ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ಒಂದು ವರ್ಷದ ಮಗು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಒಡಿಶಾ ಮೂಲದ ಸಕ್ರಜಿತ್ ಭಂಜೆ ತನ್ನ ಪತ್ನಿ ಸುಕ್ಲಾ ಹಾಗೂ ಒಂದು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಂದಿದ್ದ. ಬಳಿಕ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಾಣ ಬಿಟ್ಟಿದ್ದಾನೆ. ವಿಶಾಖಪಟ್ಟಣ ಜಿಲ್ಲೆಯ ಮಧುರ್ವಾಡಾ ಎಂಬಲ್ಲಿ ಶನಿವಾರ ಈ ದುರಂತ ಸಂಭವಿಸಿದೆ.
ಒಡಿಶಾ ಮೂಲದ ಸಕ್ರಜಿತ್ ಭಂಜೆ ಸುಕ್ಲಾರನ್ನು 2017ರಲ್ಲಿ ವಿವಾಹವಾಗಿದ್ದ. ಮಗು ಹಾಗೂ ಪತ್ನಿಯನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದ ಸಕ್ರಜಿತ್ ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ಭಂಜೆ ಆಹಾರ ಇಲಾಖೆಯ ಉದ್ಯೋಗಿಯಾಗಿದ್ದನಂತೆ. ಭಂಜೆ, ಸುಕ್ಲಾ ಹಾಗೂ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಭಂಜೆ ಯಾವ ಕಾರಣಕ್ಕಾಗಿ ಪತ್ನಿ ಹಾಗೂ ಮಗುವನ್ನು ಕೊಲೆ ಮಾಡಿದ್ದಾನೆ. ಆತ್ಮಹತ್ಯೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.