Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ವರ್ಷಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಭಾರತ ನಂ.1: ಗಡ್ಕರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 5 ವರ್ಷಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಭಾರತ ನಂ.1: ಗಡ್ಕರಿ

Bengaluru City

5 ವರ್ಷಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಭಾರತ ನಂ.1: ಗಡ್ಕರಿ

Public TV
Last updated: November 12, 2021 8:49 pm
Public TV
Share
3 Min Read
Nitin Gadkari Tejaswini Ananth Kumar 2
SHARE

– ದೇಶದ ಗ್ರೀನರ್‌ ಎಕಾನಮಿಯ ಸಂಶೋಧನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ
– ಪ್ರಸಕ್ತ ರಾಜಕಾರಣದಲ್ಲಿ ಅನಂತಕುಮಾರ್‌ ಅವರ ಕೊರತೆ ಎದ್ದು ಕಾಣುತ್ತಿದೆ

ಬೆಂಗಳೂರು: ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಆಗುತ್ತಿರುವ ಸಂಶೋಧನೆಗಳನ್ನು ನೋಡಿದಲ್ಲಿ ಮುಂದಿನ 5 ವರ್ಷಗಳಲ್ಲಿ ಭಾರತ ದೇಶ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವುದರಲ್ಲಿ ಸಂಶಯವಿಲ್ಲ. ಈ ಕ್ಷೇತ್ರದಲ್ಲೂ ಬೆಂಗಳೂರು ನಗರ ಪ್ರಮುಖ ಪಾತ್ರವಹಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಹಲವಾರು ಕ್ರಾಂತಿಕಾರಿ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ದೇಶದ ಗ್ರೀನ್‌ ಎಕಾನಮಿಗೆ ಅಪಾರ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದರು.

Nitin Gadkari Tejaswini Ananth Kumar adhyama chetana

ನಗರದ ಆರ್‌ ವಿ ಶಿಕ್ಷಕರ ಕಾಲೇಜಿನ ಸಭಾಂಗಣದಲ್ಲಿ ದಿವಂಗತ ಅನಂತಕುಮಾರ್‌ ಅವರ 3ನೇ ಪುಣ್ಯತಿಥಿಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಅನಂತಕುಮಾರ್‌ ಸ್ಮಾರಕ ಉಪನ್ಯಾಸದಲ್ಲಿ ವರ್ಚುಯಲ್‌ ಆಗಿ ಭಾಗವಹಿಸಿ ಅವರು ಮಾತನಾಡಿದರು.

ಅನಂತಕುಮಾರ್‌ ಅವರೊಂದಿಗೆ ತಮಗಿದ್ದ ಆತ್ಮೀಯ ಕ್ಷಣಗಳನ್ನು ಹಂಚಿಕೊಂಡ ಅವರು, ದೇಶದ ಪ್ರಸಕ್ತ ರಾಜಕಾರಣದಲ್ಲಿ ಅನಂತಕುಮಾರ್‌ ಅವರ ಕೊರತೆ ಎದ್ದು ಕಾಣುತ್ತಿದೆ. ದೇಶ ಅದರಲ್ಲೂ ದಕ್ಷಿಣ ಭಾರತದಲ್ಲಿ ಭಾರತೀಯ ಜನತಾ ಪಕ್ಷದ ಬೆಳವಣಿಗೆಯಲ್ಲಿ ಅನಂತಕುಮಾರ್‌ ಅವರ ಕೊಡುಗೆ ಅಪಾರ. ಅವರು ಕರ್ನಾಟಕ ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಾವು ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆವು. ಈ ಮೂಲಕ ಭಾರತೀಯ ಜನತಾ ಪಕ್ಷ ದಕ್ಷೀಣ ಭಾರತದಲ್ಲಿ ತನ್ನ ಖಾತೆಯನ್ನು ತೆರೆಯಲು ಸಾಧ್ಯವಾಯಿತು ಎಂದು ಹೇಳಿದರು.

Nitin Gadkari Tejaswini Ananth Kumar 1

ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷವಾಗಿ ಬೆಳೆಯುವಲ್ಲಿ ಅನಂತಕುಮಾರ್‌ ಅವರಂತಹ ಸದಸ್ಯರ ಕೊಡುಗೆ ಬಹಳ ಅಪಾರವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಅನಂತಕುಮಾರ್‌, ಅರುಣ್‌ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್‌ ನಂತಹ ಪ್ರಮುಖರನ್ನು ಕಳೆದುಕೊಂಡು ಪಕ್ಷ ಬಡವಾಗಿದೆ. ಅನಂತಕುಮಾರ್‌ ಅವರಿಗೆ ಇನ್ನು ರಾಜಕಾರಣದಲ್ಲಿ ಬಹಳಷ್ಟು ಅವಕಾಶವಿತ್ತು. ಅವರ ಅನಾರೋಗ್ಯದ ಬಗ್ಗೆ ತಿಳಿದುಕೊಳ್ಳುವಲ್ಲಿ ಆದ ತಡದಿಂದಾಗಿ ಅವರನ್ನು ಅಕಾಲಿಕವಾಗಿ ಕಳೆದುಕೊಳ್ಳಬೇಕಾಯಿತು ಎಂದು ದು:ಖ ವ್ಯಕ್ತಪಡಿಸಿದರು.

ಸಾಮಾಜಿಕ ಕಳಕಳಿ ಅಪಾರ: ಸಾಮಾನ್ಯ ಕಾರ್ಯಕರ್ತರೇ ಪಕ್ಷದ ಶಕ್ತಿ ಎಂದು ನಂಬಿದ್ದ ಅನಂತಕುಮಾರ್‌ ಅವರು ಅಪಾರ ಸಾಮಾಜಿಕ ಕಾಳಜಿಯನ್ನು ಹೊಂದಿದ್ದರು. ಅವರು ತಮ್ಮ ಪತ್ನಿ ಡಾ ತೇಜಸ್ವಿನಿ ಅನಂತಕುಮಾರ್‌ ಅವರೊಂದಿಗೆ ಸೇರಿ ಪ್ರಾರಂಭಿಸಿದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ದೇಶದ ಲಕ್ಷಾಂತರ ಮಕ್ಕಳ ಹಸಿವನ್ನು ಇಂದಿಗೂ ನೀಗಿಸುತ್ತಿದೆ ಎಂದರು. ಇದನ್ನೂ ಓದಿ: ಮೃತ ಪೋಷಕರ ವಿವಾಹಿತ ಹೆಣ್ಣು ಮಕ್ಕಳು ಸರ್ಕಾರಿ ನೌಕರಿ ಪಡೆಯಲು ಅರ್ಹರು: ಯುಪಿ ಸರ್ಕಾರ

Addressing 1st edition of AnanthKumar Memorial Lecture on ‘Progressive Politics and Nation Building’ https://t.co/vsqEZtS3GZ

— Nitin Gadkari (@nitin_gadkari) November 12, 2021

ಬೆಂಗಳೂರು ನಗರದ ಕೊಡುಗೆ ಅಪಾರ: ದೇಶದಲ್ಲಿ ಗ್ರೀನ್‌ ಎಕಾನಮಿ ಬಹಳ ವೇಗವಾಗಿ ಅಭಿವೃದ್ದಿಗೊಳ್ಳುತ್ತಿದೆ. ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಕ್ಷೇತ್ರಗಳಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ ಗಳು ಪ್ರಮುಖ ಸಂಶೋಧನೆಯನ್ನು ಕೈಗೊಂಡಿವೆ. ಕರ್ನಾಟಕ ರಾಜ್ಯದಲ್ಲಿ ಇಥೆನಾಲ್‌ ಉತ್ಪಾದನೆ ಹೆಚ್ಚಾಗಿದೆ. ಫ್ಲೇಕ್ಸ್‌ ಇಂಜಿನ್‌ ಹಾಗೂ ಎಲೆಕ್ಟ್ರಿಕ್‌ ವಾಹನಗಳ ಅಭಿವೃದ್ದಿಯಲ್ಲಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಈ ಸಂಶೋಧನೆಗಳಲ್ಲಿ ಬೆಂಗಳೂರು ನಗರದ ಕೊಡುಗೆ ಬಹಳಷ್ಟಿದೆ. ಮುಂಬರುವ ದಿನಗಳಲ್ಲಿ ದೇಶದಲ್ಲಿ ಹಸಿರು ಆರ್ಥಿಕತೆ ಅಭಿವೃದ್ದಿಯಾಗಲಿದ್ದು, ಅದರಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ಗಳು ನೇತೃತ್ವ ವಹಿಸಲಿದೆ ಎಂದರು.

ಒಳನಾಡು ಜಲಸಾರಿಗೆಗೆ ಹೆಚ್ಚಿನ ಮಹತ್ವ: ದೇಶದಲ್ಲಿ ಸಾಗಾಣಿಕೆ ವೆಚ್ಚ ಹೆಚ್ಚಿದೆ. ಇದನ್ನು ಮಾಡುವ ನಿಟ್ಟಿನಲ್ಲಿ ಈಗಾಗಲೇ ಅಂತರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಅದೇ ರೀತಿಯಲ್ಲಿ ಒಳನಾಡು ಜಲಸಾರಿಗೆಗೆ ಮಾರ್ಗಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮುಂದಿನ 2 ವರ್ಷದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಬೆಲೆ ಪೆಟ್ರೋಲ್‌ ವಾಹನದಷ್ಟೇ ಆಗಲಿದೆ: ಗಡ್ಕರಿ

ಬೆಂಗಳೂರು ರಿಂಗ್‌ ರಸ್ತೆ: ಅನಂತಕುಮಾರ್‌ ಅವರ ಬಹುದಿನಗಳ ಕನಸಾಗಿದ್ದ ಬೆಂಗಳೂರು ರಿಂಗ್‌ ರಸ್ತೆಯ ನಿರ್ಮಾಣದ ಬಗ್ಗೆ ಈಗಾಗಲೇ ಚರ್ಚೆಯನ್ನು ನಡೆಸಲಾಗಿದೆ. ಚುನಾವಣೆಯ ನೀತಿ ಸಂಹಿತೆಯ ನಂತರ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದು ರಿಂಗ್‌ ರಸ್ತೆಯ ಕಾಮಗಾರಿ ಪ್ರಾರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್‌, ಅನಂತಕುಮಾರ್ ಪ್ರತಿಷ್ಠಾನದ ಅಧ್ಯಕ್ಷ ಪಿ ವಿ ಕೃಷ್ಣ ಭಟ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ ಗಂಗಾಧರ, ಪ್ರೊ ಹೆಚ್ ಎಸ್ ನಾಗರಾಜ್, ಪುತ್ರಿಯರಾದ ಐಶ್ವರ್ಯ ಮತ್ತು ವಿಜೇತ ಅನಂತಕುಮಾರ್, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಹೆಚ್‌ ಎನ್ ನಂದಕುಮಾರ್‌ ಮತ್ತು ಪ್ರದೀಪ್‌ ಓಕ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

TAGGED:AnanthkumarautomobileElectric Vehiclenitin gadkariPublic TVಅಟೋಮೊಬೈಲ್ಅದಮ್ಯ ಚೇತನಅನಂತಕುಮಾರ್ತೇಜಸ್ವಿನಿ ಅನಂತಕುಮಾರ್ನಿತಿನ್ ಗಡ್ಕರಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
30 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
36 minutes ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
big bulletin 20 april 2026 part 1
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-1

Public TV
By Public TV
2 hours ago
big bulletin 20 april 2026 part 2
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-2

Public TV
By Public TV
2 hours ago
big bulletin 20 april 2026 part 3
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?