ತಿರುವನಂತಪುರಂ: ಕೇರಳದ ಪ್ರಸಿದ್ಧ ಕೂಡಲ್ಮಾಣಿಕ್ಯಂ ದೇಗುಲದಲ್ಲಿ ಮತ್ತೊಬ್ಬ ಹಿಂದೂಯೇತರ ನೃತ್ಯಗಾರ್ತಿಗೆ ಪ್ರದರ್ಶನ ನೀಡಲು ನಿರಾಕರಿಸಿದ ಘಟನೆ ನಡೆದಿದೆ.
ಸೌಮ್ಯಾ ಸುಕುಮಾರನ್ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ್ದವರು ಎನ್ನುವ ಕಾರಣಕ್ಕೆ ಅವರಿಗೆ ಅವಕಾಶ ನೀಡಿಲ್ಲ. ಈ ಬಗ್ಗೆ ಎಎನ್ಐಗೆ ಸಂದರ್ಶನ ನೀಡಿದ ಅವರು, 10 ದಿನಗಳ ಕಾಲ ನಡೆಯುವ ಉತ್ಸವದಲ್ಲಿ ನೃತ್ಯ ಪ್ರದರ್ಶನಕ್ಕೆ ಅವಕಾಶ ಕೊಡುವಂತೆ ನಾನು ಕೇಳಿದ್ದೆ. ಆದರೆ ನನಗೆ ಅವಕಾಶ ಕೊಡಲು ದೇವಸ್ಥಾನದ ಅಧಿಕಾರಿಗಳು ನಿರಾಕರಿಸಿದರು. ನನ್ನ ತಂದೆ ಹಿಂದೂ ಆಗಿದ್ದರು. ಮದುವೆಯಾದ ನಂತರ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಈ ವಿಷಯವನ್ನು ದೇವಸ್ಥಾನದ ಅಧಿಕಾರಿಗಳಿಗೆ ತಿಳಿಸಿದ್ದೆ ಎಂದರು.
ಈ ವಿಷಯ ತಿಳಿದ ಅಲ್ಲಿನ ಅಧಿಕಾರಿಗಳು ದೇವಸ್ಥಾನದ ಹೊರಗಿದ್ದರೆ ಯಾವುದೇ ತೊಂದರೆಯಾಗುತ್ತಿರಲಿಲ್ಲ. ಆದರೆ ಈ ಕಾರ್ಯಕ್ರಮವನ್ನು ಒಳಗೆ ನಡೆಸುವುದರಿಂದ ಕಷ್ಟವಾಗುತ್ತದೆ ಎಂದು ಹೇಳಿದರು. ಇದರಿಂದಾಗಿ ನಾನು ಹಿಂದೆ ಸರಿದೆ ಎಂದರು.
ದೇವಸ್ಥಾನದ ಅಧಿಕಾರಿಗಳು ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಸೌಮ್ಯಾ ಅವರು ತಮ್ಮ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ದೇವಾಲಯವು ಹಿಂದೂಯೇತರರಿಗೆ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ವಿನಮ್ರವಾಗಿ ತಿಳಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ದೇವಸ್ಥಾನದ ಉತ್ಸವದಲ್ಲಿ ಮುಸ್ಲಿಂ ಭರತನಾಟ್ಯ ಕಲಾವಿದೆಗೆ ನಿರ್ಬಂಧ
ಇತ್ತೀಚೆಗಷ್ಟೇ ಕೇರಳದ ದೇವಸ್ಥಾನದ ಉತ್ಸವದಲ್ಲಿ ಕೇರಳದ ಕಲಾವಿದೆಗೆ ನೃತ್ಯ ಪ್ರದರ್ಶನ ನೀಡುವುದನ್ನು ನಿರ್ಬಂಧಿಸಲಾಗಿದೆ. ಮುಸ್ಲಿಂ ಧರ್ಮದವರು ಎಂಬ ಕಾರಣಕ್ಕೆ ದೇಗುಲದಲ್ಲಿ ನೃತ್ಯ ಮಾಡುವುದನ್ನು ಅರ್ಧಕ್ಕೆ ನಿಲ್ಲಿಸಿದ್ದರು.
ದೇವಸ್ಥಾನದ ಉತ್ಸವದಲ್ಲಿ ಪ್ರದರ್ಶನ ನೀಡಲು ಮದ್ರಾಸ್ ವಿವಿಯಿಂದ ಎಂ.ಎ. ಭರತನಾಟ್ಯಂ ಕೋರ್ಸ್ನಲ್ಲಿ ಮೊದಲ ರ್ಯಾಂಕ್ ಪಡೆದ ಶಾಸ್ತ್ರೀಯ ನೃತ್ಯಗಾರ್ತಿ ಮಾನ್ಸಿಯಾ ವಿ.ಪಿ ಅವರು ಹಿಂದೂ ಅಲ್ಲ ಎಂಬ ಕಾರಣಕ್ಕೆ ತ್ರಿಶ್ಯೂರು ಜಿಲ್ಲೆಯ ಜಲಕೂಡದಲ್ಲಿರುವ ಕೂಡಲ್ ಮಾಣಿಕ್ಯಂ ದೇವಸ್ಥಾನದಲ್ಲಿ ನೃತ್ಯ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: 8 ಸಾವಿರ ಸಾಲ ಮಾಡಿ ಲಕ್ಷ ಲಕ್ಷ ಮರುಪಾವತಿ ಮಾಡಿದ ಖಾಸಗಿ ಬ್ಯಾಂಕ್ ನೌಕರ