Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭೆ ಚುನಾವಣೆ ಹೇಗೆ ಗೆದ್ದಿರಿ ಉತ್ತರಿಸಿ – ರಾಹುಲ್ ಗಾಂಧಿಗೆ ಜೋಶಿ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಧಾನಸಭೆ ಚುನಾವಣೆ ಹೇಗೆ ಗೆದ್ದಿರಿ ಉತ್ತರಿಸಿ – ರಾಹುಲ್ ಗಾಂಧಿಗೆ ಜೋಶಿ ಸವಾಲು

Latest

ವಿಧಾನಸಭೆ ಚುನಾವಣೆ ಹೇಗೆ ಗೆದ್ದಿರಿ ಉತ್ತರಿಸಿ – ರಾಹುಲ್ ಗಾಂಧಿಗೆ ಜೋಶಿ ಸವಾಲು

Public TV
Last updated: August 7, 2025 11:14 pm
Public TV
Share
2 Min Read
Prahlad Joshi 1
SHARE

– ಚುನಾವಣೆ ಲೋಪವಾಗಿದ್ದರೆ ಪ್ರಕರಣ ಏಕೆ ದಾಖಲಿಸಲಿಲ್ಲ?
– ಚುನಾವಣಾ ಆಯೋಗವನ್ನು ದೂರುವ ಮೊದಲು ಸ್ಪಷ್ಟಪಡಿಸಿ ಎಂದ ಕೇಂದ್ರ ಸಚಿವ

ನವದೆಹಲಿ: ಕಾಂಗ್ರೆಸ್ (Congress) ಚುನಾವಣಾ ಆಯೋಗದ (Election Commission) ಮೇಲೆ ಆರೋಪ ಹೊರಿಸುವ ಮೊದಲು ಕರ್ನಾಟಕ ವಿಧಾನಸಭೆ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎಂಬುದಕ್ಕೆ ರಾಹುಲ್ ಗಾಂಧಿ ಉತ್ತರಿಸಲಿ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸವಾಲು ಹಾಕಿದರು.

ದೆಹಲಿಯಲ್ಲಿ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆಯಲ್ಲಿ ಇವಿಎಂ ಮತ್ತು ಚುನಾವಣಾ ಆಯೋಗದ ಲೋಪವಿದೆ’ ಎನ್ನುವುದಾದರೆ 2023ರ ವಿಧಾನಸಭಾ ಚುನಾವಣೆಯಲ್ಲಿ ಅದೇ ಇವಿಎಂಗಳು ಮತ್ತು ಚುನಾವಣಾ ಆಯೋಗ ಕಾರ್ಯ ನಿರ್ವಹಿಸಿದೆ. ಹಾಗಾದರೆ ಕಾಂಗ್ರೆಸ್‌ನವರು ಹೇಗೆ ಆಯ್ಕೆಯಾದರು ಎಂದು ಪ್ರಶ್ನಿಸಿದರು.

Rahul Gandhi 1

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ಸಿಗರ ವಾದ ತರ್ಕಬದ್ಧವಲ್ಲ. 2020ರಲ್ಲಿಯೂ ಆಯ್ಕೆಯಾಗಿದ್ದರು. ಆಗದೇ ಚುನಾವಣಾ ಆಯೋಗ ಕಾರ್ಯ ನಿರ್ವಹಿಸುತ್ತಿತ್ತು. ಲೋಪವಾಗಿದ್ದರೆ ಈವರೆಗೂ ಏಕೆ ಪ್ರಕರಣ ದಾಖಲಿಸಲಿಲ್ಲ ಮತ್ತು ದಾಖಲೆ ಸಲ್ಲಿಸಲಿಲ್ಲ? ಈಗ ಒಂದು ವರ್ಗವನ್ನು ಸಮಾಧಾನಪಡಿಸಲು ಈ ನಡೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಂಸತ್‌ನಲ್ಲಿ ಚರ್ಚೆ ಅಸಾಧ್ಯವೆಂದ ಮಾಜಿ ಸ್ಪೀಕರ್:
ಚುನಾವಣಾ ಆಯೋಗದ ಕಾರ್ಯ ನಿರ್ವಹಣೆ ಬಗ್ಗೆ ಸಂಸತ್ತು ಚರ್ಚಿಸಲು ಸಾಧ್ಯವಿಲ್ಲ ಎಂಬುದನ್ನು ಲೋಕಸಭೆ ಮಾಜಿ ಸ್ಪೀಕರ್ ಬಲರಾಮ್ ಜಾಖರ್ ತೀರ್ಪಿತ್ತಿದ್ದಾರೆ. ಇನ್ನು, ಸುಪ್ರೀಂ ಕೋರ್ಟ್‌ನಲ್ಲಿ ಸಹ ವಿಚಾರಣೆ ನಡೆಯುತ್ತಿದ್ದು, ಇದು ಕಾನೂನು ವ್ಯಾಪ್ತಿಗೊಳಪಟ್ಟಿದೆ. ಹಿಂದೆಯೂ ಎಸ್‌ಐಆರ್ ನಡೆಸಲಾಗಿದೆ. ಆದರೆ ಕಾಂಗ್ರೆಸ್ ಅನಗತ್ಯ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ದೂರಿದರು.

2023ರಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಸಹ ಬಿಜೆಪಿಯೇ ಅಧಿಕಾರದಲ್ಲಿತ್ತು. ಹಾಗಿದ್ದರೂ ಕಾಂಗ್ರೆಸ್ ಬಹುಮತದಿಂದ ಗೆದ್ದಿತು. ಆಗ ಚುನಾವಣಾ ಆಯೋಗ ಮತ್ತು ಇವಿಎಂ ಎಲ್ಲಾ ಚೆನ್ನಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆದ್ದಾಕ್ಷಣ ನಿಮಗೆ ಚುನಾವಣಾ ಆಯೋಗ ಚೆನ್ನಾಗಿಲ್ಲ, ಇವಿಎಂಗಳು ವಿಶ್ವಾಸಾರ್ಹವಲ್ಲ ಅಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.

ಜಗತ್ತಿಗೇನು ಹೇಳಲು ಹೊರಟಿದ್ದೀರಿ?
ಕರ್ನಾಟಕದಲ್ಲಿ ವಿಧಾನಸಭೆ ಫಲಿತಾಂಶ ನಿಮ್ಮ ಪರವಾಗಿತ್ತು. ಆದರೆ ಲೋಕಸಭೆ ಇರಲಿಲ್ಲ. ಮಹಾರಾಷ್ಟ್ರದಲ್ಲಿ ಲೋಕಸಭೆ-ವಿಧಾನಸಭೆ ನಿಮ್ಮಂತೆ ಆಗಲಿಲ್ಲ. ದೇಶ ಮತ್ತು ಜಗತ್ತಿಗೆ ಏನನ್ನು ಪ್ರಸ್ತುತಪಡಿಸಲು ಪ್ರಯತ್ನಿಸುತ್ತಿದ್ದೀರಿ? ಭಾರತದಲ್ಲಿ ಚುನಾವಣೆಗಳು ಸರಿಯಾಗಿ ನಡೆಯುವುದಿಲ್ಲ ಎಂದು ಸಾರಲು ಪ್ರಯತ್ನಿಸುತ್ತಿದ್ದೀರಾ ಎಂದು ಪ್ರಶ್ನಿಸಿದರು.

ಜಾರ್ಖಂಡ್, ಜಮ್ಮು-ಕಾಶ್ಮೀರ ಹೇಗೆ ಗೆದ್ದಿರಿ?
ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಭಾರತದ ಸಾಂಸ್ಥಿಕ ಸಂಸ್ಥೆಗಳ ವಿರುದ್ಧ ಮಾತನಾಡುತ್ತಾರೆ. ಚುನಾವಣೆಗಳಲ್ಲಿ ಅಕ್ರಮ ನಡೆದರೆ ನಿಮ್ಮ ಅಭ್ಯರ್ಥಿಗಳು ಜಾರ್ಖಂಡ್‌ನಲ್ಲಿ ಹೇಗೆ ಗೆದ್ದರು? ಜಮ್ಮು ಮತ್ತು ಕಾಶ್ಮೀರದಲ್ಲಿ ಹೇಗೆ ಗೆದ್ದಿದ್ದೀರಿ? ಸ್ವಲ್ಪ ತಾರ್ಕಿಕವಾಗಿ ಕೆಲಸ ಮಾಡಿ, ಜನರು ಬುದ್ಧಿವಂತರಿದ್ದಾರೆ. ಹಾಗಾಗಿಯೇ ತಮ್ಮ ಪಕ್ಷವನ್ನು ವಿಪಕ್ಷದಲ್ಲಿ ಸ್ಥಾನದಲ್ಲಿರಿಸಿದ್ದಾರೆ ಮತ್ತು ಮೂರೇ ಮೂರು ರಾಜ್ಯಗಳಲ್ಲಿ ಆಡಳಿತ ನೀಡಿದ್ದಾರೆ ಎಂದು ರಾಹುಲ್ ಗಾಂಧಿಗೆ ಚಾಟಿ ಬೀಸಿದರು.

ಸುಂಕದಿಂದ ರಾಜತಾಂತ್ರಿಕ ಸಂಬಂಧಕ್ಕಿಲ್ಲ ಧಕ್ಕೆ:
ಕೇವಲ ಸುಂಕ ಏರಿಕೆ, ಬದಲಾವಣೆಯಿಂದ ಭಾರತದ ರಾಜತಾಂತ್ರಿಕ ಸಂಬಂಧ ದುರ್ಬಲವಾಗುವುದಿಲ್ಲ. ಭಾರತದ ಸ್ಥಾನಮಾನವನ್ನು ಜಗತ್ತು ಗುರುತಿಸುತ್ತಿದೆ. 190ಕ್ಕೂ ಹೆಚ್ಚು ದೇಶಗಳ ಬೆಂಬಲವನ್ನು ಭಾರತ ಗಳಿಸಿದೆ ಎಂದು ಸ್ಪಷ್ಟಪಡಿಸಿದರು.

ಅಮೆರಿಕ ಅಧ್ಯಕ್ಷ ಟ್ರಂಪ್ ಸುಂಕ ಯೋಜನೆ ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಸುಂಕ ನೀತಿಗಳ ಆಧಾರದ ಮೇಲೆ ಅಂತರಾಷ್ಟ್ರೀಯ ಸಂಬಂಧಗಳನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಭಾರತ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾಗಿದ್ದು, ಜಾಗತಿಕವಾಗಿ ಗೌರವಿಸಲ್ಪಟ್ಟಿದೆ ಎಂದು ಪ್ರತಿಪಾದಿಸಿದರು.

TAGGED:congressLok Sabha electionNew DelhiPralhad JoshiRahul Gandhiಕಾಂಗ್ರೆಸ್ನವದೆಹಲಿಪ್ರಹ್ಲಾದ್ ಜೋಶಿರಾಹುಲ್ ಗಾಂಧಿಲೋಕಸಭೆ ಚುನಾವಣೆವಿಧಾನಸಭೆ ಚುನಾವಣೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
2 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
17 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
17 minutes ago
CongressFlags1 e1613454851608
Latest

ತಮಿಳುನಾಡು ಚುನಾವಣೆಗೆ 28 ಅಭ್ಯರ್ಥಿಗಳನ್ನ ಘೋಷಿಸಿದ ಕಾಂಗ್ರೆಸ್ – ಹೊಸ ಮುಖಗಳಿಗೂ ಮಣೆ

Public TV
By Public TV
19 minutes ago
g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
35 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?