ಚುನಾವಣಾ ಭರವಸೆ ಈಡೇರಿಸಲು ಸಾಧ್ಯವಾಗ್ಲಿಲ್ಲ ಅಂತ ತನಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಕೌನ್ಸಿಲರ್

Public TV
1 Min Read
Andhra Pradesh councillor

ಅಮರಾವತಿ: ಮತದಾರರಿಗೆ ನೀಡಿದ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದೇ ಹೋಗಿದ್ದಕ್ಕೆ ಕೌನ್ಸಿಲರ್ (Councillor) ಒಬ್ಬರು ತನಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಅನಕಪಲ್ಲಿಯಲ್ಲಿ (Anakapalli) ನಡೆದಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಆಟೋ ರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದ ನರಸೀ ಪಟ್ಟಣ ಪುರಸಭೆಯ ಕೌನ್ಸಿಲರ್ ಮುಲಪರ್ತಿ ರಾಮರಾಜು (40) ಸ್ಥಳೀಯ ಪೌರಾಡಳಿತ ಮಂಡಳಿಯ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮಿಂದ ಸಾಧ್ಯವಾಗುವ ಎಲ್ಲಾ ಪ್ರಯತ್ನವನ್ನು ಮಾಡಿದರೂ ಸಹ ಮತದಾರರಿಗೆ ನೀಡಿದ ಭರವಸೆಯನ್ನು ಉಳಿಸುವಲ್ಲಿ ವಿಫಲವಾಗಿದ್ದಾಗಿ ಬೇಸರ ವ್ಯಕ್ತಪಡಿಸಿ ಚಪ್ಪಲಿಯಿಂದ ತಾವೇ ಹೊಡೆದುಕೊಂಡಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇ ನಿರ್ಮಾಣದ ವೇಳೆ ಕ್ರೇನ್ ಕುಸಿದು 16 ಮಂದಿ ಕಾರ್ಮಿಕರು ದುರ್ಮರಣ

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮರಾಜು, ನಾನು ಕೌನ್ಸಿಲರ್ ಆಗಿ ಚುನಾಯಿತನಾಗಿ 31 ತಿಂಗಳಾಗಿದೆ. ಆದರೆ ನನ್ನ ವಾರ್ಡ್‌ನಲ್ಲಿ ಒಳಚರಂಡಿ, ವಿದ್ಯುತ್, ನೈರ್ಮಲ್ಯ, ರಸ್ತೆ ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಮತದಾರರ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದ ಕಾರಣಕ್ಕೆ ಪೌರ ಸಭೆಯಲ್ಲೇ ಸಾಯುವುದು ಉತ್ತಮ ಎಂದು ನೊಂದು ನುಡಿದಿದ್ದಾರೆ.

ಸ್ಥಳೀಯ ಚುನಾವಣೆ ವೇಳೆ ರಾಮರಾಜು ಅವರು ತೆಲುಗು ದೇಶಂ ಪಕ್ಷದ (TDP) ಪರವಾಗಿ ಲಿಂಗಾಪುರಂ ಗ್ರಾಮದ ಬುಡಕಟ್ಟು ಪ್ರತಿನಿಧಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದನ್ನೂ ಓದಿ: ಇಂದಿನಿಂದ ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿರ್ಬಂಧ – ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article