾಂ ಚುನಾವಣೆಗೆ ಎಷ್ಟು ದುಡ್ಡು ಕೊಡ್ತೀರಾ ಅಂತ ಕೇಳಲು CM-DCMಗೆ ರಾಹುಲ್ ಬುಲಾವ್: ಸಿ.ಟಿ.ರವಿ

Public TV
By Public TV
32 minutes ago
first wife was brutally murdered for questioning her husbands second marriage in Alur Hassan 1
Crime

ಹಾಸನ | ಎರಡನೇ ಮದ್ವೆ ಯಾಕಾದೆ? – ಪ್ರಶ್ನಿಸಿದ ಮೊದಲ ಪತ್ನಿಯ ಬರ್ಬರ ಹತ್ಯೆ

Public TV
By Public TV
33 minutes ago
supreme Court 1
Court

ಬೀದಿನಾಯಿಗಳ ಸಮಸ್ಯೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲ – ಸುಪ್ರೀಂ ಆಕ್ರೋಶ

Public TV
By Public TV
51 minutes ago
Shivalingegowda
Bengaluru City

ಕುಮಾರಸ್ವಾಮಿ ಎರಡು ಬಾರಿ ಲೀಸ್ ಬೇಸ್‌ನಲ್ಲಿಯೇ ಸಿಎಂ ಆಗಿದ್ದು: ಸಿದ್ದು ಸಮರ್ಥಿಸಿ ಶಿವಲಿಂಗೇಗೌಡ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?