ರಾಜ್ಯದ ಹವಾಮಾನ ವರದಿ 15-06-2021

Public TV
1 Min Read

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಗಳಿವೆ. ಕರಾವಳಿ ಭಾಗದಲ್ಲಿ ಇಂದು ಕೂಡ ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಪ್ರಾರಂಭವಾಗಿದ್ದು, ಜೂನ್ 17ರ ವರೆಗೆ ಗುಡುಗುಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹಲವು ಕಡೆ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ವಿರುತ್ತದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ 16ರ ವರೆಗೆ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಧಾರಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ, ರಾಯಚೂರು ಮತ್ತು ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 20 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 27-20
ಮಂಗಳೂರು: 28-25
ಶಿವಮೊಗ್ಗ: 25-21
ಬೆಳಗಾವಿ: 23-21
ಮೈಸೂರು: 27-21

ಮಂಡ್ಯ: 29-22
ರಾಮನಗರ: 29-21
ಮಡಿಕೇರಿ: 20-17
ಹಾಸನ: 23-19
ಚಾಮರಾಜನಗರ: 29-22

ಚಿಕ್ಕಬಳ್ಳಾಪುರ: 27-19
ಕೋಲಾರ: 29-21
ತುಮಕೂರು: 28-21
ಉಡುಪಿ: 28-25
ಕಾರವಾರ: 28-26

ಚಿಕ್ಕಮಗಳೂರು: 23-19
ದಾವಣಗೆರೆ: 26-22
ಚಿತ್ರದುರ್ಗ: 26-21
ಹಾವೇರಿ: 26-22

ಗದಗ: 26-21
ಕೊಪ್ಪಳ: 28-22
ರಾಯಚೂರು: 31-24
ಯಾದಗಿರಿ: 30-23

ವಿಜಯಪುರ: 34-23
ಬೀದರ್: 31-22
ಕಲಬುರಗಿ: 31-23
ಬಾಗಲಕೋಟೆ: 28-22

Share This Article
Leave a Comment

Leave a Reply

Your email address will not be published. Required fields are marked *