Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಿ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಿ: ಡಿಕೆಶಿ

Bengaluru City

ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಿ: ಡಿಕೆಶಿ

Public TV
Last updated: August 21, 2025 10:17 pm
Public TV
Share
3 Min Read
DK Shivakumar 7
SHARE

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಗೆ (Upper Krishna Project) ಅಧಿಸೂಚನೆಗೆ ಒಮ್ಮೆ ಆಂಧ್ರ ಪ್ರದೇಶ ಮತ್ತೊಮ್ಮೆ ಮಹಾರಾಷ್ಟ್ರದವರು ಕೇಂದ್ರದ ಮೇಲೆ ಒತ್ತಡ ತಂದು ನಿಲ್ಲಿಸಿದರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಪಿಹೆಚ್ ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಗತಿಯ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರು ಈ ಯೋಜನೆಯ ಪರವಾಗಿದ್ದು, ಇದಕ್ಕೆ ಅಧಿಸೂಚನೆ ಹೊರಡಿಸಲೇಬೇಕು ಎಂದು ಸಂಬಂಧಪಟ್ಟ ರಾಜ್ಯಗಳ ಸಭೆ ನಡೆಸಲು ಎರಡು ಬಾರಿ ಪ್ರಯತ್ನಿಸಿದರು. ಆದರೆ ಎರಡು ರಾಜ್ಯದವರು ದೂರವಾಣಿ ಕರೆ ಮಾಡಿ ನಿಲ್ಲಿಸಿದರು. ಕೇಂದ್ರ ಸಚಿವರನ್ನು ನಾನು, ಮುಖ್ಯಮಂತ್ರಿಯವರು ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ಭೇಟಿಯಾಗಿ ಮನವಿ ಸಲ್ಲಿಸಿದ್ದೆವು ಎಂದರು. ಇದನ್ನೂ ಓದಿ: ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ

ಯೋಜನೆ ಜಾರಿಗೆ 2 ಲಕ್ಷ ಕೋಟಿ ಬೇಕು:
ಕೃಷ್ಣಾ ಮೇಲ್ದಂಡೆ ಯೋಜನೆ (3) ಜಾರಿಗೆ 2 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಇದು ಸಾಧ್ಯವಾಗುತ್ತದೆಯೇ? ಈ ಯೋಜನೆ ವಿಚಾರದಲ್ಲಿ ದೊಡ್ಡ ಹಗರಣವೇ ನಡೆಯುತ್ತಿದೆ. ಭೂಮಿ ಪರಿಹಾರ ವಿಚಾರದಲ್ಲಿ ವಕೀಲರುಗಳು ಹಣ ಮಾಡುತ್ತಿದ್ದಾರೆ ವಿನಃ ರೈತರಿಗೆ ಪರಿಹಾರ ದೊರೆಯುವುದಿಲ್ಲ. ಆದ ಕಾರಣಕ್ಕೆ ಪರಿಷತ್ ಸದಸ್ಯರಾದ ಪೂಜಾರ್ ಅವರು ಅಲ್ಲಿನ ರೈತರನ್ನು ಸಮಾಧಾನಪಡಿಸಿದರೆ ಹದಿನೈದು ದಿನಗಳಲ್ಲಿ ಒಂದು ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌

ಸುಪ್ರೀಂ ಕೊರ್ಟ್‌ನಿಂದ ಎಕರೆಗೆ 8-10 ಕೋಟಿ ಪರಿಹಾರ ನೀಡಿ ಎಂದು ಆದೇಶವಾಗಿದೆ. ಇಷ್ಟು ಪರಿಹಾರ ಮೊತ್ತ ಬೆಂಗಳೂರಿನಲ್ಲಿಯೇ ಇಲ್ಲ. ಆದ ಕಾರಣಕ್ಕೆ ಕಂದಾಯ ಇಲಾಖೆಯಿಂದ ನೀರಾವರಿ ಇಲಾಖೆಗೆ ಭೂಮಿ ಹಸ್ತಾಂತರ ಕುರಿತ ವಿಚಾರವನ್ನು ಸಚಿವ ಸಂಪುಟದ ಮುಂದಿಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಎಂಕೆ, ಬಿಜೆಪಿ ಯಾವುದೇ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ – ಟಿವಿಕೆ ವಿಜಯ್ ಘೋಷಣೆ

ಈಗಾಗಲೇ 75,563 ಎಕರೆ ಸಬ್ ಮರ್ಜ್ ಆಗಿದೆ. ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವುದು 2,543 ಎಕರೆಗೆ ಮಾತ್ರ. ವಿವಿಧ ಹಂತಗಳಲ್ಲಿ ಅಧಿಸೂಚನೆ ಹೊರಡಿಸಿರುವ ಅಡಿ 29,568 ಎಕರೆ ಭೂಮಿಯಿದೆ. 43,452 ಎಕರೆ ಭೂಮಿಗೆ ಅಧಿಸೂಚನೆ ಹೊರಡಿಸಲು ಬಾಕಿ ಇದೆ. ಕಾಲುವೆಗಳ ನಿರ್ಮಾಣಕ್ಕೆ 51 ಸಾವಿರ ಎಕರೆ ಬೇಕಾಗಿದೆ. ಇದರಲ್ಲಿ 23 ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಆರ್.ಸಿ ಭೂಮಿಗೆ 6,467 ಎಕರೆ ಬೇಕಾಗಿದೆ. ಇದರಲ್ಲಿ 50%ನಷ್ಟು ಎಂದರೆ 3,392 ಎಕರೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಹೆಚ್‌ಡಿಕೆ

ಶೀತ ವಾತಾವರಣ ತಡೆಯಲು 16.42 ಕೋಟಿ ವೆಚ್ಚ:
ಸದಸ್ಯ ಸೂರಜ್ ರೇವಣ್ಣ ಅವರು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಹೇಮಾವತಿ ಹಾಗೂ ಯಗಚಿ ಶೀತಪೀಡಿತವಲ್ಲ ಎಂದು ಘೋಷಣೆಯಾಗಿರುವ ಗ್ರಾಮಗಳು ಯಾವುವು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶೀತ ವಾತಾವರಣ ತಡೆಯಲು 12 ಕಾಮಗಾರಿಗಳಿಗೆ 16.42 ಕೋಟಿ ವೆಚ್ಚ ಮಾಡಲಾಗಿದೆ. ಮತ್ತೊಂದು ಅಂದಾಜು ವರದಿ ಮಾಡಿಸಿ 27 ಕೋಟಿ ಬೇಕಾಗಿದೆ ಎಂದು ವರದಿ ಸಲ್ಲಿಸಿದ್ದಾರೆ. ನಾವು ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ಈ ಬಗ್ಗೆ ಗಮನಹರಿಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ ಕೇಸ್ – ಆರೋಪಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಈ ಹಿಂದೆ ಶಾಸಕರುಗಳು ಜಲಸಂಪನ್ಮೂಲ ಇಲಾಖೆಯಿಂದ ರಸ್ತೆ, ಸಮುದಾಯ ಭವನ ಬೇಕು ಎಂದು ಶಿಫಾರಸು ಮಾಡುತ್ತಿದ್ದರು. ಈಗ ನಾನು ಅದನ್ನೆಲ್ಲಾ ನಿಲ್ಲಿಸಿದ್ದೇನೆ. ನಮ್ಮ ಇಲಾಖೆ ಹಣವನ್ನು ಕಾಲುವೆ ಅಭಿವೃದ್ಧಿ, ಪ್ರಮುಖ ಯೋಜನೆಗಳಿಗೆ ಮಾತ್ರ ಬಳಸುತ್ತಿದ್ದೇವೆ. ಈ ವಿಚಾರವಾಗಿಯೂ ಮತ್ತೊಂದು ವರದಿ ತರಿಸಿ ಗಮನಹರಿಸುತ್ತೇನೆ. ಸದಸ್ಯರು ಹೇಳಿರುವಂತೆ ನ್ಯಾಯಾಲಯದ ವಿಚಾರ ಪರಿಶೀಲನೆ ಮಾಡಲಾಗುವುದು. ಆನಂತರ ನಾವು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ

TAGGED:Andhra PradeshbengaluruDK ShivakumarmaharshtraUpper Krishna Projectಆಂಧ್ರಕೃಷ್ಣಾ ಮೇಲ್ದಂಡೆ ಯೋಜನೆಡಿಕೆ ಶಿವಕುಮಾರ್ಬೆಂಗಳೂರುಮಹಾರಾಷ್ಟç
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
11 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
14 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
42 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
50 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
52 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?