ಹತ್ತು ಮಂದಿ ಬಲಿ ಪಡೆದ CAA ಪ್ರತಿಭಟನೆ

Public TV
1 Min Read
CAA Lucknow

ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದು ಹತ್ತು ಮಂದಿಯನ್ನು ಬಲಿ ಪಡೆದುಕೊಂಡಿದೆ. ನಿನ್ನೆಯಿಂದ ಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಘಟನೆಯಲ್ಲಿ ಹತ್ತು ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಫಿರೋಝ್ ಬಾದ್, ಕಾನ್ಪುರ್, ಬಿಜ್ನೋರ್, ಸಂಬಾಲ್, ಮೀರಠ್ ನಲ್ಲಿ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಯೋಗಿ ಆದಿತ್ಯನಾಥ್ ವದಂತಿಗಳಿಗೆ ಕಿವಿಗೊಡದೆ ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ ಕಾಪಡುವಂತೆ ಮನವಿ ಮಾಡಿದ್ದಾರೆ.

ಸುಳ್ಳು ಸುದ್ದಿ ಹಬ್ಬುವವರನ್ನ ಹಿಂಸಾತ್ಮಕ ಪ್ರತಿಭಟನೆ ಮಾಡುವುವರನ್ನ ಜನರ ದಾರಿ ತಪ್ಪಿಸುವ ಗುಂಪುಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶದ ಪೊಲೀಸರಿಗೆ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.

CAA Lucknow 2

ಈ ಮಧ್ಯೆ, ಯಾವೊಬ್ಬ ಪ್ರತಿಭಟನಾಕಾರನೂ ಪೊಲೀಸರ ಗುಂಡಿಗೆ ಬಲಿಯಾಗಿಲ್ಲ ಎಂದು ಉತ್ತರ ಪ್ರದೇಶ ಡಿಜಿಪಿ ಒ.ಪಿ.ಸಿಂಗ್ ಹೇಳಿದ್ದಾರೆ. ಒಂದೇ ಒಂದು ಬಾರಿಯೂ ನಾವು ಶೂಟ್ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಗುಂಡಿನ ದಾಳಿ ನಡೆದಿದೆ ಎಂದಾಗಿದ್ದಲ್ಲಿ ಅದು ಪ್ರತಿಭಟನಾಕಾರರ ಕಡೆಯಿಂದಲೇ ಆಗಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಶುಕ್ರವಾರ ಲಕ್ನೊ, ವಾರಾಣಾಸಿ, ಬರೋಲಿ, ಗೋರಕಪುರ್, ಬದೋಹಿ, ಸಂಬಾಲ್ ನಲ್ಲಿ ಪೊಲೀಸ್ ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *