Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

Crime

ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

Public TV
Last updated: June 26, 2025 10:14 pm
Public TV
Share
4 Min Read
Andhra Pradesh Murder
SHARE

-ಹನಿಮೂನ್ ಹತ್ಯೆಯಂತೆ ಕೊಲ್ಲಲು ನಿರ್ಧರಿಸಿದ್ದ ಆರೋಪಿ ಐಶ್ವರ್ಯ
-ಕೊಲೆ ಬಳಿಕ 20 ಲಕ್ಷ ಸಾಲ ಪಡೆದು ಲಡಾಖ್, ಅಂಡಮಾನ್ ಹೋಗುವ ಪ್ಲ್ಯಾನ್‌ ಮಾಡಿದ್ದ ಜೋಡಿ

ಹೈದರಾಬಾದ್: ಮದುವೆಯಾದ ಒಂದು ತಿಂಗಳ ಬಳಿಕ ಪತ್ನಿ, ಆಕೆಯ ಪ್ರಿಯಕರ ಹಾಗೂ ಪತ್ನಿಯ ತಾಯಿ ಸೇರಿಕೊಂಡು ಗಂಡನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ಸಂಗತಿಗಳು ಬಯಲಾಗುತ್ತಿವೆ.

ಹೌದು, ಕೊಲೆಗೂ ಮುನ್ನ ಆರೋಪಿ ಐಶ್ವರ್ಯ ಹಾಗೂ ಆಕೆಯ ಪ್ರಿಯಕರ ತಿರುಮಲ್ ರಾವ್ (Tirumal Rao) ಸೇರಿಕೊಂಡು ಮೇಘಾಲಯ ಹನಿಮೂನ್ ಹತ್ಯೆಯ ಕುರಿತು ಚರ್ಚಿಸಿದ್ದರು. ಈ ಕುರಿತು ತನಿಖೆ ವೇಳೆ ಆರೋಪಿಗಳಿಬ್ಬರು ಮಾಹಿತಿ ಬಿಚ್ಚಿಟ್ಟಿದ್ದು, ಪ್ರಾರಂಭದಲ್ಲಿ ಮೇಘಾಲಯದ (Meghalaya) ರಾಜಾ ರಘುವಂಶಿಯ (Raja Raghuvanshi) ಕೊಲೆ ನಡೆದ ರೀತಿಯಲ್ಲಿ ತೇಜೇಶ್ವರ್‌ನ್ನು ಕೊಲ್ಲಲು ನಿರ್ಧರಿಸಿದ್ದರು ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

Andhra Kurnool Murder

ಪ್ಲ್ಯಾನ್‌ ಏನಿತ್ತು?
ಮೊದಲಿಗೆ ಐಶ್ವರ್ಯ ಹಾಗೂ ತೇಜೇಶ್ವರ್ ಇಬ್ಬರು ಸೇರಿಕೊಂಡು ಬೈಕ್‌ನಲ್ಲಿ ತೆರಳುತ್ತಾರೆ. ಮಾರ್ಗಮಧ್ಯೆ ಹಂತಕರು ಅವರಿಬ್ಬರನ್ನು ಅಡ್ಡಗಟ್ಟಿ, ತೇಜೇಶ್ವರ್‌ನನ್ನು ಕೊಲೆ ಮಾಡುತ್ತಾರೆ. ಬಳಿಕ ಐಶ್ವರ್ಯ ಪ್ರಿಯಕರ ತಿರುಮಲ್ ರಾವ್ ಜೊತೆ ಅಲ್ಲಿಂದ ಪರಾರಿಯಾಗುತ್ತಾಳೆ. ಇದರಿಂದ ಪೊಲೀಸರು ಗೊಂದಲಕ್ಕೊಳಗಾಗಿ, ಯಾರೋ ಕೊಲೆ ಮಾಡಿ, ಐಶ್ವರ್ಯಳನ್ನು ಕಿಡ್ನ್ಯಾಪ್‌ ಮಾಡಿದ್ದಾರೆ ಎಂದುಕೊಳ್ಳುತ್ತಾರೆ ಎಂದು ಪ್ಲ್ಯಾನ್‌ ಮಾಡಿದ್ದರು. ಇವರಿಬ್ಬರು ಪ್ಲ್ಯಾನ್‌ ಮಾಡಿದಂತೆಯೇ ಮೇಘಾಲಯದಲ್ಲಿ ರಾಜಾ ರಘುವಂಶಿಯ ಕೊಲೆ ನಡೆದಿತ್ತು. ಆದರೆ ಮೇಘಾಲಯ ಪೊಲೀಸರ ತನಿಖೆ ವೇಳೆ ಸೋನಮ್ ಸಿಕ್ಕಿಬಿದ್ದಳು, ಕೊನೆಗೆ ಪೊಲೀಸರ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಳು. ಹೀಗಾಗಿ ತಮ್ಮ ಕೇಸ್‌ಲ್ಲಿ ಕೊನೆಗೆ ಹೀಗಾಗಬಹುದು ಎಂಬ ಭಯದಿಂದ ಈ ಪ್ಲ್ಯಾನ್‌ ಅನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.

ಅದಲ್ಲದೇ ಐಶ್ವರ್ಯ ತನ್ನ ಪತಿಯ ಚಲನವಲನಗಳನ್ನು ಪತ್ತೆಹಚ್ಚಲು ಆತನ ಬೈಕ್‌ನಲ್ಲಿ ಜಿಪಿಎಸ್‌ನ್ನು ಅಳವಡಿಸಿದ್ದಳು. ಜೊತೆಗೆ ಇದೆಲ್ಲವನ್ನು ನೋಡಿಕೊಳ್ಳಲು ರಾಜೇಶ್ ಎಂಬಾತನನ್ನು ನೇಮಿಸಿದ್ದಳು. ಕೊಲೆ ಬಳಿಕ 20 ಲಕ್ಷ ಸಾಲ ಪಡೆದು ಐಶ್ವರ್ಯ ಹಾಗೂ ರಾವ್ ಇಬ್ಬರು ಸೇರಿಕೊಂಡು ಲಡಾಖ್‌ಗೆ ಹೋಗುವ ಪ್ಲ್ಯಾನ್‌ ಮಾಡಿದ್ದರು. ಜೊತೆಗೆ ಟಿಕೆಟ್ ಕೂಡ ಬುಕ್ ಮಾಡಿದ್ದರು. ಜೊತೆಗೆ ಅಂಡಮಾನ್‌ಗೆ ಹೋಗುವ ಯೋಜನೆಯೂ ಇತ್ತು ಎಂದು ತಿಳಿದುಬಂದಿದೆ.

ಒಟ್ಟು ತೇಜೇಶ್ವರ್‌ನ್ನು ಕೊಲೆ ಮಾಡಲು ಐದು ಬಾರಿ ಯತ್ನಿಸಲಾಗಿತ್ತು ಎಂದು ತಿಳಿದುಬಂದಿದೆ. ಸದ್ಯ ಪ್ರಕರಣ ಸಂಬಂಧ 8 ಜನರನ್ನು ಬಂಧಿಸಲಾಗಿದ್ದು, ಪತ್ನಿ ಐಶ್ವರ್ಯ, ಆಕೆಯ ಪ್ರಿಯಕರ ತಿರುಮಲ್ ರಾವ್, ಆಕೆಯ ತಾಯಿ ಸುಜಾತಾ, ತಿರುಮಲ್ ರಾವ್ ತಂದೆ, ಮಾಜಿ ಹೆಡ್ ಕಾನ್‌ಸ್ಟೆಬಲ್, ಹಂತಕರಾದ ನಾಗೇಶ್, ಪರಶುರಾಮ್ ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: 10 ದಿನದಲ್ಲಿ ಪ್ರೀತಿ, ಪ್ರಣಯ – ಇನ್ಸ್ಟಾದಲ್ಲಿ ಪರಿಚಯವಾದ ವಿವಾಹಿತ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯ!

ತಾಯಿ-ಮಗಳ ತ್ರಿಕೋನ ಪ್ರೇಮ:
ಆರೋಪಿ ಐಶ್ವರ್ಯ ತಾಯಿ ಸುಜಾತಾ ಬ್ಯಾಂಕ್‌ನಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಐಶ್ವರ್ಯ ತಾಯಿಗೆ ತಿರುಮಲ್ ರಾವ್ ಎಂಬ ಅಧಿಕಾರಿಯ ಪರಿಚಯವಾಗಿತ್ತು. ಬಳಿಕ 2016ರಲ್ಲಿ ಅವರಿಬ್ಬರ ನಡುವೆ ಸಂಬಂಧ ಬೆಳೆಯಿತು. ಅದಾದ ನಂತರ ಒಂದು ಬಾರಿ ಸುಜಾತಾ ರಜೆಗೆಂದು ಹೋದಾಗ ಐಶ್ವರ್ಯ ಹಾಗೂ ತಿರುಮಲ್ ರಾವ್ ನಡುವೆ ಸಂಬಂಧ ಬೆಳೆಯಿತು. ಬಳಿಕ 2019ರಲ್ಲಿ ತಿರುಮಲ್ ರಾವ್‌ಗೆ ಬೇರೆಯೊಬ್ಬರ ಜೊತೆ ಮದುವೆಯಾಯಿತು. ಆತನು ಕೂಡ ತನ್ನ ಹೆಂಡತಿಯನ್ನು ಕೊಲ್ಲಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಮಗಳು ತಿರುಮಲ್ ರಾವ್ ಜೊತೆ ಸಂಬಂಧ ಹೊಂದಿದ್ದಾಳೆಂದು ಸುಜಾತಾಗೆ ಗೊತ್ತಾದಾಗ ಆ ಸಂಬಂಧವನ್ನು ಕೊನೆಗೊಳಿಸುವಂತೆ ತಿಳಿಸಿದ್ದಳು. ಬಳಿಕ ತೇಜೇಶ್ವರ್‌ನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಳು. ಅದಾದ ನಂತರ ಫೆಬ್ರವರಿಯಲ್ಲಿ ಮದುವೆ ನಿಶ್ಚಯಿಸಲಾಗಿತ್ತು. ಆದರೆ ಅದೇ ವೇಳೆ ಐಶ್ವರ್ಯ ಕಾಣೆಯಾದಳು. ಓಡಿಹೋಗಿರಬಹುದು ಅಂದುಕೊಂಡಿದ್ದೆವು, ಆದರೆ ಸ್ವಲ್ಪ ದಿನಗಳ ನಂತರ ಮನೆಗೆ ಮರಳಿದ ಐಶ್ವರ್ಯ, ನನ್ನ ಸ್ನೇಹಿತೆಯೊಬ್ಬಳು ವರದಕ್ಷಿಣೆ ಕಿರುಕುಳದಿಂದ ಬಳಲುತ್ತಿದ್ದಳು. ಆಕೆಯನ್ನು ಭೇಟಿಯಾಗಲು ಹೋಗಿದ್ದೆ ಅಂತ ಹೇಳಿದ್ದಳು. ಬಳಿಕ ನಾನು ತೇಜೇಶ್ವರ್‌ನ್ನನ್ನ ಪ್ರೀತಿಸುತ್ತಿದ್ದೇನೆ ಅವನನ್ನೇ ಮದುವೆಯಾಗುತ್ತೇನೆ ಎಂದಿದ್ದಳು. ಆದರೆ ಕುಟುಂಬಸ್ಥರ ಮಾಹಿತಿ ಪ್ರಕಾರ, ತೇಜೇಶ್ವರ್‌ಗೆ ಆಕೆಯೊಂದಿಗೆ ಮದ್ವೆ ಬೇಡ ಅಂತಲೇ ಹೇಳಿದ್ದೆವು. ಆದ್ರೆ ಮಗ ನಮ್ಮ ಮಾತು ಕೇಳದಿದ್ದರಿಂದ ಮೇ ತಿಂಗಳಲ್ಲಿ ಮದುವೆ ನಿಶ್ಚಯಿಸಲಾಯಿತು ಎಂದರು. ಅವನು ಕಾಣೆಯಾದ ಬಳಿಕ ಅವಳು ಅಳುತ್ತಿರಲಿಲ್ಲ, ದುಃಖ ಪಡಲಿಲ್ಲ. ಇದೆಲ್ಲವನ್ನು ಗಮನಿಸಿ ನಮಗೆ ಆಕೆಯ ಮೇಲೆ ಅನುಮಾನ ಉಂಟಾಗಿತ್ತು. ಹೀಗಾಗಿ ನಾವು ಆಕೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದೆವು ಎಂದು ತಿಳಿಸಿದ್ದಾರೆ.

ಘಟನೆ ಏನು?
ಮೇ 18ರಂದು ಮೃತ ತೇಜೇಶ್ವರ್ ಹಾಗೂ ಐಶ್ವರ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಜೂ.17ರಂದು ತೇಜೇಶ್ವರ್ ನಾಪತ್ತೆಯಾಗಿರುವುದಾಗಿ ದೂರು ದಾಖಲಾಗಿತ್ತು. ದೂರಿನ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರು, ಕರ್ನೂಲ್ ನಗರದ ಸುಮಾರು 30-40 ಕಿ.ಮೀ ದೂರದಲ್ಲಿರುವ ಪಣ್ಯಂ ಮಂಡಲದ ಸುಗಲಿಮೆಟ್ಟುವಿನಲ್ಲಿ ಆತನ ಮೃತದೇಹವನ್ನು ಪತ್ತೆಹಚ್ಚಿದ್ದರು. ಆತನ ಮುಂಗೈಯಲ್ಲಿ ತೆಲುಗುವಿನಲ್ಲಿ ಅಮ್ಮ ಎಂದು ಬರೆಯಲಾಗಿತ್ತು. ದೇಹದ ಮೇಲೆ ಚಾಕುವಿನಿಂದಾದ ಗಾಯದ ಗುರುತು, ಕುತ್ತಿಗೆ ಸೀಳಿದ ಗಾಯಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ:Honeymoon Murder | ಕೊನೆಗೂ ತಮ್ಮಿಬ್ಬರ ಸಂಬಂಧ ಒಪ್ಪಿಕೊಂಡ ಸೋನಂ ರಘುವಂಶಿ – ರಾಜ್

TAGGED:Andhra PradeshcrimeHoneymoonKarnoolMeghalayaಆಂಧ್ರ ಪ್ರದೇಶ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
14 seconds ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
3 minutes ago
petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
30 minutes ago
Chitradurga Murder
Chitradurga

ಜಗಳ ಬಿಡಿಸಲು ಮುಂದಾದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ; ಗಂಡ – ಹೆಂಡತಿ ಜಗಳದಲ್ಲಿ ಅಮಾಯಕ ಬಲಿ

Public TV
By Public TV
37 minutes ago
dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
3 hours ago
Vijayanagara Brother Murder
Bellary

ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?