Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅನಂತ ಪ್ರೇರಣಾ ಕೇಂದ್ರ ನಾಳೆ ಲೋಕಾರ್ಪಣೆ

Public TV
Last updated: May 5, 2022 1:27 pm
Public TV
Share
4 Min Read
ananth prerana kendra 4
SHARE

– ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಆದರ್ಶಗಳನ್ನು ಯುವಪೀಳಿಗೆಗೆ ಪರಿಚಯಿಸುವ ಉದ್ದೇಶ
– ಸೌತ್ ಎಂಡ್ ವೃತ್ತದಲ್ಲಿದ್ದ ಅನಂತಕುಮಾರ್ ಕಚೇರಿಯನ್ನು ‘ಅನಂತ ಪ್ರೇರಣಾ ಕೇಂದ್ರ’ ವನ್ನಾಗಿ ಪರಿವರ್ತನೆ
– ಮೇ6 ರಂದು ಬೆಳಿಗ್ಗೆ 10.30 ಕ್ಕೆ ಉದ್ಘಾಟನೆ – ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರು ಭಾಗಿ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಅವರ ಆದರ್ಶಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರಚಿಸಲಾಗಿರುವ ಅನಂತ ಪ್ರೇರಣಾ ಹೆಸರಿನ ಮಾಹಿತಿ ಕೇಂದ್ರ ಮೇ 6, 2022 ರಂದು ಬೆಳಿಗ್ಗೆ 10.30 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್ ತಿಳಿಸಿದ್ದಾರೆ.

Tejaswini Ananth Kumar 1

ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ನಾಡಸೇವೆಯಲ್ಲಿ ತೊಡಗಿಕೊಳ್ಳಬಯಸುವ ಯುವ ಶಕ್ತಿಗಳಿಗೆ ದಾರಿದೀಪವಾಗಲೆಂಬ ಸದುದ್ದೇಶದಿಂದ ಸೌತ್ ಎಂಡ್ ವೃತ್ತದಲ್ಲಿ ಈ ಹಿಂದೆ ಇದ್ದ ಅನಂತಕುಮಾರ್ ಅವರ ಕಚೇರಿಯನ್ನು ‘ಅನಂತ ಪ್ರೇರಣಾ ಕೇಂದ್ರ’ ವನ್ನಾಗಿಸಲಾಗಿದೆ. ಅನಂತಕುಮಾರರ ಬದುಕಿನ ಸಾರ್ಥಕತೆಯನ್ನು ಅರಿತವರಿಗೂ, ನಾಯಕತ್ವದ ಬೆಳವಣಿಗೆಯ ರೂಪರೇಷೆಯನ್ನು ಗುರುತಿಸಲೆಳಸುವವರಿಗೂ, ನಾಡ ಸೇವೆಯಲ್ಲಿ ತೊಡಗಿಕೊಳ್ಳಬಯಸುವ ಯುವಶಕ್ತಿಗಳಿಗೂ ದಾರಿದೀಪವಾಗಲೆಂಬ ಮಹದುದ್ದೇಶದಿಂದ ಅನಂತಕುಮಾರರ ಜೀವನ, ವ್ಯಕ್ತಿತ್ವ, ಸಾಧನೆಗಳನ್ನು ಪರಿಚಯಿಸುವ ಮಾಹಿತಿ ಕೇಂದ್ರವೊಂದನ್ನು ತೆರೆಯಲಾಗಿದೆ. ಅನಂತಕುಮಾರರ ಆಶೋತ್ತರಗಳನ್ನು ಮುಂದುವರಿಸಿ ನಿರ್ವಹಿಸುವ ಹೊಣೆ ಹೊತ್ತ ಅದಮ್ಯ ಚೇತನ ಸಂಸ್ಥೆಯ ಸಹಯೋಗದಲ್ಲಿ ಈ ಕೇಂದ್ರವು ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಕಲಿ ಅಧಿಕಾರಿಗಳಿಂದ ಹಣ ವಸೂಲಿ – ಕರೆ ಬಂದರೆ ದೂರು ದಾಖಲಿಸುವಂತೆ ಎಸಿಬಿ ಪ್ರಕಟಣ

ananth prerana kendra 2

ಅನಂತ ಪ್ರೇರಣಾ ಕೇಂದ್ರದ ಅಂಶಗಳು:
ಛಾಯಾಚಿತ್ರ ಪ್ರದರ್ಶಿನಿ:
ಈ ಪ್ರೇರಣಾ ಕೇಂದ್ರದಲ್ಲಿ ಅನಂತಕುಮಾರ್ ಅವರ ಬಾಲ್ಯದಿಂದ ಮೊದಲುಗೊಂಡು ಎಬಿವಿಪಿ ಕಾರ್ಯಕರ್ತರಾಗಿ ಅವರು ಗಳಿಸಿಕೊಂಡ ಅನುಭವ. ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಬೆಳೆಯಲು ಅವರು ದುಡಿದ ಪರಿ, ಆರು ಬಾರಿ ಸಂಸದರಾಗಿ, ಕೇಂದ್ರದಲ್ಲಿ ವಿವಿಧ ಖಾತೆಗಳ ಸಚಿವರಾಗಿ ಅನಂತಕುಮಾರ್ ಸಾಧಿಸಿದ ಕಾರ್ಯಗಳು, ಅಚ್ಚರಿ ಮೂಡಿಸುವಂತೆ ಅವರು ನಾಯಕತ್ವದ ಸೋಪಾನಗಳನ್ನು ಏರಿ ನಿಂತ ರೀತಿ ಎಲ್ಲವನ್ನೂ ಛಾಯಾಚಿತ್ರಗಳ ಮೂಲಕ ಪ್ರದರ್ಶನದ ಮೂಲಕ ಪರಿಚಯಿಸಲಾಗುತ್ತಿದೆ. ಈ ಚಿತ್ರಗಳನ್ನು ಸವಿವರ ಅರ್ಥಮಾಡಿಕೊಳ್ಳಲು ಧ್ವನಿರೂಪದ ವ್ಯಾಖ್ಯಾನವುಳ್ಳ ಮೊಬೈಲ್ ಆಪ್ ಸೌಕರ್ಯವನ್ನೂ ವ್ಯವಸ್ಥೆಮಾಡಲಾಗುತ್ತಿದೆ.

ananth prerana kendra 3

ಗ್ರಂಥಭಂಡಾರ ಮತ್ತು ವಾಚನಾಲಯ:
ಅನಂತಪ್ರೇರಣಾ ಕೇಂದ್ರದ ಒಂದು ಭಾಗದಲ್ಲಿ ಸುಸಜ್ಜಿತ ಗ್ರಂಥಭಂಡಾರ ಮತ್ತು ಉಚಿತ ವಾಚನಾಲಯವನ್ನು ವ್ಯವಸ್ಥೆಮಾಡಲಾಗಿದೆ. ಸಾರ್ವಜನಿಕರೂ ವಿದ್ಯಾರ್ಥಿಗಳೂ ಇವುಗಳ ಪ್ರಯೋಜನ ಪಡೆದುಕೊಳ್ಳಬಹುದು. ಇಲ್ಲಿ ಅನಂತಕುಮಾರರ ಸ್ವಂತ ಸಂಗ್ರಹದಿಂದಲೂ ಇತರ ಮೂಲಗಳಿಂದಲೂ ಸಂಗ್ರಹಿಸಿದ ಉಪಯುಕ್ತ ಪುಸ್ತಕಗಳನ್ನು ಇಲ್ಲಿಯೇ ಉಚಿತವಾಗಿ ಅಧ್ಯಯನ ಮಾಡಲು ಅವಕಾಶವಿದೆ. ಮುಂದೆ, ಉದ್ಯೋಗಾಪೇಕ್ಷಿ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರತ್ಯೇಕ ವಿಭಾಗವನ್ನು ತೆರೆಯುವ ಉದ್ದೇಶವೂ ಇದೆ. ಇದನ್ನೂ ಓದಿ: ವಿದ್ಯುತ್ ಸಮಸ್ಯೆ – 1,100 ರೈಲುಗಳು ರದ್ದು

ananth prerana kendra 7

ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ:
ಸೌತ್ ಎಂಡ್ ವೃತ್ತದ ಪರಿಸರದಲ್ಲಿ ಅನೇಕ ಶಿಕ್ಷಣಸಂಸ್ಥೆಗಳಿದ್ದು ದೂರದೂರದಿಂದ ಇಲ್ಲಿಗೆ ಪ್ರತಿನಿತ್ಯ ಅನೇಕ ವಿದ್ಯಾರ್ಥಿಗಳು ಬರುತ್ತಾರೆ. ಇವರಲ್ಲಿ ಅನೇಕರಿಗೆ ಮಧ್ಯಾಹ್ನದ ಊಟಕ್ಕೆ ಬೇಕಾದ ಅನುಕೂಲವಿರುವುದಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಅದಮ್ಯ ಚೇತನದ ಸಹಯೋಗದೊಡನೆ ಪ್ರತಿನಿತ್ಯ ಮಧ್ಯಾಹ್ನದ ಭೋಜನವನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರೇರಣಾ ಕೇಂದ್ರದ ಮೇಲುಮಹಡಿಯ ಆವರಣದಲ್ಲಿ ಊಟದ ವಿತರಣೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

ananth prerana kendra

ಗಿಡ ವಿತರಣೆ:
ಸಸ್ಯಾಗ್ರಹ ಎಂಬ ಪರಿಕಲ್ಪನೆಯನ್ನು ಮುಂದಿಟ್ಟು ಅನಂತಕುಮಾರ್ ಬೆಂಗಳೂರು ಹಸಿರು ಪರಿಸರದ ಸ್ವಚ್ಛ ನಗರವಾಗಬೇಕೆಂಬ ಕನಸು ಕಂಡಿದ್ದವರು. ಅವರು ಪ್ರಾರಂಭಿಸಿದ ಹಸಿರು ಭಾನುವಾರ ಎಂಬ ಗಿಡ ನೆಡುವ ಕಾರ್ಯಕ್ರಮ 350 ಕ್ಕೂ ಹೆಚ್ಚು ವಾರಗಳಿಂದ ನಿರಂತರವಾಗಿ ನಡೆದುಬರುತ್ತಿದೆ. ತಮ್ಮ ಆವರಣದಲ್ಲಿ ಗಿಡ ನೆಟ್ಟು ಬೆಳೆಸಲು ಆಸಕ್ತಿಯುಳ್ಳ ಸಾರ್ವಜನಿಕರಿಗೆ ಗಿಡಗಳನ್ನು ಉಚಿತವಾಗಿ ವಿತರಿಸಲು ಪ್ರೇರಣಾ ಕೇಂದ್ರದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ananth prerana kendra 6

ಪ್ಲೇಟ್ ಬ್ಯಾಂಕ್:
ಹಸಿರು ಜೀವನ ಶೈಲಿಯ ಪ್ರತಿಪಾದಕರಾದ ಅನಂತಕುಮಾರ್ ಸಭೆ ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಖರೀದಿಯನ್ನು ವಿರೋಧಿಸಿ, ಮರುಬಳಸಬಹುದಾದ ಸ್ಟೀಲ್ ಲೋಟ ತಟ್ಟೆ ಚಮಚಗಳ ಬಳಕೆಗೆ ಪ್ರೇರಣೆ ನೀಡಿದ ಫಲವಾಗಿ ಅದಮ್ಯ ಚೇತನದಲ್ಲಿ ಪ್ಲೇಟ್ ಬ್ಯಾಂಕ್ ಯೋಜನೆ ಪ್ರಾರಂಭವಾಗಿದೆ. ಸಾರ್ವಜನಿಕರು ತಾವು ಏರ್ಪಡಿಸುವ ಸಮಾರಂಭಗಳಲ್ಲಿ ಬಳಕೆಗೆ ಇಲ್ಲಿಂದ ಲೋಟ ತಟ್ಟೆಗಳನ್ನು ಉಚಿತವಾಗಿ ಒಯ್ದು ಉಪಯೋಗಿಸಿ ಹಿಂತಿರುಗಿಸಬಹುದಾದ ಷರತ್ತು ಬದ್ಧ ಯೋಜನೆ ಇದಾಗಿದೆ. ಪ್ಲೇಟ್ ಬ್ಯಾಂಕಿನ ಒಂದು ಶಾಖೆಯನ್ನು ಪ್ರೇರಣಾ ಕೇಂದ್ರದ ಆವರಣದಲ್ಲಿ ತೆರೆಯಲಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಕಂದಾಯ ಇಲಾಖೆ ಅಸ್ತು

ananth prerana kendra 5

ಸಂಸ್ಕೃತಿ-ಪರಂಪರೆ ಪ್ರಸಾರ:
ಭಾರತೀಯ ಪರಂಪರೆ, ಸಂಸ್ಕೃತಿ, ಕಲೆ ಮೊದಲಾದವುಗಳ ಬಗ್ಗೆ ಅಪಾರ ಆಸಕ್ತಿಯುಳ್ಳವರಾಗಿದ್ದ ಅನಂತಕುಮಾರರ ಆಶಯಕ್ಕನುಗುಣವಾಗಿ ಈ ಪ್ರೇರಣಾ ಕೇಂದ್ರದಲ್ಲಿ ಮುಂಬರುವ ದಿನಗಳಲ್ಲಿ ಸಂಸ್ಕೃತಿ ಘಟಕವೊಂದನ್ನು ಪ್ರಾರಂಭಿಸಲು ಯೋಚಿಸಲಾಗುತ್ತಿದೆ. ಈ ಘಟಕವು ಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ನಿಯಮಿತವಾಗಿ ಹಮ್ಮಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು.

ದೇಶೀಯ ಪರಿಸರಸ್ನೇಹಿ ವಸ್ತುಬಳಕೆಗೆ ಪ್ರೋತ್ಸಾಹ:
ದೇಶೀಯವೂ ಪರಿಸರಕ್ಕೆ ಪೂರಕವೂ ಮರುಬಳಕೆಗೆ ಅವಕಾಶವೂ ಇರುವಂತಹ ಕಚ್ಚಾವಸ್ತುಗಳಿಂದ ತಯಾರಾದ ಬಟ್ಟೆ ಚೀಲಗಳು ಮತ್ತಿತರ ದಿನನಿತ್ಯದ ಬಳಕೆಯ ಸಾಮಗ್ರಿಗಳ ತಯಾರಿಕೆ ಮತ್ತು ಖರೀದಿಯನ್ನು ಪ್ರೋತ್ಸಾಹಿಸಲು ಅನಂತಪ್ರೇರಣಾಕೇಂದ್ರದ ಆವರಣದಲ್ಲಿ ವಾರಕ್ಕೊಮ್ಮೆ ಅಂತಹ ವಸ್ತುಗಳ ಮಾರಾಟಕೇಂದ್ರವನ್ನು ತೆರೆಯಲು ನಿರ್ಧರಿಸಲಾಗಿದೆ.

ananth prerana kendra 1

ಈ ಪ್ರೇರಣಾ ಕೇಂದ್ರದ ಉದ್ಘಾಟನೆಯು ಶುಕ್ರವಾರ(ಮೇ 6, 2022 ರಂದು) ಬೆಳಿಗ್ಗೆ 10.30 ಕ್ಕೆ ನಡೆಯಲಿದ್ದು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

TAGGED:Ananth Kumarananth prerana kendrabengaluruTejaswini Ananthakumarಅನಂತ ಕುಮಾರ್ಅನಂತ ಪ್ರೇರಣಾ ಕೇಂದ್ರತೇಜಸ್ವಿನಿ ಅನಂತಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

IND vs ENG 4th test Ben Stokes offers a draw India denies and continues to bat
Cricket

ಬೆನ್‌ ಸ್ಟೋಕ್ಸ್‌ ಡ್ರಾ ಆಫರ್‌ ರಿಜೆಕ್ಟ್‌ – ಬ್ಯಾಟಿಂಗ್‌ ಮುಂದುವರಿಸಿ ಚಮಕ್‌ ಕೊಟ್ಟ ಜಡೇಜಾ, ಸುಂದರ್‌

Public TV
By Public TV
4 hours ago
Mallikarjun Kharge 3
Districts

ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

Public TV
By Public TV
4 hours ago
Ravindra Jadeja Washington Sundar
Cricket

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ

Public TV
By Public TV
4 hours ago
Chikkamagaluru Elephant Attack
Chikkamagaluru

ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು

Public TV
By Public TV
5 hours ago
Lakshmi Hebbalkar
Belgaum

ರಾಹುಲ್‌ ಗಾಂಧಿ ಜೊತೆ ಯುವಕರು ಸೈನಿಕರಾಗಿ ಕೆಲಸ ಮಾಡಬೇಕು: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
5 hours ago
American Airlines 1
Latest

ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?