ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

Public TV
1 Min Read
Chandrababu Naidu

– ವೃದ್ಧರ ಸಂಖ್ಯೆ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದ ಚಂದ್ರಬಾಬು ನಾಯ್ಡು

ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು (Chandrababu Naidu) ಕರೆ ನೀಡಿದ್ದಾರೆ.

ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

Children

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ.

2 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ರಾಜ್ಯವು ಈ ಹಿಂದೆ ಕಾನೂನನ್ನು ಅಂಗೀಕರಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ. ಈಗ ಅದನ್ನು ಹಿಂತೆಗೆದುಕೊಳ್ಳಲು ನಾವು ಪರಿಗಣಿಸುತ್ತಿದ್ದೇವೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದ ಹಲವೆಡೆ ಗ್ರೆನೇಡ್ ದಾಳಿ ನಡೆಸಿದ್ದ ಇಬ್ಬರು ಉಗ್ರರು ಅರೆಸ್ಟ್‌

ನಾವು 2047 ರ ವರೆಗೆ ಜನಸಂಖ್ಯಾ ಪ್ರಯೋಜನವನ್ನು ಹೊಂದಿದ್ದರೂ, ಆಂಧ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಏರಿಕೆಯಾಗುತ್ತಿದೆ. ಜಪಾನ್, ಚೀನಾ ಮತ್ತು ಯುರೋಪಿಯನ್ ರಾಷ್ಟ್ರಗಳಂತಹ ಅನೇಕ ದೇಶಗಳು ಈ ಸಮಸ್ಯೆಯೊಂದಿಗೆ ಹೋರಾಡುತ್ತಿವೆ. ಹೆಚ್ಚಿನ ವಯಸ್ಸಾದ ಜನಸಂಖ್ಯೆಯನ್ನು ಹೊಂದಿವೆ. ದಕ್ಷಿಣದಲ್ಲಿ ಭಾರತದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ದೇಶದ ಇತರ ಭಾಗಗಳಿಗೆ ಅಥವಾ ವಿದೇಶಗಳಿಗೆ ವಲಸೆ ಹೋಗುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.

Share This Article