ಬೆಂಗಳೂರು: ರಾಜ್ಯದ 5 ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ (Parishad Election) ಕಾಂಗ್ರೆಸ್ (Congress) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಒಟ್ಟು 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯೂರಿನ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮ ತಮ್ಮ ಪತಿ ಶ್ರೀನಿವಾಸ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೂರ್ಣಿಮ ವಾರದ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಪೂರ್ಣಿಮ ಕಾಂಗ್ರೆಸ್ ಸೇರ್ಪಡೆ ಆದ ಒಂದೇ ವಾರದಲ್ಲಿ ಪೂರ್ಣಿಮ ಪತಿ ಶ್ರೀನಿವಾಸ್ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ: ವೀರಪ್ಪ ಮೊಯ್ಲಿ
ಬೆಂಗಳೂರು ಪದವೀಧರರ ಕ್ಷೇತ್ರ – ರಾಮೋಜಿ ಗೌಡ
ಬೆಂಗಳೂರು ಶಿಕ್ಷಕರ ಕ್ಷೇತ್ರ – ಪುಟ್ಟಣ್ಣ
ನೈಋತ್ಯ ಶಿಕ್ಷಕರ ಕ್ಷೇತ್ರ – ಕೆಕೆ ಮಂಜುನಾಥ್
ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿಟಿ ಶ್ರೀನಿವಾಸ್
ಈಶಾನ್ಯ ಪದವೀಧರರು ಕ್ಷೇತ್ರ – ಡಾ. ಚಂದ್ರಶೇಖರ ಬಿ. ಪಾಟೀಲ್ ಹೆಸರನ್ನು ಘೋಷಿಸಲಾಗಿದೆ. ಇದನ್ನೂ ಓದಿ: ಜನವರಿಯಲ್ಲಿ ಜಾತಿಗಣತಿ ವರದಿ ಸ್ವೀಕಾರ: ಸಿದ್ದರಾಮಯ್ಯ
Web Stories