ಅಪರ್ಣಾಗೆ ಇಷ್ಟು ಬೇಗ ಸಾವು ಪಟ್ ಅಂತ ಬರುತ್ತೆ ಎಂದು ಗೊತ್ತಿರಲಿಲ್ಲ: ಮಂಡ್ಯ ರಮೇಶ್

Public TV
2 Min Read
aparna 1 2

ನ್ನಡದ ನಟಿ, ನಿರೂಪಕಿ 3 ದಶಕಗಳ ಕಾಲ ರಂಜಿಸಿದ ಅಪರ್ಣಾ (Aparna) ಇನ್ನಿಲ್ಲ. ಇದೀಗ ನಟಿಯ ಸ್ವಗೃಹಕ್ಕೆ ಸ್ಯಾಂಡಲ್‌ವುಡ್ ನಟ, ನಟಿಯರು ಭೇಟಿ ನೀಡಿ ಅಪರ್ಣಾ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಸದ್ಯ ಅಪರ್ಣಾ ನಿಧನಕ್ಕೆ ಸಹನಟ ಮಂಡ್ಯ ರಮೇಶ್ (Mandya Ramesh) ಕಂಬನಿ ಮಿಡಿದಿದ್ದಾರೆ.

aparna television presenter 2

ಕನ್ನಡ ಅಂದರೆ ಅಪರ್ಣ ಅಪರ್ಣಾ ಅಂದರೆ ಕನ್ನಡ ಅಂತ ಮಾತಿದೆ. ಅವರ ಕನ್ನಡ ಪ್ರೀತಿ ಮಾಡಿದ ದೊಡ್ಡ ಜನ ಸಮೂಹವಿದೆ ಎಂಬುದು ಸೋಷಿಯಲ್ ಮೀಡಿಯಾದಲ್ಲಿ ಗೊತ್ತಾಗುತ್ತದೆ. 5 ವರ್ಷ ಮಜಾ ಟಾಕೀಸ್ ಮೂಲಕ ಇವರ ಜೊತೆ ಒಡನಾಟ ನಮ್ಮದು. ಎಲ್ಲರನ್ನೂ ಅತೀ ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಅಪರ್ಣಾ. ಇಷ್ಟು ಬೇಗ ಸಾವು ಪಟ್ ಅಂತ ಬರುತ್ತೆ ಅಂತ ಗೊತ್ತಿರಲಿಲ್ಲ ಎಂದು ಮಂಡ್ಯ ರಮೇಶ್ ಭಾವುಕರಾಗಿದ್ದಾರೆ. ಇದನ್ನೂ ಓದಿ:ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ ಅಪರ್ಣಾ ಅಂತ್ಯಕ್ರಿಯೆ

ಶ್ರೇಷ್ಠವಾದ ಶುದ್ಧ ಕನ್ನಡದ ಚೆಂದದ, ಮನುಷ್ಯತ್ವ ಗುಣಗಳನ್ನ ಮರೆಯದ ನಟಿಯಾಗಿದ್ದರು. ಮಾತೃತ್ವದ ಹೆಣ್ಣು ಮಗು ಅಪರ್ಣಾ ಎಂದಿದ್ದಾರೆ. ಆರೋಗ್ಯ ಸರಿಯಿಲ್ಲ ಅನ್ನೋದಷ್ಟೇ ಗೊತ್ತಿತ್ತು. ಆದರೆ ಇಷ್ಟು ಗಂಭೀರ ಪರಿಸ್ಥಿತಿ ಇದೆ ಎಂದು ಗೊತ್ತಿರಲಿಲ್ಲ. 80 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮ ನಿರೂಪಣೆ ಮಾಡಿದ್ದ ಹೆಗ್ಗಳಿಕೆ ಅವರದ್ದು ಎಂದಿದ್ದಾರೆ. ಇನ್ನೂ ಯಾವಾಗಲೂ ಮಜಾ ಟಾಕೀಸ್‌ನಲ್ಲಿ ರೂಪದ ಬಗ್ಗೆ, ವಯಸ್ಸಿನ ಬಗ್ಗೆ ಕಾಮಿಡಿ ಮಾಡ್ತಿದ್ವಿ ಎಂದು ಸ್ಮರಿಸಿದ್ದರು. ಆಸ್ಟ್ರೇಲಿಯಾಗೆ ನಾವೆಲ್ಲ ಹೋಗಿದ್ದ ದಿನಗಳನ್ನ ಮರೆಯಲು ಆಗಲ್ಲ ಎಂದು ಹಳೆಯ ದಿನಗಳನ್ನು ನೆನೆದು ಮಂಡ್ಯ ರಮೇಶ್ ಭಾವುಕರಾಗಿದ್ದಾರೆ.

Mandya Ramesh 2

ಅಂದಹಾಗೆ, ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ಗೂಡಿಸಿದ್ದರು.

Share This Article