ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗ್ಬೇಡಿ- ರೌಡಿಗಳಿಗೆ ಖಡಕ್ ವಾರ್ನಿಂಗ್

Public TV
1 Min Read
Anekal Police

ಆನೇಕಲ್: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಗಳನ್ನು ಕರೆಸಿ ಬೆಂಗಳೂರು ಹೊರವಲಯ ಆನೇಕಲ್ ಪೊಲೀಸ್ ಠಾಣಾ ವಿಭಾಗದಲ್ಲಿ ಪೊಲೀಸರು ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

ಕೊಲೆ, ಕಳ್ಳತನ, ದರೋಡೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಗಳಲ್ಲಿ ಸುಮಾರು 50ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

Anekal Police 2

ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದೆ ಸಮಾಜದಲ್ಲಿ ಒಳ್ಳೆಯ ರೀತಿಯಲ್ಲಿ ಬದುಕಬೇಕೆಂದು ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಆನೇಕಲ್ ಸುತ್ತಮುತ್ತ ಗಾಂಜಾ ಮಾರಾಟ ಹಾಗೂ ಮನೆಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಾಗ ಕಾನೂನು ಕ್ರಮಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದೆ. ಒಳ್ಳೆಯ ನಡವಳಿಕೆಯಿಂದ ನಡೆದುಕೊಂಡರೆ, ರೌಡಿ ಶೀಟರ್ ಪಟ್ಟಿಯಿಂದ ಕೈ ಬಿಡಲಾಗುತ್ತದೆ ಎಂಬ ವಿಷಯವನ್ನು ಆನೇಕಲ್ ಪೊಲೀಸ್ ಇನ್ಸ್ ಪೆಕ್ಟರ್ ಕೃಷ್ಣ ಲಮಾಣಿ, ಸಬ್ ಇನ್ಸ್ ಪೆಕ್ಟರ್ ಮುರಳೀಧರ್ ರೌಡಿ ಶೀಟರ್ ಗಳಿಗೆ ಮನವರಿಕೆ ಮಾಡಿಕೊಟ್ಟರು.

Share This Article
Leave a Comment

Leave a Reply

Your email address will not be published. Required fields are marked *