Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರೇರೇ ಯಾರೋ ಇವಳು ಅಂತಿದ್ದಾರೆ ವಿನಯ್ ರಾಜ್ ಕುಮಾರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅರೇರೇ ಯಾರೋ ಇವಳು ಅಂತಿದ್ದಾರೆ ವಿನಯ್ ರಾಜ್ ಕುಮಾರ್!

Cinema

ಅರೇರೇ ಯಾರೋ ಇವಳು ಅಂತಿದ್ದಾರೆ ವಿನಯ್ ರಾಜ್ ಕುಮಾರ್!

Public TV
Last updated: June 28, 2025 6:13 pm
Public TV
Share
4 Min Read
Vinay Rajkumar
SHARE

ಈಗಾಗಲೇ ಸಿನಿಪ್ರಿಯರ ಮನಸ್ಸನ್ನ ಗೆದ್ದಿರುವಂತಹ `ಅಂದೊಂದಿತ್ತು ಕಾಲ’ (Andondittu Kaala) ಚಿತ್ರದ `ಮುಂಗಾರು ಮಳೆಯಲ್ಲಿ…’ ಎಂಬ ಹಾಡು ಸೂಪರ್ ಹಿಟ್ ಆಗಿದ್ದು, ಯೂಟ್ಯೂಬ್‌ನಲ್ಲಿ 36.4 ಮಿಲಿಯನ್ ವೀವ್ಸ್ ಆಗಿದೆ. ಹಾಗೆಯೇ ಈ ಸಾಂಗ್‌ನ ರೀಲ್ಸ್ ಬಹಳಷ್ಟು ಅಭಿಮಾನಿಗಳು ಮಾಡಿ ಅಪ್ಲೋಡ್ ಕೂಡ ಮಾಡಿದ್ದಾರೆ. ಇದು ಇಡೀ ಚಿತ್ರತಂಡದ ಸಂಭ್ರಮವನ್ನು ಹೆಚ್ಚು ಮಾಡಿದ್ದು, ಚಿತ್ರ ಯಶಸ್ವಿ ಆಗುವ ನಿರೀಕ್ಷೆಯಲ್ಲಿದ್ದಾರೆ. ಈಗ ತಮ್ಮ ಚಿತ್ರದ ಎರಡನೇ ಹಾಡನ್ನು ರಿಲೀಸ್ ಮಾಡುವುದರ ಜೊತೆಗೆ ಪತ್ರಿಕಾಗೋಷ್ಠಿ ಆಯೋಜನೆ ಮಾಡಿತ್ತು ಚಿತ್ರತಂಡ.

Vinay Rajkumar 2

ವೇದಿಕೆಯ ಮೇಲೆ ಈ ಚಿತ್ರದ ಮೊದಲ ಹಾಡಿನ ಫೀಮೇಲ್ ವರ್ಷನ್ ರುಚಿತ ರಾಜೇಶ್ ಎಂಬ ಯುವ ಗಾಯಕಿ ಹಾಡಿ ಗಮನ ಸೆಳೆದರು. ತದನಂತರ ಎರಡನೇ ಗೀತೆಯನ್ನು ಇಡೀ ರಾಜ್ಯಕ್ಕೆ 10ನೇ ತರಗತಿಯಲ್ಲಿ ಫಸ್ಟ್ ಬಂದ ಮಲ್ಲಸಂದ್ರದಲ್ಲಿರುವ ಬಿ.ಎನ್ ಆರ್ ಪಬ್ಲಿಕ್ ಸ್ಕೂಲ್ ಶಾಲೆಯ ವಿದ್ಯಾರ್ಥಿಗಳಿಂದ (School Students) ರಿಲೀಸ್ ಮಾಡಿಸಿದ್ದು ಮತ್ತೊಂದು ವಿಶೇಷವಾಗಿದ್ದು, ಇದಕ್ಕೆ ಕಾರಣ ಏನು ಎಂಬುವುದು ಹಾಡಿನಲ್ಲಿ ತಿಳಿಯುತ್ತದೆ.

ನಟ ವಿನಯ್ ರಾಜಕುಮಾರ್ (Vinay Rajkumar) ಮಾತನಾಡುತ್ತಾ ಈ ಚಿತ್ರದ ಮೊದಲ ಸಾಂಗ್ ದೊಡ್ಡ ಹಿಟ್ ಆಗಿದೆ. ನಾನು ಕೂಡ ಸಾಂಗ್ ಅನ್ನು ಫ್ಯಾನ್ಸುಗಳು ರೀಲ್ಸ್ ಮಾಡಿದ್ದು ನೋಡಿದೆ. ಮಿಲಿಯನ್ಸ್ ವಿವ್ಯೂ ರಿಚ್ ಆಗಿರೋದು ನಮ್ಮ ತಂಡಕ್ಕೂ ನನಗೂ ಖುಷಿ ಇದೆ. ಈಗ ನಮ್ಮ ಚಿತ್ರದ 2ನೇ ಹಾಡು ಬಿಡುಗಡೆಯಾಗುತ್ತಿದೆ, ಇದು ನನ್ನ ಪೆವರೇಟ್ ಗೀತೆ. ನಾನು ನಿರ್ದೇಶಕ ಕೀರ್ತಿಗೆ ಇದನ್ನೇ ಮೊದಲು ಬಿಡಿ ಎಂದಿದ್ದೆ. ಈ ಚಿತ್ರದಲ್ಲಿ ನಾನು 16 ವರ್ಷದ ಹುಡುಗನ ಗೆಟಪ್‌ನಲ್ಲಿ ಮಾಡುವುದು ಚಾಲೆಂಜ್ ಆಗಿತ್ತು. ವೈಟ್ ಲಾಸ್ ಮಾಡುವುದು ಕಷ್ಟ ಆಗಿತ್ತು. ಹಾಡು ತುಂಬಾ ಚೆನ್ನಾಗಿ ಬಂದಿದೆ. ಲೊಕೇಶನ್, ಸಾಂಗ್ ಎಲ್ಲವೂ ಸೊಗಸಾಗಿದೆ. ಶಾಲಾ ದಿನಗಳಲ್ಲಿ ಇಷ್ಟಪಟ್ಟ ಹುಡುಗಿಯ ಹಿಂದೆ ಓಡಾಡಿದ್ದೇನೆ. ಆದರೆ ನಿಜ ಜೀವನದಲ್ಲಿ ಹತ್ತನೇ ತರಗತಿ ಓದುವಾಗ ನಾನು ಬಹಳ ಮುಗ್ಧ ಹುಡುಗ. ಮೂರು ಶೇಡ್ ಗಳಲ್ಲಿ ನನ್ನ ಪಾತ್ರ ಸಾಗುತ್ತದೆ. ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆ. ನಿಮ್ಮ ಬೆಂಬಲ ಇರಲಿ ಎಂದರು. ಇನ್ನು ಈ ಚಿತ್ರದ ಶಾಲಾ ವಿದ್ಯಾರ್ಥಿಯ ಹಾಡಿನಲ್ಲಿ ಕಾಣಿಸಿಕೊಂಡಿರುವ ಯುವ ನಟಿ ನಿಶಾ ರವಿಕೃಷ್ಣನ್ ಮಾತನಾಡುತ್ತಾ ಇದರಲ್ಲಿ ನನ್ನದೊಂದು ಸಣ್ಣ ಪಾತ್ರವಾದರೂ ಬಹಳ ಇಂಪಾರ್ಟೆಂಟ್ ಆಗಿದೆ. ನಿರ್ದೇಶಕರು, ನಿರ್ಮಾಪಕರು ತುಂಬಾ ಸಹಕಾರ ನೀಡಿದ್ದಾರೆ. ಅದೇ ರೀತಿ ನಟ ವಿನಯ್ ರಾಜಕುಮಾರ್ ಜೊತೆ ಅಭಿನಯಿಸಿದ್ದು ಖುಷಿ ತಂದಿದೆ. ಸುಂದರ ಪ್ರಮುಖ ಪಾತ್ರವಾಗಿದ್ದು, ಖಂಡಿತ ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂದರು.

Vinay Rajkumar 4

ನಿರ್ದೇಶಕ ಕೀರ್ತಿ ಕೃಷ್ಣಪ್ಪ ಮಾತನಾಡುತ್ತಾ ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈಗಾಗಲೇ ನಮ್ಮ ಚಿತ್ರದ ಮೊದಲ ಸಾಂಗ್ಸ್ ಮಿಲಿಯನ್ಸ್ ಗಟ್ಟಲೆ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದು, ಒಳ್ಳೆ ರೆಸ್ಪಾನ್ಸ್ ನಮಗೆ ಸಿಕ್ಕಿದೆ. ನಾವು ಆ ಸಾಂಗ್ ಶೂಟಿಂಗ್ ಮಾಡುವ ಬಹಳಷ್ಟು ಮಳೆ ಇತ್ತು, ಕೊರೋನಾ ಸಂದರ್ಭದಲ್ಲಿ ಚಿತ್ರೀಕರಣ ಮಾಡಿದ್ದು, ಆಗ ಯುಗಾದಿಯ ಹಬ್ಬ, ನಿರ್ಮಾಪಕರು ನಮ್ಮ ಜೊತೆ ಇದ್ದು ಸಂಭ್ರಮಿಸಿದ್ದ ಕ್ಷಣ ಮರೆಯಲು ಸಾಧ್ಯವಿಲ್ಲ. ನಮಗೆ ಏನು ಬೇಕು ಅದೆಲ್ಲವನ್ನು ನಿರ್ಮಾಪಕ ಭುವನ್ ಸುರೇಶ್ ನೀಡಿದ್ದಾರೆ. ನಿರ್ಮಾಪಕರು ಚಿತ್ರ ಚೆನ್ನಾಗಿ ಬರಲು ಬಹಳಷ್ಟು ಸಪ್ಪೋರ್ಟ್ ಮಾಡುತ್ತಿದ್ದಾರೆ. ನಮ್ಮ ಚಿತ್ರದಲ್ಲಿ ವಿನಯ್ ರಾಜಕುಮಾರ್ ಬಹಳ ಸಪೋರ್ಟ್ ಮಾಡಿದ್ದು, ತುಂಬಾ ಸೈಲೆಂಟ್ ವ್ಯಕ್ತಿತ್ವ, ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

Vinay Rajkumar 3

ಈಗ ಬಿಡುಗಡೆಯಾಗಿರುವ ಹಾಡಿಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ವಿನಯ್ ರಾಜಕುಮಾರ್ ಹಾಗೂ ನಿಶಾ ಬಹಳ ಸೊಗಸಾಗಿ ಅಭಿನಯಿಸಿದ್ದಾರೆ. ನಿರ್ಮಾಪಕರ ಪತ್ನಿಯವರು ನಟಿ ನಿಶಾ ರನ್ನು ಆಯ್ಕೆ ಮಾಡಿದ್ದು ಮರೆಯುವಂತಿಲ್ಲ. ನಮ್ಮ ಚಿತ್ರದ ಇನ್ನೂ ಮೂರು ಹಾಡು, ಟ್ರೇಲರ್ ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ. ಆಗಸ್ಟ್ 29ರಂದು ಸಿನಿಮಾ ರಿಲೀಸ್ ಆಗಲಿದೆ. ಇದೊಂದು ಪ್ಯೂರ್ ಲವ್ ಹಾಗೂ ಗೆಳೆತನ ಚಿತ್ರವಾಗಿದ್ದು, ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತೆ ಎಂದರು.

ಭುವನ್ ಮ್ಯೂವಿಸ್ ಬ್ಯಾನರ್ ನ ಭುವನ್ ಸುರೇಶ್ ಮಾತನಾಡುತ್ತಾ ನನಗೆ ನಮ್ಮ ಹುಡುಗರ ಶ್ರಮದ ಬಗ್ಗೆ ಬಹಳ ನಂಬಿಕೆ ಇದೆ. ಚಿತ್ರ ಚೆನ್ನಾಗಿ ಬಂದಿದೆ. ಇದಕ್ಕೂ ಮೊದಲು ನಾನು ಕಾಲಾಪತ್ತರ ಚಿತ್ರ ಮಾಡಿದ್ದೆ. ಇದು ನನ್ನ ಎರಡನೇ ಚಿತ್ರ. ಈಗಾಗಲೇ ಮುಂಗಾರು ಮಳೆಯಲ್ಲಿ… ಹಾಡು ದೊಡ್ಡ ಹಿಟ್ ಆಗಿದ್ದು , ನನ್ನ ರಾಜಕೀಯ ಸ್ನೇಹಿತರು ಹಾಗೂ ನಮ್ಮೂರಿನ ಜನರು ಹಾಡಿನ ಬಗ್ಗೆ ಮೆಚ್ಚುಗೆಯನ್ನು ತಿಳಿಸಿದ್ದಾರೆ. ಈಗ ನಮ್ಮ ಚಿತ್ರದ ಎರಡನೇ ಹಾಡು ಕೂಡ ಹಿಟ್ ಆಗಲಿ. ನಾನು ನನ್ನ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುತ್ತೇನೆ. ನೀವು ಎಲ್ಲರೂ ಬಂದು ನೋಡಿ ಹರಸಿ ಎಂದರು. ಸಂಗೀತ ನಿರ್ದೇಶಕ ರಾಘವೇಂದ್ರ .ವಿ ಮಾತನಾಡುತ್ತಾ ನಮ್ಮ ಮೊದಲ ಸಾಂಗ್ ಮೇಘಾ ಹಿಟ್ ಆಗಿದ್ದು , ನಿಮ್ಮಗಳ ಪ್ರೋತ್ಸಾಹ ಇದಕ್ಕೆ ಕಾರಣ. ಈಗ ಎರಡನೇ ಹಾಡು ಎ2 ಮ್ಯೂಸಿಕ್ ನಲ್ಲಿ ರಿಲೀಸ್ ಆಗಿದೆ. ನಿರ್ದೇಶಕ, ನಿರ್ಮಾಪಕರಿಗೆ ಧನ್ಯವಾದ ಹೇಳುವೆ. ಇಡೀ ಸಾಂಗ್ ನಲ್ಲಿ ನಿಶಾ ಅವರ ಲುಕ್ ಹಾಗೂ ವಿನಯ್ ಇನೂಸೆಂಟ್ ಹೈಲಟ್ ಆಗಿದೆ. ಪ್ರತಿ ಶಾಟ್ ಕೂಡ ಅದ್ಭುತವಾಗಿ ಬಂದಿದೆ. ಚಿತ್ರದಲ್ಲಿ ಇನ್ನೂ ಮೂರು ಹಾಡುಗಳಿವೆ ಎಂದರು. ಇನ್ನೂ ಛಾಯಾಗ್ರಹಕ ಅಭಿಷೇಕ್ ಕಾಸರಗೋಡು , ಸಂಕಲನಗಾರ ಕೀರ್ತಿ, ನೃತ್ಯ ನಿರ್ದೇಶಕ ರಘು ಆರ್.ಜೆ ಚಿತ್ರದ ಕುರಿತು ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಈಗ ‘ಅರೇರೇ ಯಾರೋ ಇವಳು …’ ಸಾಂಗ್ ರಿಲೀಸ್ ಆಗಿದ್ದು , 90ರ ಕಾಲಘಟ್ಟದಲ್ಲಿ ನಾಯಕ ವಿನಯ್ ರಾಜ್ ಕುಮಾರ್ ಹಾಗೂ ನಾಯಕಿ ನಿಶಾ ಹರಿಕೃಷ್ಣನ್ 10ನೇ ತರಗತಿ ವಿದ್ಯಾರ್ಥಿಗಳಾಗಿ ಅಭಿನಯಿಸಿದ್ದಾರೆ. ಹಾಡು ಮಧುರವಾಗಿ ಮನಮುಟ್ಟುವಂತಿದೆ. ಈ “ಅಂದೊಂದಿತ್ತು ಕಾಲ” ಚಿತ್ರದಲ್ಲಿ ವಿನಯ್ ರಾಜ್ಕುಮಾರ್ ಮತ್ತು ಅದಿತಿ ಜೊತೆಗೆ ನಿಶಾ ರವಿಕೃಷ್ಣನ್, ಜಗ್ಗಪ್ಪ, ಅರುಣಾ ಬಾಲರಾಜ್ ಮುಂತಾದವರು ನಟಿಸಿದ್ದು, ರವಿಚಂದ್ರನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರದ ಚಿತ್ರೀಕರಣವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ಚಿತ್ರ ತಂಡ ನೀಡಿದೆಯಂತೆ.

TAGGED:Andondittu Kaalakannada cinemanisha ravikrishnanVinay Rajkumarನಿಶಾ ರವಿಕೃಷ್ಣನ್‌ವಿನಯ್ ರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

veerendra puppy
Bengaluru City

ಅಕ್ರಮ ಆನ್‌ಲೈನ್ ಬೆಟ್ಟಿಂಗ್ | ವೀರೇಂದ್ರ ಪಪ್ಪಿಗೆ ಇಡಿ ಶಾಕ್ – 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
1 minute ago
Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
43 minutes ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
1 hour ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
1 hour ago
Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
2 hours ago
Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?