ಮಾವನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಪರ್ಣಾ ಯಾದವ್

Public TV
1 Min Read
aparna yadav

ಲಕ್ನೋ: ಬಿಜೆಪಿಗೆ ಸೇರಿದ ನಂತರ ಅಪರ್ಣಾ ಯಾದವ್, ಮುಲಾಯಂ ಸಿಂಗ್ ಯಾದವ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.

aparna yadav 1

ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಬಿಷ್ತ್ ಯಾದವ್ ಅವರು, ಲಕ್ನೋ ತಲುಪಿದ ಕೂಡಲೇ ಆಶೀರ್ವಾದ ಪಡೆಯಲು ತಮ್ಮ ಮಾವನನ್ನು ಭೇಟಿ ಮಾಡಿದರು. ಅಪರ್ಣಾ ಜನವರಿ 20 ರಂದು ಬಿಜೆಪಿ ಸೇರಿದ್ದರು. ಶುಕ್ರವಾರ ಬೆಳಿಗ್ಗೆ ಅಪರ್ಣಾ ಯಾದವ್ ಅವರು ಟ್ವೀಟ್ ಮಾಡಿದ ಫೋಟೋವು ಬಿಜೆಪಿಯೊಂದಿಗೆ ತನ್ನ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ಅವರ ಆಶೀರ್ವಾದ ಪಡೆಯಲು ಮಾವ, ನೇತಾ ಜಿ ಅವರ ಪಾದಗಳನ್ನು ಸ್ಪರ್ಶಿಸುತ್ತಿರುವ ಫೋಟೋ ವೈರಲ್ ಆಗಿದೆ. ಇದನ್ನೂ ಓದಿ:   ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ

ಬಿಜೆಪಿಗೆ ಸೇರ್ಪಡೆಯಾದ ಅಪರ್ಣಾ, ಭಾರತವು ಹೊಸ ಮೈಲಿಗಲ್ಲುಗಳನ್ನು ಸಾಧಿಸಲು ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹೆಜ್ಜೆಗಳನ್ನು ಅನುಸರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಅಪರ್ಣಾ ಯಾದವ್ ಅವರು 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಖನೌ ಕ್ಯಾಂಟ್‍ನಿಂದ ಸಮಾಜವಾದಿ ಪಕ್ಷದ ಟಿಕೆಟ್‍ನಲ್ಲಿ ಬಿಜೆಪಿಯ ರೀಟಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇದನ್ನೂ ಓದಿ:  ಎಸ್‍ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ?

aparna yadav1

2022 ಉತ್ತರ ಪ್ರದೇಶ ಚುನಾವಣೆಗೆ ಮುಂಚಿತವಾಗಿ ಅಪರ್ಣಾ ಬಿಜೆಪಿ ಸೇರಿರುವ ಕುರಿತು ಪ್ರತಿಕ್ರಿಯಿಸಿದ ಅಖಿಲೇಶ್, ಎಸ್‍ಪಿಯ ಸಮಾಜವಾದಿ ಸಿದ್ಧಾಂತವು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವುದರಿಂದ ಸಂತೋಷ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *