ನಗರದಲ್ಲಿ ಇನ್ನೆರಡು ದಿನ ಮಳೆರಾಯನ ಸಿಂಚನ

Public TV
1 Min Read
Rain 1 copy

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನು ಎರಡು ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

ಶನಿವಾರದಿಂದ ಎರಡು ದಿನ ಮಳೆರಾಯ ಅಬ್ಬರಿಸಲಿದ್ದಾನೆ. ಈಗಾಗಲೇ ರಾಜಧಾನಿಯಲ್ಲಿ ಮಳೆರಾಯನ ಸಿಂಚನ ಶುರುವಾಗಿದ್ದು, ಕಾರ್ಪೋರೇಶನ್, ಶಾಂತಿನಗರ, ಯಶವಂತಪುರ ಸೇರಿ ಹಲವಡೆ ಭಾರೀ ಮಳೆ ಆಗುತ್ತಿದೆ. ಗಾಳಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಮಳೆ ಆಗುತ್ತಿದ್ದು, ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Ane rain

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಾದ್ಯಂತ ಭಾರೀ ಗಾಳಿಯೊಂದಿಗೆ ಮಳೆ ಸುರಿಯುತ್ತಿದೆ. ಕಳೆದ ಕೆಲ ದಿನದಿಂದ ಮೋಡ ಮುಸುಕಿದ ವಾತಾವರಣ ಇತ್ತು. ಆದರೆ ಇಂದು ಸಂಜೆ 3:30 ರಿಂದ ಗಾಳಿ ಜೊತೆ ಜೋರು ಮಳೆ ಆಗುತ್ತಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಪರದಾಡುತ್ತಿದ್ದು, ಫ್ಲೈ ಓವರ್, ಅಂಗಡಿ, ಬಸ್ ನಿಲ್ದಾಣದಲ್ಲಿ ವಾಹನ ಸವಾರರು ಆಶ್ರಯ ಪಡೆಯುತ್ತಿದ್ದಾರೆ.

Ane rain 1

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆ ಮುಂದುವರಿದಿದ್ದು, ಬ್ರಹ್ಮಗಿರಿ ಬೆಟ್ಟದ ಶ್ರೇಣಿಯಲ್ಲಿ ಉತ್ತಮ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಕನ್ನಿಕೆ ಸುಜೋತಿ ಮೈದುಂಬಿ ಹರಿಯುತ್ತಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಭಾಗಮಂಡಲ ತ್ರಿವೇಣಿ ಸಂಗಮದಲ್ಲೂ ನೀರಿನ ಮಟ್ಟ ಏರುತ್ತಿದೆ. ಒಂದು ವೇಳೆ ಮಳೆ ಇದೇ ರೀತಿ ಮುಂದುವರಿದಲ್ಲಿ ಎರಡು ದಿನದಲ್ಲಿ ಸಂಗಮ ಭರ್ತಿಯಾಗುವ ಸಾಧ್ಯತೆ ಇದೆ.

Share This Article
Leave a Comment

Leave a Reply

Your email address will not be published. Required fields are marked *