ಬೆಂಗ್ಳೂರಲ್ಲಿ ಮತ್ತೊಂದು ಅಗ್ನಿ ದುರಂತ – 30 ಲಕ್ಷಕ್ಕೂ ಅಧಿಕ ಮೌಲ್ಯ ವಸ್ತುಗಳು ಬೆಂಕಿಗಾಹುತಿ

Public TV
1 Min Read
Fire

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ದುರಂತ (Fire Tragedy) ಸಂಭವಿಸಿದ್ದು, ಬರೋಬ್ಬರಿ 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ನಗರದ ಬಳೆಪೇಟೆಯ ಪೇಯಿಂಟ್ ಶಾಪ್‌ನಲ್ಲಿ (Paint Shop) ಬೆಂಕಿ ಕಾಣಿಸಿಕೊಂಡಿದ್ದು, ಎರಡು ಅಂತಸ್ಥಿನ ಕಟ್ಟದ ಹೊತ್ತಿ ಉರಿದಿದೆ. ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಅಂಗಡಿ ಕಳೆದುಕೊಂಡ ಕುಟುಂಬ ಕಣ್ಣೀರಿಟ್ಟಿದೆ. ಇದನ್ನೂ ಓದಿ: ದೆಹಲಿಯ ಕರ್ತವ್ಯ ಪಥದಲ್ಲಿ NCC ಪಥಸಂಚಲನದ ನೇತೃತ್ವ ವಹಿಸಿದ ಕೊಡಗಿನ ಪುಣ್ಯಾ ಪೊನ್ನಮ್ಮ

Fire 2

ಬಳೆಪೇಟೆಯ ಪೇಯಿಂಟ್ ಶಾಪ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಕ್ಷಣಗಳಲ್ಲೇ ಎರಡು ಅಂತಸ್ಥಿಗೆ ವ್ಯಾಪಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಮಾಲೀಕ ಕೃಷ್ಣಮೂರ್ತಿ ಕುಟುಂಬ, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 20 ವರ್ಷಗಳಷ್ಟು ಹಳೆಯ ಬಿಲ್ಡಿಂಗ್‌ನಲ್ಲಿ ಇದೇ ಮೊದಲಬಾರಿಗೆ ಅಗ್ನಿ ಅನಾಹುತ ಸಂಭವಿಸಿದೆ ಎಂದು ಸಹ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಇನ್ನೂ ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಕಟ್ಟಡದ ಒಳಗೆ ಪ್ರವೇಶಿಸಿ ಅಲ್ಲಿಯೇ ಸಿಲುಕಿದ್ದ ಯುವಕನನ್ನು ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಜೆಸಿಬಿ ಬಳಸಿ ಕಟ್ಟಡದ ಶಟರ್ ಮುರಿದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: 75th Republic Day: M-29 ಯುದ್ಧ ವಿಮಾನ ಹಾರಾಟ ನಡೆಸಿ ಮಿಂಚಿದ ಕೊಡಗಿನ ಪುಣ್ಯಾ ನಂಜಪ್ಪ

Share This Article