Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ನೆಲ-ಜಲ ವಿಚಾರಗಳಲ್ಲಿ ಅನಂತ್ ಕುಮಾರ್ ಗಟ್ಟಿ ನಿಲುವು ತಳೆದಿದ್ದರು: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ನೆಲ-ಜಲ ವಿಚಾರಗಳಲ್ಲಿ ಅನಂತ್ ಕುಮಾರ್ ಗಟ್ಟಿ ನಿಲುವು ತಳೆದಿದ್ದರು: ಬೊಮ್ಮಾಯಿ

Bengaluru City

ರಾಜ್ಯದ ನೆಲ-ಜಲ ವಿಚಾರಗಳಲ್ಲಿ ಅನಂತ್ ಕುಮಾರ್ ಗಟ್ಟಿ ನಿಲುವು ತಳೆದಿದ್ದರು: ಬೊಮ್ಮಾಯಿ

Public TV
Last updated: May 6, 2022 6:12 pm
Public TV
Share
3 Min Read
ananth prerana kendra basavaraj bommai 2
SHARE

ಬೆಂಗಳೂರು: ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತ್ ಕುಮಾರ್ ಅವರು ರಾಜ್ಯದ ನೆಲ ಜಲ ವಿಷಯಗಳಲ್ಲಿ ರಾಜ್ಯ ಹಾಗೂ ಕನ್ನಡ ಜನರ ಪರ ಗಟ್ಟಿ ನಿಲುವು ಹೊಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಬೆಂಗಳೂರಿನ ಜಯನಗರ ಬಡಾವಣೆಯಲ್ಲಿರುವ ಅನಂತ್ ಕುಮಾರ್ ಅವರ ಕಚೇರಿಯಲ್ಲಿ ಅನಂತ ಪ್ರೇರಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನ ಮೆಟ್ರೋ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗ, ಕೃಷ್ಣಾ ಮೇಲ್ದಂಡೆ ಯೋಜನೆ, ಕಾವೇರಿ ಜಲ ವಿಷಯದಗಳಲ್ಲಿ ಬಿಗಿ ನಿಲುವಿನಿಂದ ರಾಜ್ಯಕ್ಕೆ ಪರಿಹಾರ ಕೊಡಿಸುವಲ್ಲಿ ಅನಂತ್ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಕೇಂದ್ರದಿಂದ ಆಗಬೇಕಾದ ಬೆಂಗಳೂರಿನ ಹಾಗೂ ರಾಜ್ಯದ ಎಲ್ಲಾ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಹಕಾರ ನೀಡಿದ್ದರು ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯದಲ್ಲಿ ಯುವ ನಾಯಕತ್ವ ಬರಲಿದೆ, ಬ್ಯಾಚ್ ವೈಸ್ ಪಕ್ಷಕ್ಕೆ ಸೇರ್ಪಡೆ ಎಂದ ಸಿಎಂ

ananth prerana kendra basavaraj bommai 1

ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದ ಅವರ ಸ್ಥಾನಮಾನಗಳು ನಮ್ಮೊಂದಿಗಿನ ಸ್ನೇಹವನ್ನು ಬದಲಾಯಿಸಿರಲಿಲ್ಲ. ಕೃಷ್ಣಾ ಟ್ರಿಬ್ಯುನಲ್ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಸಮ್ಮತವಾಗಿ ಕರ್ನಾಟಕದ ಪರವಾಗಿ ಹೋರಾಟ ಮಾಡಿ, ಕರ್ನಾಟಕದ ಹಿತ ಕಾಪಾಡಿದ್ದಾರೆ. ಈ ಮೂಲಕ ರಾಜ್ಯದ ಆಪತ್ತನ್ನು ಅವರು ತಪ್ಪಿಸಿದರು ಎಂದು ತಿಳಿಸಿದರು.

ಆತ್ಮೀಯ ಸಂಗಾತಿ:
ನನ್ನ ಸಾರ್ವಜನಿಕ ಹೋರಾಟದ ಅತ್ಯಂತ ಆತ್ಮೀಯ ಸಂಗಾತಿ, ಜನಮೆಚ್ಚಿದ ನಾಯಕರಾದ ಅನಂತ್ ಕುಮಾರ್ ಅವರು ಎಲ್ಲರಿಗೂ ಪ್ರೇರಣೆ. ಕರ್ನಾಟಕ ಎಂದೂ ಅನಂತ್ ಕುಮಾರ್ ಅವರನ್ನು ಮರೆಯಲು ಸಾಧ್ಯವಿಲ್ಲ. ನಮ್ಮ ಬದುಕಿನಲ್ಲಿ ಅವರು ಅನಂತವಾಗಿದ್ದಾರೆ ಎಂದರು.

ananth prerana kendra basavaraj bommai

ನೈಜ ನಾಯಕ:
ಅನಂತ್ ಕುಮಾರ್ ಒಬ್ಬ ನೈಜ ನಾಯಕ. ಯಾವುದೇ ಸ್ಥಿತಿಯಲ್ಲಿ, ಹಂತದಲ್ಲಿ ನಾಯಕತ್ವವನ್ನು ವಹಿಸುವವರು ನೈಜ ನಾಯಕ ಎನಿಸಿಕೊಳ್ಳುತ್ತಾರೆ. ವಿದ್ಯಾರ್ಥಿ ದೆಸೆಯಿಂದ ವಿದ್ಯಾರ್ಥಿ ಆಂದೋಲನದಲ್ಲಿ, ಮುಂದೆ ಎಬಿವಿಪಿ ಸಂಘಟನೆಗಳಲ್ಲಿ ನಾಯಕತ್ವ ವಹಿಸಿದರು. ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ನಾಯಕತ್ವ ವಹಿಸಿದರು. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ, ಬಲಪಡಿಸುವುದರಲ್ಲಿ ನಾಯಕತ್ವ ವಹಿಸಿದರು. ಹತ್ತು ಜನ ಇದ್ದಾಗಲೂ, ಹತ್ತು ಲಕ್ಷ ಜನ ಇದ್ದಾಗಲೂ ನಾಯಕತ್ವ ವಹಿಸಿದ್ದರು. ಬಹಳ ಅಪರೂಪದ ನಾಯಕತ್ವ ಅವರದ್ದು ಎಂದು ಹೊಗಳಿದರು. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ನಾಲ್ಕು ದಿನ ಗುಡುಗು ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ

ananth prerana kendra 4

ಆತ್ಮೀಯ ಒಡನಾಟ:
ಯಾವ ಉದ್ದೇಶಕ್ಕಾಗಿ ಬದುಕು ನಡೆಸಿದರೊ ಅದಕ್ಕಾಗಿ ಅವರು ಹೋರಾಟವನ್ನು ಮಾಡಿದವರು ಅನಂತ್ ಕುಮಾರ್. ಚಿಕ್ಕಂದಿನಿಂದಲೂ ನಮ್ಮಿಬ್ಬರ ಸ್ನೇಹವಿತ್ತು. ಅವರು ನನ್ನ ಸಹಪಾಠಿಯಾಗಿದ್ದರು. ನಮ್ಮ ಮಧ್ಯೆ ಆತ್ಮೀಯ ಒಡನಾಟವಿತ್ತು. ನಮ್ಮ ನಡುವೆ ಯಾರೇ ಕಾಲೇಜಿಗೆ ತಡವಾಗಿ ಹೋದರೂ ಒಬ್ಬರು ಬೆಂಚನ್ನು ಕಾಯ್ದಿರಿಸುತ್ತಿದ್ದೆವು. ತುರ್ತು ಪರಿಸ್ಥಿತಿ ಘೋಷಣೆಯಾದ ಸಂದರ್ಭದಲ್ಲಿ ವಿದ್ಯಾರ್ಥಿ ಕ್ರಿಯಾ ಸಮಿತಿ ರೂಪಿಸಿ ಅನಂತ್ ಕುಮಾರ್ ಅವರನ್ನು ಕಾರ್ಯದರ್ಶಿಗಳನ್ನಾಗಿ ಮಾಡಿದೆವು. ತುರ್ತು ಪರಿಸ್ಥಿತಿ ವಿರುದ್ಧ ದೊಡ್ಡ ಪ್ರಮಾಣದ ಹೋರಾಟ ಮಾಡುವಂತಿರಲಿಲ್ಲ. ಆದರೆ ಅಂಥ ಸಂದರ್ಭದಲ್ಲಿಯೂ ನೂರಾರು ವಿದ್ಯಾರ್ಥಿಗಳನ್ನು ಸೇರಿಸಿ ದೊಡ್ಡ ಹೋರಾಟ ಮಾಡಲಾಯಿತು. ಲಾಠಿ ಚಾರ್ಜ್ ಆಗಿ ಪೊಲೀಸರು ಅನಂತ್ ಕುಮಾರ್ ಅವರನ್ನು ಬಂಧಿಸಿದರು. ಇದರಿಂದಾಗಿ ಒಂದು ವರ್ಷ ವಿದ್ಯಾರ್ಥಿ ಜೀವನ ವ್ಯರ್ಥವಾಯಿತು. ನಂತರ ಕಾನೂನಿನ ವಿದ್ಯಾರ್ಥಿಯಾದರು. ಆ ಸಂದರ್ಭದಲ್ಲಿ ಅವರಲ್ಲಿ ನಾಯಕತ್ವದ ವಿಚಾರ ಹಾಗೂ ಗುಣಗಳನ್ನು ಕಂಡೆ. ದೂರದೃಷ್ಟಿ ಇದ್ದ ನಾಯಕರು ಅನಂತ್ ಕುಮಾರ್ ಎಂದರು.

ananth prerana kendra 3

ಪ್ರೀತಿಯ ಗಾಳ:
ಗಂಭೀರ ರಾಜಕಾರಣದ ಜೊತೆಗೆ ಹಾಸ್ಯ ಪ್ರಜ್ಞೆಯೂ ಅವರಲ್ಲಿತ್ತು. 30-40 ವರ್ಷ ಒಟ್ಟಿಗಿದ್ದರೂ, ಒಂದು ದಿನವೂ ದುಃಖಿತರಾಗಿ ಅಥವಾ ಚಿಂತಾಕ್ರಾಂತರಾಗಿ ಎಂದೂ ಇರಲಿಲ್ಲ. ಎಂಥಾ ಸ್ಥಿತಿ ಎದುರಾದರೂ ಸ್ಥಿತಪ್ರಜ್ಞತೆಯಿಂದ ಎಲ್ಲವನ್ನೂ ಎದುರಿಸುತ್ತಿದ್ದರು. ನಗುನಗುತ್ತಾ ಇರುತ್ತಿದ್ದರು. ಸಮಸ್ಯೆಗಳನ್ನು ಬಗೆಹರಿಸಲು ಏನು ಮಾಡಬೇಕೋ ಅದನ್ನು ಮಾಡಬೇಕು ಎನ್ನುತ್ತಿದ್ದರು. ಇನ್ನೊಬ್ಬರಿಗೆ ಊಟ ಹಾಕಿಸುವುದರಲ್ಲಿ ಅವರಿಗೆ ಬಹಳ ಆಸಕ್ತಿ. ನನ್ನ ಬಗ್ಗೆ ಬಹಳ ಪ್ರೀತಿ. ಅವರ ಪ್ರೀತಿಯ ಗಾಳದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಂತ್ರಿ ಸ್ಥಾನ ನಮ್ಮ ಸಂಬಂಧವನ್ನು ಎಂದೂ ಬದಲಾಯಿಸಲಿಲ್ಲ ಎಂದು ಸ್ಮರಿಸಿದರು.

ತೇಜಸ್ವಿನಿ ಅನಂತ್ ಕುಮಾರ್ ಅವರ ಸಾಮಾಜಿಕ ಚಟುವಟಿಕೆಗಳು, ಅದಮ್ಯಚೇತನದ ಕೆಲಸ, ಸಸ್ಯಾಗ್ರಹ ಕಾರ್ಯಕ್ರಮ ಎಲ್ಲವೂ ಮುಂದುವರಿದಿರುವುದು ಶ್ಲಾಘನೀಯ. ಅನಂತ್ ಕುಮಾರ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಎಲ್ಲಾ ಸಹಕಾರ ನೀಡುತ್ತದೆ ಎಂದರು.

TAGGED:Ananth Kumarananth prerana kendraBasavaraj Bommaibengaluruಅನಂತ ಪ್ರೇರಣಾ ಕೇಂದ್ರಅನಂತ್ ಕುಮಾರ್ಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
23 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
32 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
1 hour ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
1 hour ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?