Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನನ್ನ ಮಗಳು ಪ್ರತಿಭಾನ್ವಿತಳು ಪರೀಕ್ಷೆಗೆ ಹೆದರುವವಳಲ್ಲ: ಅನುಶ್ರೀ ಹೆತ್ತವರ ಆಕ್ರಂದನ

Public TV
Last updated: March 30, 2022 4:55 pm
Public TV
Share
2 Min Read
SSLC STUDENT ANUSHRI
SHARE

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಅನುಶ್ರೀ ಮನೆಯಲ್ಲಿ ಸೂತಕದ ಛಾಯೆ ದಟ್ಟವಾಗಿ ಮೂಡಿದೆ. ಆಕೆ ಪ್ರತಿಭಾನ್ವಿತಳು, ಪರೀಕ್ಷೆಗೆ ಹೆದರುವವಳಲ್ಲ. ಪರೀಕ್ಷಾ ಕೇಂದ್ರ ಬದಲಾಗಿದ್ದಕ್ಕೆ ಆಕೆ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಆಕೆಯ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ.

ಟಿ. ನರಸೀಪುರದಿಂದ 12 ಕಿ.ಮಿ ದೂರದ ಅಕ್ಕೂರು ಗ್ರಾಮದ ಕೆಂಪರಾಜು ಮಗಳು ಅನುಶ್ರೀ. ಗಾರೆ ಕೆಲಸ ಮಾಡುವ ಕೆಂಪರಾಜು ಬಹಳ ಕಷ್ಟಪಟ್ಟು ಮಗಳನ್ನು ಓದಿಸುತ್ತಿದ್ದರು. ಈಗ ಮಗಳು ಈ ರೀತಿ ಸಾವನ್ನಪ್ಪಿರುವುದು ಸಹಜವಾಗಿಯೆ ಅವರನ್ನು ಆಘಾತಕ್ಕೆ ತಳ್ಳಿದೆ.

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ ದುಃಖ ತೋಡಿಕೊಂಡ ಅನುಶ್ರೀ ಪೋಷಕರು, ಆಕೆಗೆ ಯಾವುದೇ ಆರೋಗ್ಯದ ಸಮಸ್ಯೆ ಇರಲಿಲ್ಲ. ಪರೀಕ್ಷೆಗೆ ಹೋದ ಸಂದರ್ಭದಲ್ಲೂ ಚೆನ್ನಾಗಿಯೇ ಇದ್ದಳು. ಪರೀಕ್ಷೆ ಬರೆದು ಬರುತ್ತೇನೆ ಎಂದು ಬೆಳಗ್ಗೆ ಹೇಳಿ ಹೋದ ಮಗು ಹಿಂತಿರುಗಿ ಬರಲೇ ಇಲ್ಲ ಎಂದು ಗದ್ಗದಿತರಾದರು.

ನಾನು ಕೆಲಸ ಮಾಡುತ್ತಿದ್ದಾಗ ನನ್ನ ತಮ್ಮನ ಕರೆ ಬಂತು. ಮಗಳಿಗೆ ಹುಷಾರಿಲ್ಲ, ಬೇಗ ಅವಳನ್ನು ನೋಡಿಕೊಂಡು ಬಾ ಎಂದ. ಬಳಿಕ ನಾನು ಆಸ್ಪತ್ರೆಗೆ ಧಾವಿಸಿದೆ. ಆದರೆ ಅನುಶ್ರೀ ಜೀವಂತವಾಗಿಯೇ ಇರಲಿಲ್ಲ ಎಂದು ಅಳಲು ತೋಡಿಕೊಂಡರು. ಇದನ್ನೂ ಓದಿ: ಮುಸ್ಲಿಂ ಶಿಲ್ಪಿಗಳನ್ನು ಯಾವಾಗ ಬಹಿಷ್ಕರಿಸುತ್ತೀರಿ: ಹೆಚ್‌ಡಿಕೆ ಪ್ರಶ್ನೆ

anushri parents

ಪ್ರತೀ ದಿನ ಆಕೆ ಕಷ್ಟಪಟ್ಟು ಚೆನ್ನಾಗಿಯೇ ಓದುತ್ತಿದ್ದಳು. ಆಕೆಯನ್ನು ಡಾಕ್ಟರ್ ಇಲ್ಲವೇ ಎಂಜಿನಿಯರ್ ಓದಿಸಬೇಕೆಂಬ ಕನಸಿತ್ತು. ಆದರೆ ಈಗ ಅವಳೇ ಇಲ್ಲ. ಪರೀಕ್ಷೆ ದಿನ ಅವಳನ್ನು ನಾನೇ ಬೆಳಗ್ಗೆ ಆಟೋ ಹತ್ತಿಸಿದ್ದೆ. ಆದರೆ ಬರುವಾಗ ಆಕೆ ಹೆಣವಾಗಿ ಬಂದಳು ಎಂದು ಅನುಶ್ರೀ ತಾಯಿ ಆಕ್ರಂದಿಸಿದರು.

ಶಿಕ್ಷಕರ ನಿರ್ಲಕ್ಷವೇ ಕಾರಣ:
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ಪ್ರಕರಣದಲ್ಲಿ ಶಿಕ್ಷಕರ ನಿರ್ಲಕ್ಷ್ಯವಿದೆ ಎಂದು ಹೇಳಲಾಗುತ್ತಿದೆ. ಅನುಶ್ರೀ ತನಗೆ ನಿಗದಿ ಪಡಿಸಿದ ಪರೀಕ್ಷಾ ಕೇಂದ್ರ ಬಿಟ್ಟು ಪಕ್ಕದ ಕಟ್ಟಡದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾಳೆ.

ಪರೀಕ್ಷೆ ಆರಂಭವಾದ ಮುಕ್ಕಾಲು ಗಂಟೆ ಬಳಿಕ ಪರೀಕ್ಷಾ ಮೇಲ್ವಿಚಾರಕರು ಇದು ನಿನ್ನ ಪರೀಕ್ಷಾ ಕೇಂದ್ರವಲ್ಲ. ಪಕ್ಕದ ಕೇಂದ್ರ ನಿನ್ನದು ಎಂದು ಹೇಳಿ ಉತ್ತರ ಪತ್ರಿಕೆ ಹಿಂದಕ್ಕೆ ಪಡೆದು ಬೇರೆ ಕೇಂದ್ರಕ್ಕೆ ಕಳುಹಿಸಿದ್ದಾರೆ. ಪರೀಕ್ಷೆ ಪ್ರಾರಂಭವಾಗಿ ಮುಕ್ಕಾಲು ಗಂಟೆ ಬಳಿಕ ಪರೀಕ್ಷಾ ಮೇಲ್ವಿಚಾರಕರು ಎಚ್ಚೆತ್ತುಕೊಂಡಿದ್ದಾರೆ. ಅವರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ

tumakuru police jeep

ಘಟನೆಯಲ್ಲಿ ನಡೆದಿದ್ದೇನು?
ಅನುಶ್ರೀ ಪರೀಕ್ಷೆ ಬರೆಯಬೇಕಿದ್ದ ಕೇಂದ್ರ ವಿದ್ಯೋದಯ ಹೈಸ್ಕೂಲ್‌ನಲ್ಲಿ. ಆದರೆ ಅನುಶ್ರೀ ಇದೇ ಶಾಲೆಯ ಕಟ್ಟಡಕ್ಕೆ ಹೊಂದಿಕೊಂಡಿರುವ ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಿ ಪರೀಕ್ಷೆ ಬರೆದಿದ್ದಾಳೆ. ಅಲ್ಲಿ ಆಕೆಯ ನೋಂದಣಿ ಸಂಖ್ಯೆ ಹೋಲುವ ನಂಬರ್ ಇದ್ದ ಕಾರಣ ಅಲ್ಲೇ ಕುಳಿತು ಪರೀಕ್ಷೆ ಬರೆದಿದ್ದಾಳೆ. ಪರೀಕ್ಷೆ ಪ್ರಾರಂಭವಾಗಿ ಮುಕ್ಕಾಲು ಗಂಟೆಯ ಬಳಿಕ ಪರೀಕ್ಷಾ ಮೇಲ್ವಿಚಾರಕರು ಆಕೆಯನ್ನು ಪರೀಕ್ಷೆಯಿಂದ ಎಬ್ಬಿಸಿ, ಇನ್ನೊಂದೆಡೆಗೆ ಕಳುಹಿಸಿದ್ದಾರೆ. ಈ ಗೊಂದಲಗಳಿಂದ ಅನುಶ್ರೀ ಒತ್ತಡಕ್ಕೊಳಗಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

TAGGED:Anushriheart attackmysoreSSLC studentಅನುಶ್ರೀಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಮೈಸೂರುಹೃದಯಾಘಾತ
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
2 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
2 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
5 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
6 hours ago

You Might Also Like

Boycott Turkey
Latest

Boycott Turkey – ಸೇಬು, ಚೆರ‍್ರಿ, ಮಾರ್ಬಲ್‌ಗಳ ಆಮದು ಬ್ಯಾನ್‌ಗೆ ನಿರ್ಧಾರ

Public TV
By Public TV
2 minutes ago
Koppal Accident 2
Crime

ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿ – 31 ಜನರಿಗೆ ಗಾಯ

Public TV
By Public TV
17 minutes ago
baglihar dam India Pakistan sindhu river
Latest

ಪ್ಲೀಸ್‌ ನೀರು ಹರಿಸಿ – ಸಿಂಧೂ ಜಲ ಒಪ್ಪಂದವನ್ನು ಪರಿಶೀಲಿಸುವಂತೆ ಪಾಕ್‌ ಪತ್ರ

Public TV
By Public TV
32 minutes ago
Ravikumar
Bengaluru City

ಭಾರತದಲ್ಲಿ ಕಾಂಗ್ರೆಸ್ ಉಗ್ರರನ್ನು ಸಾಕುತ್ತಿದೆ: ರವಿಕುಮಾರ್ ಕಿಡಿ

Public TV
By Public TV
57 minutes ago
kunigal murder case
Crime

ತಂಗಿ ಪ್ರೀತಿಗೆ ಅಣ್ಣನೇ ಸಪೋರ್ಟ್‌ – ಬೈದು ಬುದ್ದಿ ಹೇಳಿದ ತಂದೆಯನ್ನೇ ಕೊಂದ ಮಗ!

Public TV
By Public TV
1 hour ago
Dinesh Gundurao
Bengaluru City

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ರೌಡಿಶೀಟರ್ ನೇಮಕ – ನಾನು ಶಿಫಾರಸು ಪತ್ರ ಕೊಟ್ಟಿಲ್ಲ: ದಿನೇಶ್ ಗುಂಡೂರಾವ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?