Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು | ಸ್ವಚ್ಛತಾ ಕಾರ್ಮಿಕರಿಗೆ ʻಜಲಮಂಡಳಿ ಅನ್ನಪೂರ್ಣ ಯೋಜನೆʼ ಸ್ಮಾರ್ಟ್ ಕಾರ್ಡ್ ವಿತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು | ಸ್ವಚ್ಛತಾ ಕಾರ್ಮಿಕರಿಗೆ ʻಜಲಮಂಡಳಿ ಅನ್ನಪೂರ್ಣ ಯೋಜನೆʼ ಸ್ಮಾರ್ಟ್ ಕಾರ್ಡ್ ವಿತರಣೆ

Bengaluru City

ಬೆಂಗಳೂರು | ಸ್ವಚ್ಛತಾ ಕಾರ್ಮಿಕರಿಗೆ ʻಜಲಮಂಡಳಿ ಅನ್ನಪೂರ್ಣ ಯೋಜನೆʼ ಸ್ಮಾರ್ಟ್ ಕಾರ್ಡ್ ವಿತರಣೆ

Public TV
Last updated: September 1, 2025 11:03 pm
Public TV
Share
2 Min Read
DK Shivakumar
SHARE

– ಬೆಂಗಳೂರು ನಗರದ ಸ್ವಚ್ಚತೆ ಕಾಪಾಡುವಲ್ಲಿ ಕಾರ್ಮಿಕರ ಪಾತ್ರ ಹಿರಿದು; ಡಿಸಿಎಂ
– 700ಕ್ಕೂ ಹೆಚ್ಚು ಕಾರ್ಮಿಕರಿಗೆ ಪ್ರತಿ ತಿಂಗಳು 1,500 ರೂಪಾಯಿ ಗ್ಯಾರಂಟಿ

ಬೆಂಗಳೂರು: ನಗರದ ಸ್ವಚ್ಚತೆ ಕಾಪಾಡುವಲ್ಲಿ ಜಲಮಂಡಳಿಯ ಸ್ವಚ್ಛತಾ ಕಾರ್ಮಿಕರ ಪಾತ್ರ ದೊಡ್ಡದಿದೆ. ಅವರ ಸೇವೆ ಹಾಗೂ ತ್ಯಾಗವನ್ನು ಗೌರವಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಐತಿಹಾಸಿಕ ʻಜಲಮಂಡಳಿ ಅನ್ನಪೂರ್ಣ ಯೋಜನೆʼಯನ್ನು ಅನುಷ್ಠಾನಗೊಳಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಜಲಮಂಡಳಿ ಸ್ವಚ್ಛತಾ ಕಾರ್ಮಿಕರಿಗೆ ‘ಅನ್ನಪೂರ್ಣ ಯೋಜನೆ’

ನಮ್ಮ ಜಲಮಂಡಳಿ ಸ್ವಚ್ಛತಾ ಕಾರ್ಮಿಕರಿಗೆ ಹೊಸ ಗೌರವ ಮತ್ತು ಆರ್ಥಿಕ ಭದ್ರತೆಯನ್ನು ನೀಡುವ ಉದ್ದೇಶದಿಂದ ಇಂದು ಬೆಂಗಳೂರಿನ ರಜತ ಭವನದಲ್ಲಿ ‘ಅನ್ನಪೂರ್ಣ ಯೋಜನೆ’ ಅಡಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಯಿತು.

ಈ ಯೋಜನೆಯಡಿಯಲ್ಲಿ, 700ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಮಿಕರಿಗೆ… pic.twitter.com/LP1z9vzIls

— DK Shivakumar (@DKShivakumar) September 1, 2025

ಇಂದು ಜಲಮಂಡಳಿಯ ರಜತ ಭವನದಲ್ಲಿ “ಜಲಮಂಡಳಿ ಅನ್ನಪೂರ್ಣ ಯೋಜನೆ” ಅಡಿಯಲ್ಲಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಿ ಮಾತನಾಡಿದರು. ಈ ಯೋಜನೆಯಡಿ 700ಕ್ಕೂ ಹೆಚ್ಚು ನೈರ್ಮಲ್ಯೀಕರಣ ಕಾರ್ಮಿಕರಿಗೆ ಪ್ರತಿತಿಂಗಳು 1,500 ರೂಪಾಯಿಗಳನ್ನು ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗಲಿದ್ದು, ಆರೋಗ್ಯಕರ ಉಪಾಹಾರವನ್ನು ಖಚಿತಪಡಿಸುವ ಜೊತೆಗೆ ಆರ್ಥಿಕ ಭದ್ರತೆ ಮತ್ತು ಸಾಮಾಜಿಕ ಗೌರವವನ್ನೂ ನೀಡಲಿದೆ ಎಂದು ತಿಳಿಸಿದರು.

ಸ್ವಚ್ಛತಾ ಕಾರ್ಮಿಕರ ಜೀವನಮಟ್ಟವನ್ನು ಸುಧಾರಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದ್ದು, ಅವರ ಮಕ್ಕಳೂ ಡಾಕ್ಟರ್, ಇಂಜಿನಿಯರ್, ಕೆಎಎಸ್ ಅಧಿಕಾರಿಗಳಾಗಿ ಬೆಳೆವ ಕನಸು ನನಸಾಗುವಂತೆ ಮಾಡಲು ಸರ್ಕಾರ ನಿಂತಿದೆ ಎಂದು ಭರವಸೆ ನೀಡಿದರು.

ನಗರದ ನೀರು ಮತ್ತು ಒಳಚರಂಡಿ ಸೇವೆಗಳಲ್ಲಿ ನಷ್ಟದಿಂದ ಲಾಭದತ್ತ ಸಾಗುತ್ತಿರುವ ಬದಲಾವಣೆಯನ್ನು ಉಲ್ಲೇಖಿಸಿದ ಡಿಸಿಎಂ, ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಿದ ಪರಿಣಾಮವಾಗಿ ಇಂದು ನಾಗರಿಕರಿಗೆ ಸರಳವಾಗಿ ನೀರು ದೊರೆಯುತ್ತಿದೆ. 5ನೇ ಹಂತದ ಕಾವೇರಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ ಇದೀಗ ಬೆಳೆಯುತ್ತಿರುವ ನಗರಕ್ಕೆ ನೀರು ಪೂರೈಸಲು ಕಾವೇರಿ 6ನೇ ಹಂತದ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದರು.

ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಈ ಯೋಜನೆಯ ತಾಂತ್ರಿಕ ಅಂಶಗಳನ್ನು ವಿವರಿಸಿದರು. ಸ್ವಚ್ಛತಾ ಕಾರ್ಮಿಕರು ನಮ್ಮ ನಗರವನ್ನು ಸ್ವಚ್ಛವಾಗಿ ಇಡಲು ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ. ಈ ಯೋಜನೆಯ ಮೂಲಕ ನಾವು ಅವರ ಶ್ರಮವನ್ನು ಗೌರವಿಸುತ್ತಿದ್ದೇವೆ. ಅವರು ಉತ್ತಮ ಉಪಹಾರ ಸೇವಿಸಲಿ ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ. ಪ್ರತಿದಿನದ ಉಪಾಹಾರಕ್ಕಾಗಿ ನೇರ ಹಣ ಪಾವತಿಸುವ ಈ ವ್ಯವಸ್ಥೆ ಕಾರ್ಮಿಕರ ಗೌರವವನ್ನು ಹೆಚ್ಚಿಸುವುದರೊಂದಿಗೆ ಇತರೆ ನಗರಗಳಿಗೆ ಮಾದರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಆಡಳಿತಾಧಿಕಾರಿ ಮದನ್ ಮೋಹನ್, ಪ್ರಧಾನ ಮುಖ್ಯ ಎಂಜನಿಯರ್ ಬಿ.ಎಸ್ ದಲಾಯತ್, ಮುಖ್ಯ ಎಂಜಿನಿಯರ್‌ ಎಸ್.ವಿ ವೆಂಕಟೇಶ,ರಾಜೀವ್, ದೇವರಾಜ್, ಜಯಶಂಕರ್, ಪರಮೇಶ, ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಆರ್ಥಿಕ ಸಲಹೆಗಾರರಾದ ಸುಬ್ಬರಾಮಯ್ಯ, ಜಲಮಂಡಳಿ ನೌಕರ ಸಂಘದ ಅಧ್ಯಕ್ಷರಾದ ಗೋವಿಂದರಾಜು, ಬೆಂಗಳೂರು ನೀರು ಸರಬರಾಜು ಹಾಗೂ ಸ್ಯಾನಿಟರಿ ಅಸೋಸಿಯೇಷನ್‌ ವರ್ಕರ್ಸ್‌ ಯೂನಿಯನ್‌ ಅಧ್ಯಕ್ಷರಾದ ಸಿದ್ದಪ್ಪ ಸೇರಿದಂತೆ ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Annapurna SchemebengaluruDK Shivakumarsanitation workersWater Boardಜಲಮಂಡಳಿಡಿಕೆ ಶಿವಕುಮಾರ್ಬೆಂಗಳೂರುಸ್ವಚ್ಛತಾ ಕಾರ್ಮಿಕರು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
2 hours ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
2 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
2 hours ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
2 hours ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
2 hours ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?