Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶಾಖಪಟ್ಟಣಂ ದುರಂತ- 2 ಟ್ಯಾಂಕಿನ ಒಟ್ಟು 10 ಸಾವಿರ ಟನ್ ವಿಷಾನಿಲ ಸೋರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಶಾಖಪಟ್ಟಣಂ ದುರಂತ- 2 ಟ್ಯಾಂಕಿನ ಒಟ್ಟು 10 ಸಾವಿರ ಟನ್ ವಿಷಾನಿಲ ಸೋರಿಕೆ

Latest

ವಿಶಾಖಪಟ್ಟಣಂ ದುರಂತ- 2 ಟ್ಯಾಂಕಿನ ಒಟ್ಟು 10 ಸಾವಿರ ಟನ್ ವಿಷಾನಿಲ ಸೋರಿಕೆ

Public TV
Last updated: May 7, 2020 2:19 pm
Public TV
Share
2 Min Read
Visakhapatnam
SHARE

– 13 ಮಂದಿ ಸಾವು, 1000ಕ್ಕೂ ಹೆಚ್ಚು ಮಂದಿ ಅಸ್ವಸ್ಥ
– ನಾಯಿ, ಪಕ್ಷಿ, ಹಸುಗಳು ಅಸ್ವಸ್ಥ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ರಾಸಾಯನಿಕ ಕಾರ್ಖಾನೆಯ ವಿಷ ಅನಿಲ ಸೋರಿಕೆ ದುರಂತ ಒಟ್ಟು 13 ಮಂದಿಯನ್ನು ಬಲಿಪಡೆದಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳೀವೆ. ಇದರ ಜೊತೆ ಸುಮಾರು 180 ಮಂದಿಯ ಸ್ಥಿತಿ ಗಂಭೀರವಾಗಿದ್ದು, 1000ಕ್ಕೂ ಹೆಚ್ಚು ಮಂದಿ ಅಸ್ವಸ್ಥವಾಗಿದ್ದಾರೆ.

ಇಂದು ಮುಂಜಾನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್.ಆರ್.ವೆಂಕಟಪುರಂನಲ್ಲಿರುವ ಬಹುರಾಷ್ಟ್ರೀಯ ಕಂಪನಿ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ರಾಸಾಯನಿಕ ಅನಿಲ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಇದು ಗಾಳಿಯಲ್ಲಿ ಸೇರಿಕೊಂಡು ಸುತ್ತಮುತ್ತಲಿನ ಹಳ್ಳಿಗಳಿಗೂ ಹರಡಿದೆ. ಕಾರ್ಖಾನೆಯಲ್ಲಿ ಇದ್ದ ಎರಡು ಟ್ಯಾಂಕ್‍ಗಳಲ್ಲಿದ್ದ ವಿಷಾನಿಲ ಸೋರಿಕೆಯಾಗಿದ್ದು, ಒಟ್ಟು 10 ಸಾವಿರ ಟನ್ ವಿಷ ಅನಿಲ ಸೋರಿಕೆಯಾಗಿದೆ.

Visakhapatnam 2

ಎರಡು ಟ್ಯಾಂಕ್‍ಗಳಲ್ಲಿ ಇದ್ದ ಸ್ಪೈರಿನ್ ಎಂಬ ಅನಿಲ ಸೋರಿಕೆಯಾಗಿದ್ದು, ಇದು ಗಾಳಿಯಲ್ಲಿ ವೇಗವಾಗಿ ಹರಡಿದೆ. ಪರಿಣಾಮ ಸುತ್ತಮುತ್ತಲಿನ ಹಳ್ಳಿಯ ಜನ, ಬೆಳಗ್ಗಿನ ವೇಳೆ ವಾಕಿಂಗ್ ಬಂದವರು ಮಕ್ಕಳು ರಸ್ತೆಯಲ್ಲಿ ಓಡಾಡುವವರು ನಿಂತಲ್ಲೇ ಕುಸಿದು ಬಿದ್ದಿದ್ದಾರೆ. ಜೊತೆಗೆ ಈ ವಿಷ ಅನಿಲ ಸೇವನೆಯಿಂದ ನಾಯಿಗಳು ಮತ್ತು ಹಸುಗಳು ಪಕ್ಷಿಗಳು ಕೂಡ ಸಾವನ್ನಪ್ಪುತ್ತಿವೆ.

Visakhapatnam2

ಈ ಕಾರ್ಖಾನೆ ವಿಶಾಖಪಟ್ಟಣಂ ನಗರದಿಂದ 14 ಕಿಲೋಮೀಟರ್ ದೂರದಲ್ಲಿರುವ ಆರ್.ಆರ್.ವೆಂಕಟಪುರಂನಲ್ಲಿ ಇದ್ದು, ಈ ಕಂಪನಿ ದಕ್ಷಿಣ ಕೊರಿಯಾದ ಬ್ಯಾಟರಿ ತಯಾರಕ ಎಲ್.ಜಿ ಕೆಮಿಕಲ್ ಲಿಮಿಟೆಡ್ ಎಂದು ತಿಳಿದು ಬಂದಿದೆ. ಈ ವಿಚಾರವಾಗಿ ಮಾತನಾಡಿರುವ ಕಂಪನಿಯ ಅಡಳಿತ ಮಂಡಳಿ, ಸೋರಿಕೆ ಹೇಗೆ ಆಯ್ತು ಮತ್ತು ಅದಕ್ಕೆ ನಿಖರ ಕಾರಣವೇನು? ಜನರು ಸಾಯುವುದಕ್ಕೆ ಕಾರಣ ಮತ್ತು ಘಟನೆಯ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದೆ.

GAS LEAK

ವಿಶಾಖಪಟ್ಟಣಂನ ಸಹಾಯಕ ಪೊಲೀಸ್ ಆಯುಕ್ತ ಸ್ವರೂಪಾ ರಾಣಿ ಮಾತನಾಡಿ, ಮಾರ್ಚ್ ಅಂತ್ಯದಿಂದ ದೇಶವೇ ಕೊರೊನಾ ವೈರಸ್ ಲಾಕ್‍ಡೌನ್ ಆಗಿದ್ದರಿಂದ ಈ ಕಾರ್ಖಾನೆ ಎರಡು ತಿಂಗಳು ಕಾರ್ಯನಿರ್ವಹಿಸಿರಲಿಲ್ಲ. ಆದರೆ ಈಗ ಲಾಕ್‍ಡೌನ್ ಸಡಿಲಿಕೆ ಆದ ಮೇಲೆ ಕಾರ್ಖಾನೆಯನ್ನು ತೆರೆಯಲಾಗಿದೆ. ಈ ಟ್ಯಾಂಕ್‍ಗಳಲ್ಲಿ ಮೊದಲೇ ಉಳಿದಿದ್ದ ಅನಿಲ ಈಗ ರಾಸಾಯನಿಕ ಕ್ರಿಯೆಗೆ ಒಳಪಟ್ಟು ಶಾಖೋತ್ಪತ್ತಿಯಾಗಿ ಸೋರಿಕೆಯಾಗಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

Visakhapatnam 4

ಸ್ಥಳೀಯ ಯುವಕನೋರ್ವ ಘಟನೆಯ ಬಗ್ಗೆ ವಿವರಿಸಿ, ನಾವು ಬೆಳಗ್ಗೆ ಎದ್ದಾಗ ಗಾಳಿಯಲ್ಲಿ ದಟ್ಟವಾಗಿ ಏನೋ ಕಾಣಿಸಿಕೊಂಡಿತು. ಆ ಸಮಯದಲ್ಲಿ ನಮಗೆ ಉಸಿರಾಡಲು ಕಷ್ಟವಾಯಿತು. ತಕ್ಷಣ ನಾವು ಮನೆಯಿಂದ ಮೂರು ಕಿ.ಮೀ ಓಡಿ ಬಂದಿವೆ. ಆದರೆ ಅದು ತುಂಬ ವೇಗವಾಗಿ ಗಾಳಿಯಲ್ಲಿ ಹರಡಿತು. ಈಗ ಉಸಿರಾಡಲು ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾನೆ.

CORE & VULNERABLE AREAS MAP OF PVC GAS LEAKAGE. REQUESTING CITIZENS TO USE WET MASKS OR WET CLOTH TO COVER YOUR NOSE AND MOUTH. pic.twitter.com/7u9U5zDBLN

— Greater Visakhapatnam Municipal Corporation (GVMC) (@GVMC_VISAKHA) May 7, 2020

ಈಗ ಕಾರ್ಖಾನೆಯ ಮೂರು ಕಿ.ಮೀ ಅಂತರದಲ್ಲಿ ಇರುವ ಎಲ್ಲಾ ಜನರನ್ನು ಸ್ಥಳಾಂತರ ಮಾಡಿದ್ದೇವೆ ಎಂದು ವಿಶಾಖಪಟ್ಟಣಂ ಮಹಾನಗರ ಪಾಲಿಕೆ ಟ್ವೀಟ್ ಮಾಡಿದೆ. ಜೊತೆಗೆ ಎಲ್‍ಜಿ ಪಾಲಿಮರ್ಸ್ ಕಾರ್ಖಾನೆಯಲ್ಲಿ ವಿಷ ಅನಿಲ ಸೋರಿಕೆಯನ್ನು ಗುರುತಿಸಲಾಗಿದೆ. ಹೀಗಾಗಿ ಸುರಕ್ಷತಾ ಮುನ್ನೆಚ್ಚರಿಕೆಗಾಗಿ ಸುತ್ತಮುತ್ತಲಿನ ನಾಗರಿಕರು ಮನೆಗಳಿಂದ ಹೊರಬರದಂತೆ ಪಾಲಿಕೆ ಮನವಿ ಮಾಡಿಕೊಂಡಿದೆ.

GVMC officials blowing water through mist blowers to subside the effect of Syrene Gas leak at Gopalapatnam area of Visakhapatnam. pic.twitter.com/jBuHMYR4zF

— Greater Visakhapatnam Municipal Corporation (GVMC) (@GVMC_VISAKHA) May 7, 2020

ಈ ವಿಚಾರವಾಗಿ ಮಾತನಾಡಿರುವ ವಿಶಾಖಪಟ್ಟಣಂನ ಎಸಿಪಿ ರಾಣಿ, ಇಂದು ಬೆಳಗ್ಗೆ ಸುಮಾರು 4 ಗಂಟೆಗೆ ನಮ್ಮ ಅಧಿಕಾರಿಯೊಬ್ಬರು ಕರೆ ಮಾಡಿ ವಿಷಯ ತಿಳಿಸಿದರು. ನಾನು ತಕ್ಷಣ ಅಲ್ಲಿಗೆ ಹೋದೆ. ಅಲ್ಲಿ ಹಲವಾರು ಜನರು ಪ್ರಜ್ಞೆ ಇಲ್ಲದೇ ಬಿದ್ದಿದ್ದರು. ನಾನೇ ಸುಮಾರು 15 ಜನರನ್ನು ಅಂಬುಲೆನ್ಸ್ ಗೆ ಹತ್ತಿಸಿ ಕಳುಹಿಸಿದೆ. ಹಳ್ಳಿಗಳಿಂದ ಜನರು ಓಡಿಬಂದು ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ತಿಳಿಸಿದ್ದಾರೆ.

TAGGED:Andhra PradeshFactorygas leakPublic TVvillagersVisakhapatnamಅನಿಲ ಸೋರಿಕೆಆಂಧ್ರಪ್ರದೇಶಕಾರ್ಖಾನೆಗ್ರಾಮಸ್ಥರುಪಬ್ಲಿಕ್ ಟಿವಿವಿಶಾಖಪಟ್ಟಣ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
19 seconds ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
43 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
44 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?