Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

5 ವರ್ಷಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಭಾರತ ನಂ.1: ಗಡ್ಕರಿ

Public TV
Last updated: November 12, 2021 8:49 pm
Public TV
Share
3 Min Read
Nitin Gadkari Tejaswini Ananth Kumar 2
SHARE

– ದೇಶದ ಗ್ರೀನರ್‌ ಎಕಾನಮಿಯ ಸಂಶೋಧನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ
– ಪ್ರಸಕ್ತ ರಾಜಕಾರಣದಲ್ಲಿ ಅನಂತಕುಮಾರ್‌ ಅವರ ಕೊರತೆ ಎದ್ದು ಕಾಣುತ್ತಿದೆ

ಬೆಂಗಳೂರು: ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಆಗುತ್ತಿರುವ ಸಂಶೋಧನೆಗಳನ್ನು ನೋಡಿದಲ್ಲಿ ಮುಂದಿನ 5 ವರ್ಷಗಳಲ್ಲಿ ಭಾರತ ದೇಶ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವುದರಲ್ಲಿ ಸಂಶಯವಿಲ್ಲ. ಈ ಕ್ಷೇತ್ರದಲ್ಲೂ ಬೆಂಗಳೂರು ನಗರ ಪ್ರಮುಖ ಪಾತ್ರವಹಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಹಲವಾರು ಕ್ರಾಂತಿಕಾರಿ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ದೇಶದ ಗ್ರೀನ್‌ ಎಕಾನಮಿಗೆ ಅಪಾರ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದರು.

Nitin Gadkari Tejaswini Ananth Kumar adhyama chetana

ನಗರದ ಆರ್‌ ವಿ ಶಿಕ್ಷಕರ ಕಾಲೇಜಿನ ಸಭಾಂಗಣದಲ್ಲಿ ದಿವಂಗತ ಅನಂತಕುಮಾರ್‌ ಅವರ 3ನೇ ಪುಣ್ಯತಿಥಿಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಅನಂತಕುಮಾರ್‌ ಸ್ಮಾರಕ ಉಪನ್ಯಾಸದಲ್ಲಿ ವರ್ಚುಯಲ್‌ ಆಗಿ ಭಾಗವಹಿಸಿ ಅವರು ಮಾತನಾಡಿದರು.

ಅನಂತಕುಮಾರ್‌ ಅವರೊಂದಿಗೆ ತಮಗಿದ್ದ ಆತ್ಮೀಯ ಕ್ಷಣಗಳನ್ನು ಹಂಚಿಕೊಂಡ ಅವರು, ದೇಶದ ಪ್ರಸಕ್ತ ರಾಜಕಾರಣದಲ್ಲಿ ಅನಂತಕುಮಾರ್‌ ಅವರ ಕೊರತೆ ಎದ್ದು ಕಾಣುತ್ತಿದೆ. ದೇಶ ಅದರಲ್ಲೂ ದಕ್ಷಿಣ ಭಾರತದಲ್ಲಿ ಭಾರತೀಯ ಜನತಾ ಪಕ್ಷದ ಬೆಳವಣಿಗೆಯಲ್ಲಿ ಅನಂತಕುಮಾರ್‌ ಅವರ ಕೊಡುಗೆ ಅಪಾರ. ಅವರು ಕರ್ನಾಟಕ ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಾವು ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆವು. ಈ ಮೂಲಕ ಭಾರತೀಯ ಜನತಾ ಪಕ್ಷ ದಕ್ಷೀಣ ಭಾರತದಲ್ಲಿ ತನ್ನ ಖಾತೆಯನ್ನು ತೆರೆಯಲು ಸಾಧ್ಯವಾಯಿತು ಎಂದು ಹೇಳಿದರು.

Nitin Gadkari Tejaswini Ananth Kumar 1

ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷವಾಗಿ ಬೆಳೆಯುವಲ್ಲಿ ಅನಂತಕುಮಾರ್‌ ಅವರಂತಹ ಸದಸ್ಯರ ಕೊಡುಗೆ ಬಹಳ ಅಪಾರವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಅನಂತಕುಮಾರ್‌, ಅರುಣ್‌ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್‌ ನಂತಹ ಪ್ರಮುಖರನ್ನು ಕಳೆದುಕೊಂಡು ಪಕ್ಷ ಬಡವಾಗಿದೆ. ಅನಂತಕುಮಾರ್‌ ಅವರಿಗೆ ಇನ್ನು ರಾಜಕಾರಣದಲ್ಲಿ ಬಹಳಷ್ಟು ಅವಕಾಶವಿತ್ತು. ಅವರ ಅನಾರೋಗ್ಯದ ಬಗ್ಗೆ ತಿಳಿದುಕೊಳ್ಳುವಲ್ಲಿ ಆದ ತಡದಿಂದಾಗಿ ಅವರನ್ನು ಅಕಾಲಿಕವಾಗಿ ಕಳೆದುಕೊಳ್ಳಬೇಕಾಯಿತು ಎಂದು ದು:ಖ ವ್ಯಕ್ತಪಡಿಸಿದರು.

ಸಾಮಾಜಿಕ ಕಳಕಳಿ ಅಪಾರ: ಸಾಮಾನ್ಯ ಕಾರ್ಯಕರ್ತರೇ ಪಕ್ಷದ ಶಕ್ತಿ ಎಂದು ನಂಬಿದ್ದ ಅನಂತಕುಮಾರ್‌ ಅವರು ಅಪಾರ ಸಾಮಾಜಿಕ ಕಾಳಜಿಯನ್ನು ಹೊಂದಿದ್ದರು. ಅವರು ತಮ್ಮ ಪತ್ನಿ ಡಾ ತೇಜಸ್ವಿನಿ ಅನಂತಕುಮಾರ್‌ ಅವರೊಂದಿಗೆ ಸೇರಿ ಪ್ರಾರಂಭಿಸಿದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ದೇಶದ ಲಕ್ಷಾಂತರ ಮಕ್ಕಳ ಹಸಿವನ್ನು ಇಂದಿಗೂ ನೀಗಿಸುತ್ತಿದೆ ಎಂದರು. ಇದನ್ನೂ ಓದಿ: ಮೃತ ಪೋಷಕರ ವಿವಾಹಿತ ಹೆಣ್ಣು ಮಕ್ಕಳು ಸರ್ಕಾರಿ ನೌಕರಿ ಪಡೆಯಲು ಅರ್ಹರು: ಯುಪಿ ಸರ್ಕಾರ

Addressing 1st edition of AnanthKumar Memorial Lecture on ‘Progressive Politics and Nation Building’ https://t.co/vsqEZtS3GZ

— Nitin Gadkari (@nitin_gadkari) November 12, 2021

ಬೆಂಗಳೂರು ನಗರದ ಕೊಡುಗೆ ಅಪಾರ: ದೇಶದಲ್ಲಿ ಗ್ರೀನ್‌ ಎಕಾನಮಿ ಬಹಳ ವೇಗವಾಗಿ ಅಭಿವೃದ್ದಿಗೊಳ್ಳುತ್ತಿದೆ. ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಕ್ಷೇತ್ರಗಳಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ ಗಳು ಪ್ರಮುಖ ಸಂಶೋಧನೆಯನ್ನು ಕೈಗೊಂಡಿವೆ. ಕರ್ನಾಟಕ ರಾಜ್ಯದಲ್ಲಿ ಇಥೆನಾಲ್‌ ಉತ್ಪಾದನೆ ಹೆಚ್ಚಾಗಿದೆ. ಫ್ಲೇಕ್ಸ್‌ ಇಂಜಿನ್‌ ಹಾಗೂ ಎಲೆಕ್ಟ್ರಿಕ್‌ ವಾಹನಗಳ ಅಭಿವೃದ್ದಿಯಲ್ಲಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಈ ಸಂಶೋಧನೆಗಳಲ್ಲಿ ಬೆಂಗಳೂರು ನಗರದ ಕೊಡುಗೆ ಬಹಳಷ್ಟಿದೆ. ಮುಂಬರುವ ದಿನಗಳಲ್ಲಿ ದೇಶದಲ್ಲಿ ಹಸಿರು ಆರ್ಥಿಕತೆ ಅಭಿವೃದ್ದಿಯಾಗಲಿದ್ದು, ಅದರಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ಗಳು ನೇತೃತ್ವ ವಹಿಸಲಿದೆ ಎಂದರು.

ಒಳನಾಡು ಜಲಸಾರಿಗೆಗೆ ಹೆಚ್ಚಿನ ಮಹತ್ವ: ದೇಶದಲ್ಲಿ ಸಾಗಾಣಿಕೆ ವೆಚ್ಚ ಹೆಚ್ಚಿದೆ. ಇದನ್ನು ಮಾಡುವ ನಿಟ್ಟಿನಲ್ಲಿ ಈಗಾಗಲೇ ಅಂತರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಅದೇ ರೀತಿಯಲ್ಲಿ ಒಳನಾಡು ಜಲಸಾರಿಗೆಗೆ ಮಾರ್ಗಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮುಂದಿನ 2 ವರ್ಷದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಬೆಲೆ ಪೆಟ್ರೋಲ್‌ ವಾಹನದಷ್ಟೇ ಆಗಲಿದೆ: ಗಡ್ಕರಿ

ಬೆಂಗಳೂರು ರಿಂಗ್‌ ರಸ್ತೆ: ಅನಂತಕುಮಾರ್‌ ಅವರ ಬಹುದಿನಗಳ ಕನಸಾಗಿದ್ದ ಬೆಂಗಳೂರು ರಿಂಗ್‌ ರಸ್ತೆಯ ನಿರ್ಮಾಣದ ಬಗ್ಗೆ ಈಗಾಗಲೇ ಚರ್ಚೆಯನ್ನು ನಡೆಸಲಾಗಿದೆ. ಚುನಾವಣೆಯ ನೀತಿ ಸಂಹಿತೆಯ ನಂತರ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದು ರಿಂಗ್‌ ರಸ್ತೆಯ ಕಾಮಗಾರಿ ಪ್ರಾರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್‌, ಅನಂತಕುಮಾರ್ ಪ್ರತಿಷ್ಠಾನದ ಅಧ್ಯಕ್ಷ ಪಿ ವಿ ಕೃಷ್ಣ ಭಟ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ ಗಂಗಾಧರ, ಪ್ರೊ ಹೆಚ್ ಎಸ್ ನಾಗರಾಜ್, ಪುತ್ರಿಯರಾದ ಐಶ್ವರ್ಯ ಮತ್ತು ವಿಜೇತ ಅನಂತಕುಮಾರ್, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಹೆಚ್‌ ಎನ್ ನಂದಕುಮಾರ್‌ ಮತ್ತು ಪ್ರದೀಪ್‌ ಓಕ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

TAGGED:AnanthkumarautomobileElectric Vehiclenitin gadkariPublic TVಅಟೋಮೊಬೈಲ್ಅದಮ್ಯ ಚೇತನಅನಂತಕುಮಾರ್ತೇಜಸ್ವಿನಿ ಅನಂತಕುಮಾರ್ನಿತಿನ್ ಗಡ್ಕರಿ
Share This Article
Facebook Whatsapp Whatsapp Telegram

Cinema Updates

deepika das 10
ಸೋಷಿಯಲ್ ಮೀಡಿಯಾದಿಂದ ದೀಪಿಕಾ ದಾಸ್ ದಿಢೀರ್ ಬ್ರೇಕ್- ಫ್ಯಾನ್ಸ್‌ಗೆ ಶಾಕ್
25 minutes ago
KamalHaasan Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳದೇ ಹೋದ್ರೆ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ
37 minutes ago
janhvi kapoor 4
ಟೈಗರ್ ಶ್ರಾಫ್ ಜೊತೆ ಜಾನ್ವಿ ಕಪೂರ್ ಡ್ಯುಯೆಟ್
55 minutes ago
pawan kalyan 2
ನಿಧಿ ಜೊತೆ ಪವನ್ ಕಲ್ಯಾಣ್ ಮಸ್ತ್ ಡ್ಯಾನ್ಸ್- ‘ಹರಿ ಹರ ವೀರ ಮಲ್ಲು’ ಚಿತ್ರದ ಸಾಂಗ್ ರಿಲೀಸ್
2 hours ago

You Might Also Like

Starlink
Latest

ಭಾರತಕ್ಕೆ ಬಂದೇ ಬಿಡ್ತು ಸ್ಟಾರ್‌ಲಿಂಕ್‌ – ಇದರ ಬೆಲೆ, ಇಂಟರ್ನೆಟ್‌ ಸ್ಪೀಡ್‌ ಎಷ್ಟು ಗೊತ್ತಾ?

Public TV
By Public TV
4 minutes ago
Nikhil Kumaraswamy
Bengaluru City

ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ವಸೂಲಿ ಮಾಡೋ ಉದ್ದೇಶ: ನಿಖಿಲ್

Public TV
By Public TV
4 minutes ago
UP Man Bites Off Neighbours Nose In Parking Row
Crime

ಪಾರ್ಕಿಂಗ್‌ ವಿಚಾರಕ್ಕೆ ಕಿರಿಕ್‌ – ನೆರೆಮನೆಯವನ ಮೂಗು ಕಚ್ಚಿದ ಭೂಪ!

Public TV
By Public TV
8 minutes ago
Raichuru Protest
Crime

ರಾಯಚೂರು | ಭಾವಚಿತ್ರ ಸುಟ್ಟು ಕಮಲ್ ಹಾಸನ್ ವಿರುದ್ಧ ಆಕ್ರೋಶ

Public TV
By Public TV
48 minutes ago
Chikkamagaluru KEERTHI
Chikkamagaluru

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು 10 ಬಾರಿ ಇರಿದು ಕೊಂದ ಪತಿ

Public TV
By Public TV
51 minutes ago
raft found in kumta coastal area
Latest

ಕಾರವಾರ: ಕಡಲ ತೀರಕ್ಕೆ ತೇಲಿಬಂದ ಹಡಗಿನ ರಾಫ್ಟ್‌ – ಕೇರಳ ಕೊಚ್ಚಿಯಲ್ಲಿ ಮುಳುಗಿದ್ದ ಹಡಗಿನದ್ದಾ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?