ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿ: ರವಿ ಡಿ. ಚೆನ್ನಣ್ಣವರ್

Public TV
1 Min Read
ANE

ಆನೇಕಲ್: ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ತಿಳಿಸಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್.ಪಿ ರವಿ ಡಿ ಚನ್ನಣ್ಣನವರ್ ಹೇಳಿದ್ದಾರೆ.

ಆನೇಕಲ್ ಪಟ್ಟಣದಲ್ಲಿ ಕರುಣೆಯ ಕುಟೀರ ಹಾಗೂ ವಾಚನಾಲಯವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಆನೇಕಲ್ ನ ಪೋಲಿಸರು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಕರುಣೆಯ ಕುಟೀರ ಹಾಗೂ ವಾಚನಾಲಯ ತೆರೆಯಲಾಗಿದೆ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಹಾಯ ಮಾಡಬೇಕೆನ್ನುವವರು ಸಹಾಯಹಸ್ತ ನೀಡಬಹುದು. ಬಡವರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಮಾಡಲಾಗಿದೆ ಎಂದು ತಿಳಿಸಿದರು.

ANE 1

ಅಕ್ರಮ ಮದ್ಯ ಮಾರಾಟವಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ತಿಳಿಸಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಈಗಾಗಲೇ ಬನ್ನೇರುಘಟ್ಟ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.

ANE 3

ಲಾಕ್ ಡೌನ್ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದಂತಹ 700ಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಬೆಂಗಳೂರು ಜಿಲ್ಲೆಯಾದ್ಯಂತ ಲಾಕ್ ಡೌನ್ ಉಲ್ಲಂಘನೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ, ರಾಜನಕುಂಟೆ ಪೋಲಿಸ್ ಠಾಣಾ ವ್ಯಾಪ್ತಿಗಳಲ್ಲಿ 4 ಪ್ರಕರಣಗಳ ಸಂಬಂಧ ದೂರು ದಾಖಲಾಗಿದೆ ಎಂದರು.

ANE 4

ಜಿಗಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಕೊರೋನಾ ಹೊಗಲಾಡಿಸುವ ನಿಟ್ಟಿನಲ್ಲಿ ಪೊಲೀಸರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದು ಅವರನ್ನು ಎಲ್ಲರೂ ಗೌರವಿಸಬೇಕು ಎಂದರು.

ANE 2

Share This Article
Leave a Comment

Leave a Reply

Your email address will not be published. Required fields are marked *