ಮೈಸೂರು: ಅಂಗನವಾಡಿಯಲ್ಲಿ ಮಗು ಮೂತ್ರ ಮಾಡಿದ್ದರಿಂದ ಸಿಟ್ಟುಗೊಂಡ ಸಹಾಯಕಿಯೊಬ್ಬರು ಬರೆ ಹಾಕಿರುವ ಅಮಾನವೀಯ ಘಟನೆ ನಗರದ ದೇವಯ್ಯನ ಹುಂಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ದೇವಯ್ಯನ ಹುಂಡಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಅಂಗನವಾಡಿಯಲ್ಲಿ ಪುಟ್ಟ ಮಗುವೊಂದು ಮೂತ್ರ ಮಾಡಿತ್ತು. ಕೋಪಗೊಂಡ ಆಯಾ ನೀಲಮ್ಮ ಗ್ಯಾಸ್ ಸ್ಟೌವ್ನಲ್ಲಿ ಚಾಕು ಕಾಯಿಸಿ ಮಗುವಿನ ಕಾಲಿಗೆ ಬರೆ ಹಾಕಿದ್ದಾಳೆ. ಇದನ್ನೂ ಓದಿ: ಅಮ್ಮ ಬೇಕು ಅಂತ ಹಠಹಿಡಿದಿದ್ದ 4ರ ಕಂದಮ್ಮನ ಬೆನ್ನಿಗೆ ಬರೆ ಎಳೆದ ಶಿಕ್ಷಕ, ಆಯಾ!
ವಿಷಯ ತಿಳಿಯುತ್ತಿದ್ದಂತೆಯೇ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ ಪೋಷಕರು ಆಯಾ ನೀಲಮ್ಮರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಆಯಾ ಮಕ್ಕಳ ಮೇಲೆ ಯಾವಾಗಲೂ ಇದೇ ರೀತಿ ದೌರ್ಜನ್ಯ ನಡೆಸುತ್ತಾಳೆ ಎಂದು ಆರೋಪಿಸಿರುವ ಗ್ರಾಮಸ್ಥರು, ಕೂಡಲೇ ಆಯಾರನ್ನು ಅಮಾನತು ಮಾಡುವಂತೆ ಅಂಗನವಾಡಿ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv