Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಂತ ಪ್ರೇರಣಾ ಕೇಂದ್ರ ನಾಳೆ ಲೋಕಾರ್ಪಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನಂತ ಪ್ರೇರಣಾ ಕೇಂದ್ರ ನಾಳೆ ಲೋಕಾರ್ಪಣೆ

Bengaluru City

ಅನಂತ ಪ್ರೇರಣಾ ಕೇಂದ್ರ ನಾಳೆ ಲೋಕಾರ್ಪಣೆ

Public TV
Last updated: May 5, 2022 1:27 pm
Public TV
Share
4 Min Read
ananth prerana kendra 4
SHARE

– ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಆದರ್ಶಗಳನ್ನು ಯುವಪೀಳಿಗೆಗೆ ಪರಿಚಯಿಸುವ ಉದ್ದೇಶ
– ಸೌತ್ ಎಂಡ್ ವೃತ್ತದಲ್ಲಿದ್ದ ಅನಂತಕುಮಾರ್ ಕಚೇರಿಯನ್ನು ‘ಅನಂತ ಪ್ರೇರಣಾ ಕೇಂದ್ರ’ ವನ್ನಾಗಿ ಪರಿವರ್ತನೆ
– ಮೇ6 ರಂದು ಬೆಳಿಗ್ಗೆ 10.30 ಕ್ಕೆ ಉದ್ಘಾಟನೆ – ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರು ಭಾಗಿ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಅವರ ಆದರ್ಶಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರಚಿಸಲಾಗಿರುವ ಅನಂತ ಪ್ರೇರಣಾ ಹೆಸರಿನ ಮಾಹಿತಿ ಕೇಂದ್ರ ಮೇ 6, 2022 ರಂದು ಬೆಳಿಗ್ಗೆ 10.30 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್ ತಿಳಿಸಿದ್ದಾರೆ.

Tejaswini Ananth Kumar 1

ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ನಾಡಸೇವೆಯಲ್ಲಿ ತೊಡಗಿಕೊಳ್ಳಬಯಸುವ ಯುವ ಶಕ್ತಿಗಳಿಗೆ ದಾರಿದೀಪವಾಗಲೆಂಬ ಸದುದ್ದೇಶದಿಂದ ಸೌತ್ ಎಂಡ್ ವೃತ್ತದಲ್ಲಿ ಈ ಹಿಂದೆ ಇದ್ದ ಅನಂತಕುಮಾರ್ ಅವರ ಕಚೇರಿಯನ್ನು ‘ಅನಂತ ಪ್ರೇರಣಾ ಕೇಂದ್ರ’ ವನ್ನಾಗಿಸಲಾಗಿದೆ. ಅನಂತಕುಮಾರರ ಬದುಕಿನ ಸಾರ್ಥಕತೆಯನ್ನು ಅರಿತವರಿಗೂ, ನಾಯಕತ್ವದ ಬೆಳವಣಿಗೆಯ ರೂಪರೇಷೆಯನ್ನು ಗುರುತಿಸಲೆಳಸುವವರಿಗೂ, ನಾಡ ಸೇವೆಯಲ್ಲಿ ತೊಡಗಿಕೊಳ್ಳಬಯಸುವ ಯುವಶಕ್ತಿಗಳಿಗೂ ದಾರಿದೀಪವಾಗಲೆಂಬ ಮಹದುದ್ದೇಶದಿಂದ ಅನಂತಕುಮಾರರ ಜೀವನ, ವ್ಯಕ್ತಿತ್ವ, ಸಾಧನೆಗಳನ್ನು ಪರಿಚಯಿಸುವ ಮಾಹಿತಿ ಕೇಂದ್ರವೊಂದನ್ನು ತೆರೆಯಲಾಗಿದೆ. ಅನಂತಕುಮಾರರ ಆಶೋತ್ತರಗಳನ್ನು ಮುಂದುವರಿಸಿ ನಿರ್ವಹಿಸುವ ಹೊಣೆ ಹೊತ್ತ ಅದಮ್ಯ ಚೇತನ ಸಂಸ್ಥೆಯ ಸಹಯೋಗದಲ್ಲಿ ಈ ಕೇಂದ್ರವು ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಕಲಿ ಅಧಿಕಾರಿಗಳಿಂದ ಹಣ ವಸೂಲಿ – ಕರೆ ಬಂದರೆ ದೂರು ದಾಖಲಿಸುವಂತೆ ಎಸಿಬಿ ಪ್ರಕಟಣ

ananth prerana kendra 2

ಅನಂತ ಪ್ರೇರಣಾ ಕೇಂದ್ರದ ಅಂಶಗಳು:
ಛಾಯಾಚಿತ್ರ ಪ್ರದರ್ಶಿನಿ:
ಈ ಪ್ರೇರಣಾ ಕೇಂದ್ರದಲ್ಲಿ ಅನಂತಕುಮಾರ್ ಅವರ ಬಾಲ್ಯದಿಂದ ಮೊದಲುಗೊಂಡು ಎಬಿವಿಪಿ ಕಾರ್ಯಕರ್ತರಾಗಿ ಅವರು ಗಳಿಸಿಕೊಂಡ ಅನುಭವ. ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಬೆಳೆಯಲು ಅವರು ದುಡಿದ ಪರಿ, ಆರು ಬಾರಿ ಸಂಸದರಾಗಿ, ಕೇಂದ್ರದಲ್ಲಿ ವಿವಿಧ ಖಾತೆಗಳ ಸಚಿವರಾಗಿ ಅನಂತಕುಮಾರ್ ಸಾಧಿಸಿದ ಕಾರ್ಯಗಳು, ಅಚ್ಚರಿ ಮೂಡಿಸುವಂತೆ ಅವರು ನಾಯಕತ್ವದ ಸೋಪಾನಗಳನ್ನು ಏರಿ ನಿಂತ ರೀತಿ ಎಲ್ಲವನ್ನೂ ಛಾಯಾಚಿತ್ರಗಳ ಮೂಲಕ ಪ್ರದರ್ಶನದ ಮೂಲಕ ಪರಿಚಯಿಸಲಾಗುತ್ತಿದೆ. ಈ ಚಿತ್ರಗಳನ್ನು ಸವಿವರ ಅರ್ಥಮಾಡಿಕೊಳ್ಳಲು ಧ್ವನಿರೂಪದ ವ್ಯಾಖ್ಯಾನವುಳ್ಳ ಮೊಬೈಲ್ ಆಪ್ ಸೌಕರ್ಯವನ್ನೂ ವ್ಯವಸ್ಥೆಮಾಡಲಾಗುತ್ತಿದೆ.

ananth prerana kendra 3

ಗ್ರಂಥಭಂಡಾರ ಮತ್ತು ವಾಚನಾಲಯ:
ಅನಂತಪ್ರೇರಣಾ ಕೇಂದ್ರದ ಒಂದು ಭಾಗದಲ್ಲಿ ಸುಸಜ್ಜಿತ ಗ್ರಂಥಭಂಡಾರ ಮತ್ತು ಉಚಿತ ವಾಚನಾಲಯವನ್ನು ವ್ಯವಸ್ಥೆಮಾಡಲಾಗಿದೆ. ಸಾರ್ವಜನಿಕರೂ ವಿದ್ಯಾರ್ಥಿಗಳೂ ಇವುಗಳ ಪ್ರಯೋಜನ ಪಡೆದುಕೊಳ್ಳಬಹುದು. ಇಲ್ಲಿ ಅನಂತಕುಮಾರರ ಸ್ವಂತ ಸಂಗ್ರಹದಿಂದಲೂ ಇತರ ಮೂಲಗಳಿಂದಲೂ ಸಂಗ್ರಹಿಸಿದ ಉಪಯುಕ್ತ ಪುಸ್ತಕಗಳನ್ನು ಇಲ್ಲಿಯೇ ಉಚಿತವಾಗಿ ಅಧ್ಯಯನ ಮಾಡಲು ಅವಕಾಶವಿದೆ. ಮುಂದೆ, ಉದ್ಯೋಗಾಪೇಕ್ಷಿ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರತ್ಯೇಕ ವಿಭಾಗವನ್ನು ತೆರೆಯುವ ಉದ್ದೇಶವೂ ಇದೆ. ಇದನ್ನೂ ಓದಿ: ವಿದ್ಯುತ್ ಸಮಸ್ಯೆ – 1,100 ರೈಲುಗಳು ರದ್ದು

ananth prerana kendra 7

ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ:
ಸೌತ್ ಎಂಡ್ ವೃತ್ತದ ಪರಿಸರದಲ್ಲಿ ಅನೇಕ ಶಿಕ್ಷಣಸಂಸ್ಥೆಗಳಿದ್ದು ದೂರದೂರದಿಂದ ಇಲ್ಲಿಗೆ ಪ್ರತಿನಿತ್ಯ ಅನೇಕ ವಿದ್ಯಾರ್ಥಿಗಳು ಬರುತ್ತಾರೆ. ಇವರಲ್ಲಿ ಅನೇಕರಿಗೆ ಮಧ್ಯಾಹ್ನದ ಊಟಕ್ಕೆ ಬೇಕಾದ ಅನುಕೂಲವಿರುವುದಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಅದಮ್ಯ ಚೇತನದ ಸಹಯೋಗದೊಡನೆ ಪ್ರತಿನಿತ್ಯ ಮಧ್ಯಾಹ್ನದ ಭೋಜನವನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರೇರಣಾ ಕೇಂದ್ರದ ಮೇಲುಮಹಡಿಯ ಆವರಣದಲ್ಲಿ ಊಟದ ವಿತರಣೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

ananth prerana kendra

ಗಿಡ ವಿತರಣೆ:
ಸಸ್ಯಾಗ್ರಹ ಎಂಬ ಪರಿಕಲ್ಪನೆಯನ್ನು ಮುಂದಿಟ್ಟು ಅನಂತಕುಮಾರ್ ಬೆಂಗಳೂರು ಹಸಿರು ಪರಿಸರದ ಸ್ವಚ್ಛ ನಗರವಾಗಬೇಕೆಂಬ ಕನಸು ಕಂಡಿದ್ದವರು. ಅವರು ಪ್ರಾರಂಭಿಸಿದ ಹಸಿರು ಭಾನುವಾರ ಎಂಬ ಗಿಡ ನೆಡುವ ಕಾರ್ಯಕ್ರಮ 350 ಕ್ಕೂ ಹೆಚ್ಚು ವಾರಗಳಿಂದ ನಿರಂತರವಾಗಿ ನಡೆದುಬರುತ್ತಿದೆ. ತಮ್ಮ ಆವರಣದಲ್ಲಿ ಗಿಡ ನೆಟ್ಟು ಬೆಳೆಸಲು ಆಸಕ್ತಿಯುಳ್ಳ ಸಾರ್ವಜನಿಕರಿಗೆ ಗಿಡಗಳನ್ನು ಉಚಿತವಾಗಿ ವಿತರಿಸಲು ಪ್ರೇರಣಾ ಕೇಂದ್ರದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ananth prerana kendra 6

ಪ್ಲೇಟ್ ಬ್ಯಾಂಕ್:
ಹಸಿರು ಜೀವನ ಶೈಲಿಯ ಪ್ರತಿಪಾದಕರಾದ ಅನಂತಕುಮಾರ್ ಸಭೆ ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಖರೀದಿಯನ್ನು ವಿರೋಧಿಸಿ, ಮರುಬಳಸಬಹುದಾದ ಸ್ಟೀಲ್ ಲೋಟ ತಟ್ಟೆ ಚಮಚಗಳ ಬಳಕೆಗೆ ಪ್ರೇರಣೆ ನೀಡಿದ ಫಲವಾಗಿ ಅದಮ್ಯ ಚೇತನದಲ್ಲಿ ಪ್ಲೇಟ್ ಬ್ಯಾಂಕ್ ಯೋಜನೆ ಪ್ರಾರಂಭವಾಗಿದೆ. ಸಾರ್ವಜನಿಕರು ತಾವು ಏರ್ಪಡಿಸುವ ಸಮಾರಂಭಗಳಲ್ಲಿ ಬಳಕೆಗೆ ಇಲ್ಲಿಂದ ಲೋಟ ತಟ್ಟೆಗಳನ್ನು ಉಚಿತವಾಗಿ ಒಯ್ದು ಉಪಯೋಗಿಸಿ ಹಿಂತಿರುಗಿಸಬಹುದಾದ ಷರತ್ತು ಬದ್ಧ ಯೋಜನೆ ಇದಾಗಿದೆ. ಪ್ಲೇಟ್ ಬ್ಯಾಂಕಿನ ಒಂದು ಶಾಖೆಯನ್ನು ಪ್ರೇರಣಾ ಕೇಂದ್ರದ ಆವರಣದಲ್ಲಿ ತೆರೆಯಲಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಕಂದಾಯ ಇಲಾಖೆ ಅಸ್ತು

ananth prerana kendra 5

ಸಂಸ್ಕೃತಿ-ಪರಂಪರೆ ಪ್ರಸಾರ:
ಭಾರತೀಯ ಪರಂಪರೆ, ಸಂಸ್ಕೃತಿ, ಕಲೆ ಮೊದಲಾದವುಗಳ ಬಗ್ಗೆ ಅಪಾರ ಆಸಕ್ತಿಯುಳ್ಳವರಾಗಿದ್ದ ಅನಂತಕುಮಾರರ ಆಶಯಕ್ಕನುಗುಣವಾಗಿ ಈ ಪ್ರೇರಣಾ ಕೇಂದ್ರದಲ್ಲಿ ಮುಂಬರುವ ದಿನಗಳಲ್ಲಿ ಸಂಸ್ಕೃತಿ ಘಟಕವೊಂದನ್ನು ಪ್ರಾರಂಭಿಸಲು ಯೋಚಿಸಲಾಗುತ್ತಿದೆ. ಈ ಘಟಕವು ಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ನಿಯಮಿತವಾಗಿ ಹಮ್ಮಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು.

ದೇಶೀಯ ಪರಿಸರಸ್ನೇಹಿ ವಸ್ತುಬಳಕೆಗೆ ಪ್ರೋತ್ಸಾಹ:
ದೇಶೀಯವೂ ಪರಿಸರಕ್ಕೆ ಪೂರಕವೂ ಮರುಬಳಕೆಗೆ ಅವಕಾಶವೂ ಇರುವಂತಹ ಕಚ್ಚಾವಸ್ತುಗಳಿಂದ ತಯಾರಾದ ಬಟ್ಟೆ ಚೀಲಗಳು ಮತ್ತಿತರ ದಿನನಿತ್ಯದ ಬಳಕೆಯ ಸಾಮಗ್ರಿಗಳ ತಯಾರಿಕೆ ಮತ್ತು ಖರೀದಿಯನ್ನು ಪ್ರೋತ್ಸಾಹಿಸಲು ಅನಂತಪ್ರೇರಣಾಕೇಂದ್ರದ ಆವರಣದಲ್ಲಿ ವಾರಕ್ಕೊಮ್ಮೆ ಅಂತಹ ವಸ್ತುಗಳ ಮಾರಾಟಕೇಂದ್ರವನ್ನು ತೆರೆಯಲು ನಿರ್ಧರಿಸಲಾಗಿದೆ.

ananth prerana kendra 1

ಈ ಪ್ರೇರಣಾ ಕೇಂದ್ರದ ಉದ್ಘಾಟನೆಯು ಶುಕ್ರವಾರ(ಮೇ 6, 2022 ರಂದು) ಬೆಳಿಗ್ಗೆ 10.30 ಕ್ಕೆ ನಡೆಯಲಿದ್ದು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

TAGGED:Ananth Kumarananth prerana kendrabengaluruTejaswini Ananthakumarಅನಂತ ಕುಮಾರ್ಅನಂತ ಪ್ರೇರಣಾ ಕೇಂದ್ರತೇಜಸ್ವಿನಿ ಅನಂತಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
9 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
29 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
50 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
52 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
2 hours ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?