ಬೆಂಗಳೂರು: ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಯುವಕನೊಬ್ಬ ಆತ್ಮಹತ್ಯೆ ಯತ್ನಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದ್ದು, ಒಂದೂವರೆ ವರ್ಷದ ಮಗು ಎಸ್ಕಲೇಟರ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಾಂಪುರ ಮೆಟ್ರೋ ನಿಲ್ದಾಣನದ ಬಳಿ ನಡೆದಿದೆ.
ರೈಲ್ವೇ ನಿಲ್ದಾಣದ ಎಸ್ಕಲೇಟರ್ ಮೇಲೆ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಒಂದೂವರೆ ವರ್ಷದ ಹಾಸಿನಿ ಎಂಬ ಮಗು ಗಂಭೀರವಾಗಿ ಗಾಯಗೊಂಡಿದೆ. ತಕ್ಷಣವೇ ಮಗುವನ್ನು ನಗರ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.
- Advertisement 2
ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗ ಬೇಕಿದ್ದು, ಘಟನೆಗೆ ಕಾರಣವೇನು ಎಂಬುವುದು ಕೂಡ ತಿಳಿಯಬೇಕಿದೆ.
- Advertisement 3
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv