ಅನಸ್ತೇಶಿಯಾ ಡೋಸ್ ಹೆಚ್ಚಳ, ರೋಗಿ ಸಾವು – ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

Public TV
1 Min Read
Anesthesia

ಚಾಮರಾಜನಗರ: ವೈದ್ಯರ ನಿರ್ಲಕ್ಷ್ಯದಿಂದ ಅರಿವಳಿಕೆ(ಅನಸ್ತೇಶಿಯಾ) ಡೋಸ್ ಹೆಚ್ಚಾದ ಪರಿಣಾಮ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

anasthesia

ಉದ್ದನೂರು ಗ್ರಾಮದ ನಿವಾಸಿ ಸುರೇಶ್(42) ಮೂಳೆ ಶಸ್ತ್ರ ಚಿಕಿತ್ಸೆಗೆಂದು ಸೋಮವಾರ ಕೊಳ್ಳೇಗಾಲ ವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಗೂ ಮುನ್ನ ನೋವು ನಿವಾರಣೆಗೆ ನೀಡುವ ಅರಿವಳಿಕೆ ಮದ್ದಿನಲ್ಲಿ ವ್ಯತ್ಯಾಸವಾಗಿದ್ದು, ಅರಿವಳಿಕೆ ಡೋಸ್ ಹೆಚ್ಚಾದ ಪರಿಣಾಮ ಸುರೇಶ್ ಪ್ರಜ್ಞೆ ಕಳೆದುಕೊಂಡಿದ್ದರು. ಪ್ರಜ್ಞಾಹೀನರಾಗಿದ್ದ ಸುರೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

anasthesia 2

ವೈದ್ಯರ ನಿರ್ಲಕ್ಷ್ಯದಿಂದಲೇ ಸುರೇಶ್ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ಸಂಬಂಧಿಕರು ಒತ್ತಾಯಿಸಿದ್ದಾರೆ. ನ್ಯಾಯ ಕೊಡಿಸುವಂತೆ ಹನೂರು ಪೊಲೀಸ್ ಠಾಣೆ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *