Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮಾನಿಗೆ ಲೆಫ್ಟ್ ರೈಟ್ ತೆಗೆದುಕೊಂಡ ನಟಿ ಅನು ಪ್ರಭಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಭಿಮಾನಿಗೆ ಲೆಫ್ಟ್ ರೈಟ್ ತೆಗೆದುಕೊಂಡ ನಟಿ ಅನು ಪ್ರಭಾಕರ್

Cinema

ಅಭಿಮಾನಿಗೆ ಲೆಫ್ಟ್ ರೈಟ್ ತೆಗೆದುಕೊಂಡ ನಟಿ ಅನು ಪ್ರಭಾಕರ್

Public TV
Last updated: February 28, 2020 1:25 pm
Public TV
Share
3 Min Read
anu.p.mukherjee 65870926 604825760006671 3651743343433434543 n e1582872300159
SHARE

ಬೆಂಗಳೂರು: ನಟಿ ಅನು ಪ್ರಭಾಕರ್ ಅಭಿಮಾನಿಯೊಬ್ಬನ ಮೇಲೆ ಗರಂ ಆಗಿ ಲೆಫ್ಟ್ ರೈಟ್ ತೆಗೆದುಕೊಂಡು ಕ್ಲಾಸ್ ಮಾಡಿದ್ದಾರೆ.

ಫೆ.26 ರಂದು ಅನು ಪ್ರಭಾಕರ್ “ಮತ್ತೆ ಕ್ಯಾಮೆರಾ ಮುಂದೆ” ಎಂದು ಬರೆದು ಟ್ವೀಟ್ ಮಾಡಿ ಫೋಟೋ ಹಾಕಿದ್ದರು. ಈ ಟ್ವೀಟ್ ಗೆ ಮುಧುಸೂಧನ್ ಎಂಬವರು, “ಸ್ವಲ್ಪ ವಯಸ್ಸಗಿದೆ ಬಿಡಿ ಸಾಕು” ಎಂದು ಕಮೆಂಟ್ ಮಾಡಿದ್ದರು.

ಮತ್ತೆ ಕ್ಯಾಮೆರಾ ಮುಂದೆ 😊😊😊! pic.twitter.com/3t3od5sF2d

— Anu Prabhakar Mukherjee (@AnuPrabhakar9) February 25, 2020

ಈ ಕಮೆಂಟ್ ನೋಡಿ ಗರಂ ಆದ ಅನು ಪ್ರಭಾಕರ್, “ವಯಸ್ಸು ಆದ್ರೆ ಕೆಲಸ ನಿಲ್ಲಿಸಬೇಕಾ ಮಧು? ನೀವು ನನ್ನ ಸಿನಿಮಾ ನೋಡೋ ಅವಶ್ಯಕತೆ ಇಲ್ಲ ಬಿಡಿ. ಕಲಾವಿದರಾಗಿ ನಮ್ಮನ್ನು ಇಷ್ಟ ಪಡುವವರು ನೋಡುತ್ತಾರೆ” ಎಂದು ಬರೆದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಖಾರವಾಗಿ ಬರೆದಿದ್ದು ಅಲ್ಲದೇ ಈ ಟ್ವೀಟ್ ಅನ್ನು ಪಿನ್ ಮಾಡಿದ್ದಾರೆ.

ವಯ್ಯಸು ಆದ್ರೆ ಕೆಲಸ ನಿಲ್ಲಿಸಬೇಕಾ ಮಧು …?? ನೀವು ನನ್ನ ಸಿನಿಮಾ ನೋಡೋ ಅವಶ್ಯಕತೆ ಇಲ್ಲ ಬಿಡಿ …!!! ಕಲಾವಿದರಾಗಿ ನಮ್ಮನ್ನಾ ಇಷ್ಟಾ ಪಡೋರು ನೋಡತಾರೆ! https://t.co/kVRgHmi7Eq

— Anu Prabhakar Mukherjee (@AnuPrabhakar9) February 27, 2020

ಅನು ಪ್ರಭಾಕರ್ ಅವರ ಈ ಟ್ವೀಟ್ ಗೆ ಹಲವು ಮಂದಿ ಬೆಂಬಲ ಸೂಚಿಸಿದ್ದಾರೆ. ಭರತಶ್ರೀ ಎಂಬವರು,”ಕಲೆಗೆ ಮತ್ತು ಕಲಾವಿದನಿಗೆ ಸಾವಿಲ್ಲ. ನೀವು ಚಿತ್ರರಂಗಕ್ಕೆ ಬರಬೇಕು ಮೇಡಂ. ಚಿಕ್ಕವನಿದ್ದಾಗ ನಿಮ್ಮ ಶ್ರೀರಸ್ತು ಶುಭಮಸ್ತು ತುಂಬಾ ಇಷ್ಟಪಟ್ಟಿದ್ದೆ. ದೊಡ್ಡವನಾದಾಗ ಸವಾರಿ ಇಷ್ಟಪಟ್ಟೆ. ನೀವು ಮತ್ತೆ ಚಿತ್ರ ಮಾಡಬೇಕು, ಪರದೆ ಮೇಲೆ ಬರಬೇಕು. ಇದೇ ನಮ್ಮ ಹಾರೈಕೆ. ಶುಭವಾಗಲಿ” ಎಂದು ಬರೆದು ಬೆಂಬಲ ಸೂಚಿಸಿದ್ದಾರೆ.

ಕಲೆಗೆ ಮತ್ತು ಕಲಾವಿದನಿಗೆ ಸಾವಿಲ್ಲ. ನೀವು ಚಿತ್ರರಂಗಕ್ಕೆ ಬರಬೇಕು ಮೇಡಂ. ಚಿಕ್ಕವನಿದ್ದಾಗ ನಿಮ್ಮ ಶ್ರೀರಸ್ತು ಶುಭಮಸ್ತು ತುಂಬಾ ಇಷ್ಟಪಟ್ಟಿದ್ದೆ. ದೊಡ್ಡವನಾದಾಗ ಸವಾರಿ ಇಷ್ಟಪಟ್ಟೆ. ನೀವು ಮತ್ತೆ ಚಿತ್ರ ಮಾಡಬೇಕು, ಪರದೆ ಮೇಲೆ ಬರಬೇಕು. ಇದೇ ನಮ್ಮ ಹಾರೈಕೆ. ಶುಭವಾಗಲಿ.

— Dr. Bharatashree V M🇮🇳 (@Bharatashree) February 27, 2020

ವಿದ್ಯಾ ಎಂಬವರು,”ಸರಿಯಾಗಿ ಹೇಳಿದ್ದೀರಿ ಮೇಡಂ. ನಮ್ಮ ಜನಕ್ಕೆ ಹೀರೋ ಮುಖದ ಮೇಲೆ ನೆರಿಗೆ ಬಂದರೂ, ತಲೆ ಕೂದಲು ಬೆಳ್ಳಗಾದರೂ, ಮಗಳ ವಯಸ್ಸಿನ ನಾಯಕಿ ಜೊತೆ ನಟಿಸಿದ್ರು ಇಷ್ಟ. ಅದೇ ನಾಯಕಿಯರು ಮದುವೆ ಆದಕೂಡಲೇ ವಯಸ್ಸಾಯ್ತು ಅಂತಾರೆ. ನಾಯಕಿಯ ವಯಸ್ಸಿಗೆ ಮಾತ್ರ ಬೆಲೆನಾ. ಕಲೆಗೆ ಬೆಲೆಯೇ ಇಲ್ವಾ? ಏನ್ ಜನಾನೋ. ನೀವು ನಟಿಸಿ ಆಲ್ ದಿ ಬೆಸ್ಟ್” ಎಂದು ಕಮೆಂಟ್ ಮಾಡಿ ಪ್ರೋತ್ಸಾಹಿಸಿದ್ದಾರೆ.

ಸರಿಯಾಗಿ ಹೇಳಿದ್ದೀರಿ ಮೇಡಂ… ನಮ್ಮ ಜನಕ್ಕೆ ಹೀರೋ ಮುಖದ ಮೇಲೆ ನೆರಿಗೆ ಬಂದ್ರೂ, ತಲೆ ಕೂದಲು ಬೆಳ್ಳಗಾದ್ರೂ, ಮಗಳ ವಯಸ್ಸಿನ ನಾಯಕಿ ಜೊತೆ ನಟಿಸಿದ್ರು ಇಷ್ಟ…ಅದೇ ನಾಯಕಿಯರು ಮದುವೆ ಆದಕೂಡಲೇ ವಯಸ್ಸಾಯ್ತು ಅಂತಾರೆ… ನಾಯಕಿಯ ವಯಸ್ಸಿಗೆ ಮಾತ್ರ ಬೆಲೆನಾ.. ಕಲೆಗೆ ಬೆಲೆಯೇ ಇಲ್ವಾ… ಏನ್ ಜನಾನೋ…ನೀವು ನಟಿಸಿ,all the best..👍

— ವಿdya… Vದ್ಯಾ… (@Vidyadyavid271) February 28, 2020

ವರ್ಷದ ನಂತರ ನಟಿ ಅನು ಪ್ರಭಾಕರ್ ಮತ್ತೆ ಸ್ಯಾಂಡಲ್‍ವುಡ್‍ಗೆ ರೀ ಎಂಟ್ರಿ ಕೊಟ್ಟಿದ್ದು, ಕಾದಂಬರಿ ಆಧರಿತ ಚಿತ್ರದ ಮೂಲಕ ಕಮ್ ಬ್ಯಾಕ್ ಆಗಿದ್ದಾರೆ. ಅನುಪ್ರಭಾಕರ್ ಅಭಿಮಾನಿಗಳಲ್ಲಿ ಇದು ಅತೀವ ಸಂತಸವನ್ನುಂಟುಮಾಡಿದ್ದು, ತಮ್ಮ ನೆಚ್ಚಿನ ನಟಿಯನ್ನು ತೆರೆಯ ಮೇಲೆ ನೋಡುವ ಕಾತರದಿಂದ ಕಾಯುತ್ತಿದ್ದಾರೆ. ಅಷ್ಟೇ ವೇಗದಲ್ಲಿ ಸಿನಿಮಾ ಸಹ ಪೂರ್ಣಗೊಂಡಿದ್ದು, ಆಗಲೇ ಡಬ್ಬಿಂಗ್ ಹಂತದಲ್ಲಿದೆ.

ಕಲೆಗೆ ಕಲಾವಿದರಿಗೆ ವಯಸ್ಸು ಇಲ್ಲ ಬಿಡಿ. ಸರಿಯಾಗಿ ಹೇಳಿದ್ರಿ. ಇಷ್ಟ ಪಡೋರು ನೋಡ್ತಾರೆ.

— kush (@kushblr) February 28, 2020

ಆರಂಭದಲ್ಲಿ ತಕ್ಕ ಪಾತ್ರಗಳು ಸಿಗಲಿಲ್ಲ ಎಂದು ಸಿನಿಮಾದಿಂದ ದೂರ ಉಳಿದರೆ, ನಂತರ ಸಂಸಾರ, ಮಕ್ಕಳ ಜವಾಬ್ದಾರಿಯ ಕಾರಣ ನಟನೆಗೆ ಕೆಲವು ವರ್ಷಗಳ ಬಿಡುವು ನೀಡಿದ್ದರು. ಇದೀಗ ಮತ್ತೆ ಪೂರ್ಣ ಪ್ರಮಾಣದಲ್ಲಿ ಅನುಪ್ರಭಾಕರ್ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಮಧು ಅವ್ರೆ, ಮುಂದೊಂದಿನ ನೀವು ಇಷ್ಟ ಪಡುವ ನಟನಿಗೂ ವಯಸ್ಸಾಗುತ್ತೆ.ಆವಾಗ್ಲೂ ಇದೇ ಮಾತು ಹೇಳ್ತಿರ.ಇನ್ನೊಬ್ರನ್ನು ಟೀಕಿಸೋದು ಅದು ನಮಗೆ ನಾವು ಮಾಡಿಕೊಳ್ಳುವ ಅವಮಾನ.

— Sharanu Spk/ ನಿಜಶರಣ (@NoYQflV1tc863or) February 28, 2020

ಲೇಖಕಿ ಸಾರಾ ಅಬೂಬಕರ್ ಅವರ `ವಜ್ರಗಳು’ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು, ಸಿನಿಮಾಗೆ `ಸಾರಾವಜ್ರ’ ಎಂದು ಹೆಸರಿಡಲಾಗಿದೆ. ನಿರ್ದೇಶಕಿ ಆರ್ನಾ ಸಾಧ್ಯ (ಶ್ವೇತಾ ಶೆಟ್ಟಿ) ಆಕ್ಷನ್ ಕಟ್ ಹೇಳಿದ್ದಾರೆ. ಸಾರಾವಜ್ರ ಮೂಲಕ ಅನುಪ್ರಭಾಕರ್ ನಟನೆಗೆ ಮರಳಿದ್ದಾರೆ. ಕಳೆದ ವರ್ಷ `ಅನುಕ್ತಾ’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ ಅವರ ಕೊನೆಯ ಸಿನಿಮಾ. ಆದರೆ ವಜ್ರಗಳು ಕಾದಂಬರಿಯ ಜೀವಾಳ `ನಫಿಜಾ’ ಪಾತ್ರ. ಅದೇ ಪಾತ್ರದಲ್ಲಿ ಅನು ಮಿನುಗಿದ್ದಾರೆ. ಚಿತ್ರ ಡಬ್ಬಿಂಗ್ ಹಂತದಲ್ಲಿದ್ದು, ಸದ್ಯದಲ್ಲೇ ಚಿತ್ರದ ಒಂಬತ್ತು ಹಾಡುಗಳು ಬಿಡುಗಡೆಯಾಗುವ ನಿರೀಕ್ಷೆ ಇದೆ.

ಸರಿಯಾಗಿ ಹೇಳಿದ್ರಿ !
ನಿಮ್ಮ ಕೊನೆ ಉಸಿರು ಇರೋವರೆಗೂ ನೀವು ನಟನೆ ಮಾಡಿ, ನೀವು ಕಲಾವಿದರು, ನಿಮಗೆ ವಯಸ್ಸು ಮುಖ್ಯ ಅಲ್ಲ, ಆಯಾ ಪಾತ್ರಕ್ಕೆ ಜೇವ ತುಂಬುವುದು ಮುಖ್ಯ
All The Best Mam

— Nagaraj Nemagoudar (@yournagaraj) February 28, 2020

ಬಾಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಅನು ಪ್ರಭಾಕರ್ ಎರಡು ದಶಕಗಳಲ್ಲಿ ಸುಮಾರು 80 ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ರಘು ಮುಖರ್ಜಿಯವರನ್ನು ಕೈಹಿಡಿದಿರುವ ಅವರಿಗೆ ಒಂದೂವರೆ ವರ್ಷದ ಮಗಳಿದ್ದಾಳೆ. ತಾಯ್ತನದ ಖುಷಿಯಲ್ಲಿರುವ ಅವರಿಗೆ, ಈಗ ಮುಸ್ಲಿಮ್ ಕುಟುಂಬವೊಂದರ ಕಥೆ ಹೇಳುವ `ನಫಿಜಾ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಾನು ಸ್ಕೂಲ್ ಡೇಸ್ ನೋಡಿದಾಗ ನೀವು ಹೇಗಿದ್ರೋ ಇವಾಗ್ಲೂ ಹಾಗೆ ಇದ್ದೀರಾ ❤️❤️evergreen heroine 🙏🙏

— Nithesh poojary (@NitheshNithu11) February 28, 2020

ಚಿತ್ರದ ಕುರಿತು ಮಾತನಾಡಿರುವ ಅನು ಪ್ರಭಾಕರ್, ಖ್ಯಾತ ಲೇಖಕಿಯ ಕಾದಂಬರಿಯ ಕಥಾವಸ್ತುವಿಗೆ ನಟನೆಯ ಮೂಲಕ ನ್ಯಾಯ ಸಲ್ಲಿಸಲು ಸಾಧ್ಯವೇ ಎನ್ನುವ ಅಳುಕು ಆರಂಭದಲ್ಲಿತ್ತು. ಆದರೆ ಇಂತಹ ಪಾತ್ರವೊಂದು ವೃತ್ತಿ ಬದುಕಿನಲ್ಲಿ ಸಿಗುತ್ತಿರುವುದು ಸೌಭಾಗ್ಯ ಹೀಗಾಗಿ ಪಾತ್ರ ಒಪ್ಪಿಕೊಂಡೆ ಎಂದಿದ್ದರು.

ಕಲೆಗೆ ವಯಸ್ಸು ಅಡ್ಡಿ ಆತಂಕ ಇಲ್ಲ, ನಾಯಿ ಬೊಗಳಿದರೆ ದೇವ ಲೋಕ ಹಾಳಾದಿತೆ !!!!! ನೀವು ನಿಮ್ಮ ಕಾಯಕವನ್ನು ಮಾಡಿ 😊 ಕಾಯಕವೇ ಕೈಲಾಸ 😍🤗❤

— 𐒨ɧҩɳɗҩɳ 𐒶𐓪ᥕɗҩ (@chandangowda87) February 28, 2020

ಈ ಚಿತ್ರದಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಹಿರಿಯ ನಟ ರಮೇಶ್ ಭಟ್ ಮಾತನಾಡಿ, ಸಿನಿಮಾ ಮೂಲಕ ಕಾದಂಬರಿಗೆ ನ್ಯಾಯ ಕೊಡುವುದು ಕಷ್ಟದ ಕೆಲಸ. ಅದನ್ನು ನಿರ್ದೇಶಕಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಚಿತ್ರವು ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ಎನಿಸಲಿದೆ ಎಂದಿದ್ದಾರೆ.

ನಾವಂತೂ ನಿಮ್ಮ ಹೃದಯ ಹೃದಯ ಸಿನಿಮಾದಿಂದ ಇವತ್ತಿನ ವರೆಗೂ ನಿಮ್ಮ ಅಭಿಮಾನಿ ಮೇಡಮ್ ಮನೆಯಲ್ಲಿ ನಿಮ್ಮ ಹಾಡು ಸಿನಿಮಾ ಬಂದರೆ ನನ್ನ ಹೆಂಡತಿ ನೋಡ್ರೀ ನಿಮ್ಮ ಹೀರೋಹಿನ್ ಅಂತಾರೆ

— ಮಾರುತಿ ಅಂಜನೇಯ (@JmiCGRkAII9iLCZ) February 28, 2020

ನಟ, ನಿರೂಪಕ ರೆಹಮಾನ್ ಹಾಸನ್, ಈ ಚಿತ್ರದಲ್ಲಿ ಬದ್ರುದ್ದಿನ್ ಪಾತ್ರ ನಿಭಾಯಿಸಿದ್ದಾರೆ. ದೇವೇಂದ್ರ ರೆಡ್ಡಿ ಸಂಭ್ರಮ ಡ್ರೀಮ್ ಹೌಸ್ ಲಾಂಛನದಡಿ ಚಿತ್ರ ನಿರ್ಮಿಸಲಾಗಿದೆ. ನರೇಂದ್ರ ಬಾಬು ಚಿತ್ರಕಥೆ, ಪತ್ರಕರ್ತ ಬಿ.ಎಂ. ಹನೀಫ್ ಸಾಹಿತ್ಯ ಹಾಗೂ ಪರಂ ಛಾಯಾಗ್ರಹಣ ನಿರ್ವಹಿಸಿದ್ದಾರೆ. ಒಂಬತ್ತು ಹಾಡುಗಳಿಗೆ ವಿ.ಮನೋಹರ್ ಸಂಗೀತ ಸಂಯೋಜನೆ ಇದೆ.

Very true maam. Keep continuing ur good work. Wenever I see u, "Onde Usiranthe innu naanu neenu" song keeps reverberating in my ear..

— Dr. Hareesh Hosmane (@hareeshhosmane9) February 28, 2020

TAGGED:ಅನು ಪ್ರಭಾಕರ್ಕನ್ನಡಟ್ವಿಟ್ಟರ್ಸಾರಾ ವಜ್ರಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
15 minutes ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
48 minutes ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
1 hour ago
male mahadeshwara temple
Chamarajanagar

ಮಹಾಶಿವರಾತ್ರಿ ಜಾತ್ರೆ: ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯ ಮೂಲಕ ಭಕ್ತರ ದಂಡು – ಪಾದಯಾತ್ರಿಗಳಿಗೆ ರೂಲ್ಸ್ ಜಾರಿ

Public TV
By Public TV
3 hours ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
3 hours ago
Fire breaks out in over 100 sheds of illegal Bengali migrants Bengaluru
Bengaluru City

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ 10 ಶೆಡ್‌ಗಳಿಗೆ ಬೆಂಕಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?