ಆನೇಕಲ್: 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಪ್ರಿಯಕರನೊಂದಿಗೆ (Lover) ಮೂರು ಮಕ್ಕಳ ತಾಯಿ ಎಸ್ಕೇಪ್ ಆಗಿರುವ ಘಟನೆ ಬನ್ನೇರುಘಟ್ಟ (Bannerghatta) ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ.
ಲೀಲಾವತಿ ಪ್ರಿಯಕರನ ಜೊತೆ ಓಡಿ ಹೋಗಿದ್ದ ಪತ್ನಿ, ಮಂಜುನಾಥ್ ನೊಂದ ಪತಿ. ದಂಪತಿಗೆ 2 ಗಂಡು ಮಕ್ಕಳು, ಒಂದು ಹೆಣ್ಣು ಮಗು ಇದೆ. ಇದನ್ನೂ ಓದಿ: ಉತ್ತರ ಪ್ರದೇಶ | ನಕಲಿ ಐಎಎಸ್ ಅಧಿಕಾರಿ ಅರೆಸ್ಟ್ – ಐಷಾರಾಮಿ ಕಾರುಗಳು ಸೀಜ್
ಪತ್ನಿ ಲೀಲಾವತಿ ಭಾನುವಾರ (ಆ.31) ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ. ಪತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ ನಂತರ ಆಕೆಯೂ ಪೊಲೀಸ್ ಠಾಣೆಗೆ ಬಂದಿದ್ದಾಳೆ. ಬಳಿಕ ಪ್ರಿಯಕರನೇ ಬೇಕೆಂದು ಆತನೊಂದಿಗೆ ಹೋಗಿದ್ದಾಳೆ. ಇತ್ತ ನೊಂದ ಪತಿ ತನಗೆ ಹೆಂಡ್ತಿ ಬೇಕೆಂದು ಕಣ್ಣೀರಿಡುತ್ತಿದ್ದಾನೆ. ಮಕ್ಕಳೂ ಕೂಡ ಕಣ್ಣೀರಿಡುತ್ತಿದ್ದಾನೆ. ಇದನ್ನೂ ಓದಿ: ನನ್ನ ಹಣವನ್ನೆಲ್ಲ ತಿಂದು ತೇಗಿದ್ದೀಯಾ: ಡಿವೋರ್ಸ್ ವಿಚಾರಕ್ಕೆ ಪತ್ನಿಗೆ ಗುಂಡಿಟ್ಟು ಕೊಂದ ಪತಿ
ಆ ದಿನ ಏನಾಯ್ತು?
ಬಸವನಪುರದಲ್ಲಿ (Basavanapura) ವಾಸವಿದ್ದ ಲೀಲಾವತಿ, ಮಂಜುನಾಥ್ ದಂಪತಿ 11 ವರ್ಷಗಳ ಹಿಂದೆ ಪ್ರೀತಿಸಿ ಮದ್ವೆಯಾಗಿದ್ದರು. ಮಂಜುನಾಥ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡ್ತಿದ್ದಾನೆ. ಕಳೆದ 2 ವರ್ಷಗಳ ಹಿಂದೆ ಲೀಲಾವತಿಗೆ ಪ್ರಿಯಕರ ಸಂತೋಷ್ನ ಪರಿಚಯವಾಗಿತ್ತು. ಇಬ್ಬರ ನಡುವೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಬೆಳೆದಿತ್ತು. ಸಾಕಷ್ಟು ಬಾರಿ ಮಂಜುನಾಥ್ ಇದನ್ನ ಪ್ರಶ್ನೆ ಮಾಡಿದ್ದ. ಆದರೂ ಬುದ್ಧಿ ಕಲಿಯದ ಲೀಲಾವತಿ ಭಾನುವಾರ ಮನೆಯಿಂದ ಎಸ್ಕೇಪ್ ಆಗಿದ್ದಾಳೆ.
ಈ ಕುರಿತು ಪತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಬಳಿಕ ಠಾಣೆಗೆ ಹಾಜರಾದ ಲೀಲಾವತಿ ತನಗೆ ಪ್ರಿಯಕರನೇ ಬೇಕೆಂದು ತಾಳಿ ಕಿತ್ತಿಟ್ಟು, ಹೋಗಿದ್ದಾಳೆ. ಇತ್ತ ಗಂಡ – ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಹೋಟೆಲ್ನಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕನ ಕೂಡಿಹಾಕಿ ಹಿಂಸೆ, ಹಲ್ಲೆ – ಚಿಕಿತ್ಸೆ ಫಲಿಸದೇ ಸಾವು