ರಾಮನಗರ: ಟ್ಯೂಶನ್ (Tuition) ಮುಗಿಸಿ ಮನೆಗೆ ಹೋಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ (Goods Vehicle) ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ.
ಸುಚಿತ್ (10) ಮೃತ ದುರ್ದೈವಿ. ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಅಪಘಾತ ನಡೆದಿದ್ದು, ಸಾವಿನ ಸಂಖ್ಯೆ ಒಟ್ಟು ಮೂರಕ್ಕೆ ಏರಿದೆ. ಆಗಸ್ಟ್ 9ರಂದು ಟ್ಯೂಶನ್ ಮುಗಿಸಿಕೊಂಡು ಐವರು ಮಕ್ಕಳು ಮನೆಗೆ ಹೋಗುತ್ತಿದ್ದ ಸಂದರ್ಭ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದರು. ಇದನ್ನೂ ಓದಿ: ರಾತ್ರಿ ತಡವಾಗಿ ಬಂದ ಮಗನಿಗೆ ಬುದ್ಧಿವಾದ ಹೇಳಿದ ತಾಯಿ- ಮನನೊಂದು ಯುವಕ ಆತ್ಮಹತ್ಯೆ
ಘಟನೆಯಿಂದ ಬದುಕುಳಿದ ಮೂವರು ಮಕ್ಕಳಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಪೈಕಿ ಸುಚಿತ್ ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇನ್ನಿಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕೂಲಿ ಕಾರ್ಮಿಕನ ಕುಟುಂಬದ ಮೇಲೆ ಮೇಸ್ತ್ರಿಯಿಂದ ಮಾರಣಾಂತಿಕ ಹಲ್ಲೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]