ಬೆಳಗಾವಿ: ರಾಜ್ಯದಲ್ಲಿ ಮರಾಠಾ ದೊಡ್ಡ ಪ್ರಮಾಣದಲ್ಲಿ ಇದೆ. ಹೀಗಾಗಿ ಅದನ್ನು ಪ್ರತಿನಿಧಿಸುವ ಸಲುವಾಗಿ ಸಮಾಜದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ನೀಡಬೇಕು ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಆಗ್ರಹಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇದೆ. ಆದರೆ, ಹೈಕಮಾಂಡ್ ಏನು ನಿರ್ಣಯ ತೆಗೆದುಕೊಳ್ಳುತ್ತದೆ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ರಾಜ್ಯದಲ್ಲಿ ಮರಾಠ ದೊಡ್ಡ ಸಮುದಾಯವಿದ್ದು ಅದನ್ನ ಪ್ರತಿನಿಧಿಸುವುದಕ್ಕೆ ನಮ್ಮ ಸಮಾಜದವರಿಗೆ ಸಚಿವ ಸ್ಥಾನ ಬೇಕು ಎಂಬುವುದು ಸಮಾಜದ ಬೇಡಿಕೆ ಆಗಿದೆ. ಪಕ್ಷ ನಮ್ಮ ಸಮಾಜದ ಬೇಡಿಕೆ ಈಡೇರಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹೀಗಾಗಿ ಸಮಾಜದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ನೀಡಬೇಕು. ಯಾರಿಗೆ ಕೊಟ್ಟರು ತೊಂದರೆ ಇಲ್ಲ. ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದರು.