ಚಿಕ್ಕಬಳ್ಳಾಪುರ: ಗುರುವಾರದಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಗುರು ಅವರ ಕುಟುಂಬಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯಿಂದ ಧನಸಹಾಯ ನೀಡಲು ನಿರ್ಧರಿಸಲಾಗಿದೆ.
ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿಯ ಗುಡಿಗೆರೆ ಗ್ರಾಮದ ವೀರ ಯೋಧ ಗುರು ಅವರು ಪುಲ್ವಮಾ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ್ದಾರೆ. ಆದ್ದರಿಂದ ಹುತಾತ್ಮ ಯೋಧ ಗುರು ಕುಟುಂಬಕ್ಕೆ ಅಣ್ಣೇಶ್ವರ ಗ್ರಾಮ ಪಂಚಾಯ್ತಿ 10 ಲಕ್ಷ ರೂ. ಹಣ ನೀಡಲು ಮುಂದಾಗಿದೆ. ಪರಿಹಾರಧನ ನೀಡಲು ಸರ್ಕಾರ ಸಹ ಅನುಮೋದನೆ ನೀಡುವಂತೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲಕ್ಷ್ಮಿ ಮನವಿ ಮಾಡಿದ್ದಾರೆ. ಅಲ್ಲದೆ ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು ಧನಸಹಾಯ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
ಅಣ್ಣೇಶ್ವರ ಗ್ರಾಮ ಪಂಚಾಯ್ತಿ ಸದಸ್ಯರು ಅನ್ಯಾಯವಾಗಿ ಪಾಪಿ ಉಗ್ರರ ದಾಳಿಗೆ ಬಲಿಯಾದ ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಹುತಾತ್ಮ ಯೋಧನ ಕುಟುಂಬಕ್ಕೆ 10 ಲಕ್ಷ ಧನಸಹಾಯ ಮಾಡಲು ಸಿದ್ಧ ಎಂದು ಹೇಳಿ ದೇಶಭಕ್ತಿ ಮೆರೆದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv