ಬಾಲಿವುಡ್ ನಟ ರಣ್ಬೀರ್ ಕಪೂರ್ (Ranbir Kapoor) ಸದ್ಯ ‘ರಾಮಾಯಣ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಆಭರಣ ಮಳಿಗೆಯೊಂದಕ್ಕೆ ನಟ ಚಾಲನೆ ನೀಡಿದ್ದಾರೆ. ಈ ವೇಳೆ, ರಣ್ಬೀರ್ ವೇದಿಕೆ ಮೇಲಿದ್ದಾಗ ಫೋಟೋಗ್ರಾಫರ್ ಅಶ್ಲೀಲ ಪದ ಬಳಸಿ ಮಾತನಾಡಿದ್ದು, ಕೇಳಿ ಶಾಕ್ ಆಗಿದ್ದಾರೆ.
ರಣ್ಬೀರ್ ವೇದಿಕೆಗೆ ಎಂಟ್ರಿ ಕೊಟ್ಟಾಗ ಬೇಗನೆ ಫೋಟೋ ಕ್ಲಿಕ್ಕಿಸಬೇಕೆಂಬ ತವಕ. ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದ ನಿಮಿತ್ತ ಫೋಟೋಗ್ರಾಫರ್ಗೆ ಸರಿಯಾದ ಫೋಟೋ ಸಿಗದ ಕಾರಣ ಸಿಟ್ಟಾಗಿದ್ದಾರೆ. ಈ ವೇಳೆ, ಕೆಟ್ಟ ಪದ ಬಳಸಿ ಮಾತನಾಡಿದ್ದಾರೆ. ಆ ಪದ ಬಳಕೆ ಮಾಡಿದ್ದು, ರಣ್ಬೀರ್ ಅವರಿಗೇನಾ ಅಥವಾ ಸೇರಿದ್ದ ಜನರಿಗೇನಾ? ಎಂದು ಸ್ಪಷ್ಟನೆ ಸಿಕ್ಕಿಲ್ಲ. ಒಟ್ನಲ್ಲಿ ಫೋಟೋಗ್ರಾಫರ್ ವರ್ತನೆ ರಣ್ಬೀರ್ಗೆ ಕೋಪ ತರಿಸಿದೆ.
ರಣ್ಬೀರ್ ಕೂಡ ತಾಳ್ಮೆ ಕಳೆದುಕೊಂಡಿಲ್ಲ. ಖಡಕ್ ಆಗಿ ಲುಕ್ ಕೊಟ್ಟು ವೇದಿಕೆಯಿಂದ ಹೊರನಡೆದಿದ್ದಾರೆ. ವೈರಲ್ ಆಗಿರುವ ವಿಡಿಯೋ ನೋಡಿ ಫೋಟೋಗ್ರಾಫರ್ ವರ್ತನೆಗೆ ಫ್ಯಾನ್ಸ್ ಗರಂ ಆಗಿದ್ದಾರೆ. ಎಲ್ಲಿ ಹೇಗಿರಬೇಕು ಎಂಬ ಸೌಜನ್ಯವಿಲ್ಲ ಎಂದು ಖಡಕ್ ಆಗಿ ಪಾಪರಾಜಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:ಕೈಯಲ್ಲಿ ಗನ್ ಹಿಡಿದು ರಕ್ತಸಿಕ್ತ ಅವತಾರದಲ್ಲಿ ಸಮಂತಾ
ರಾಮಾಯಣ, ಅನಿಮಲ್ ಪಾರ್ಕ್, ಬ್ರಹ್ಮಾಸ್ತ್ರ 2, ಲವ್ & ವಾರ್ ಸೇರಿದಂತೆ ಹಲವು ಸಿನಿಮಾಗಳು ರಣ್ಬೀರ್ ಕೈಯಲ್ಲಿವೆ.