ಲಾಕ್‌ಡೌನ್‌ ಮಾಡಲು ಸಾಧ್ಯವೇ ಇಲ್ಲ – ತಜ್ಞರ ಸಲಹೆಗೆ ಸಿಎಂ ಹೇಳಿದ್ದೇನು? ಇನ್‌ಸೈಡ್‌ ಸುದ್ದಿ

Public TV
3 Min Read

ಬೆಂಗಳೂರು: ಅಂತರ್ ಜಿಲ್ಲೆ ಓಡಾಟ ನಿರ್ಬಂಧ ಮಾಡಿದ್ರೆ ಸರ್ಕಾರ ನಡೆಸಲು ಸಾಧ್ಯವಿಲ್ಲ. ಬೊಕ್ಕಸಕ್ಕೆ ಸಮಸ್ಯೆ ಆಗುತ್ತದೆ. ಈ ಸಲಹೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಸಿಎಂ ಸಚಿವರ ಸಭೆಯಲ್ಲಿ ಹೇಳಿದ್ದರು. ಈ ಕಾರಣಕ್ಕೆ ಬೆಂಗಳೂರನ್ನು ಲಾಕ್‌ಡೌನ್‌ ಮಾಡಿ ಎಂದು ತಜ್ಞರು ಸಲಹೆ ನೀಡಿದರೂ ಸರ್ಕಾರ ಲಾಕ್‌ಡೌನ್‌ ಮಾಡಲು ಹಿಂದೇಟು ಮಾಡುತ್ತಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಹೌದು, ಬೆಂಗಳೂರಿನಲ್ಲಿ ಕೋವಿಡ್‌ 19 ತಡೆಗಟ್ಟಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ತಜ್ಞ ವೈದ್ಯರ ಜೊತೆ ಸಭೆ ನಡೆಸಿದ್ದಾರೆ. ತಜ್ಞ ವೈದ್ಯರುಗಳಾದ ಡಾ.ದೇವಿಶೆಟ್ಟಿ, ಡಾ.ಮಂಜುನಾಥ್, ಡಾ.ಗಿರೀಶ್, ಡಾ.ಸುದರ್ಶನ್, ಮುಖ್ಯಕಾರ್ಯದರ್ಶಿ ಶ್ರೀ ವಿಜಯಭಾಸ್ಕರ್ ಸಭೆಯಲ್ಲಿ ಭಾಗವಹಿಸಿದ್ದರು.

ಸಲಹೆ – 1:
ಈ ಸಭೆಯಲ್ಲಿ ತಜ್ಞರು ಬೆಂಗಳೂರಿಗೆ ಅಂತರ್ ಜಿಲ್ಲೆ ಓಡಾಟಕ್ಕೆ ನಿರ್ಬಂಧ ಹಾಕಿ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ ರಸ್ತೆಗಳನ್ನು ಬಂದ್ ಮಾಡಿ. ಜಿಲ್ಲೆಗಳಿಂದ ಬೆಂಗಳೂರಿಗೆ ಉದ್ಯೋಗ, ಇನ್ನಿತರೆ ಕೆಲಸಕ್ಕೆ ಜನ ಜಾಸ್ತಿ ಬರುತ್ತಾರೆ. ಮೊದಲು ಬೆಂಗಳೂರಿನ ವಾಹನ ದಟ್ಟಣೆ ಜನ ದಟ್ಟಣೆ ಕಡಿಮೆ ಮಾಡಿ. ಇದು ತಕ್ಷಣ ಆಗಬೇಕು. ಬೆಂಗಳೂರಿಗೆ ಮೂರು ವಾರ ಬಿಡಬೇಡಿ ಎಂದು ಸಲಹೆ ನೀಡಿದ್ದಾರೆ. ಇದಕ್ಕೆ ಸಿಎಂ.”ಸಲಹೆ ಉತ್ತಮವಾಗಿದೆ ಮುಂದೆ ನೋಡೋಣ”ಎಂದು ಉತ್ತರಿಸಿದ್ದಾರೆ.

ಸಲಹೆ – 2:
ಅಂತರ್ ರಾಜ್ಯ ಓಡಾಟಕ್ಕೆ 3 ವಾರ ಕಡಿವಾಣ ಹಾಕಬೇಕು. ನಮ್ಮಲ್ಲಿ ಹೋಂ ಕ್ವಾರಂಟೈನ್ ಕಾಯ್ದೆ ಪಾಲನೆ ಆಗುತ್ತಿಲ್ಲ ಎಂದು ಹೇಳಿದ್ದಕ್ಕೆ ಸಿಎಂ, ಈಗ ಬಂದ್ ಆಗಿಹೋಗಿದೆ. ನಮ್ಮ ಟೀಮ್ ಎಲ್ಲಾವನ್ನು ನಿರ್ವಹಣೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಸಲಹೆ – 3:
ಕಂಟೈನ್ಮೆಂಟ್ ಝೋನ್ ನಿರ್ವಹಣೆ ಸರಿಯಾಗುತ್ತಿಲ್ಲ. ಸಾಮಾಜಿಕ ಅಂತರ, ಮಾಸ್ಕ್ ಇಲ್ಲದವರಿಗೆ ದಂಡ ಹಾಕಿ ಎಂಬ ಸಲಹೆಗೆ ಕಂಟೈನ್ಮೆಂಟ್ ಝೋನ್ ಟೈಟ್ ಇದೆ. ನೋ ಪ್ರಾಬ್ಲಂ ಎಂದು ಸಿಎಂ ಉತ್ತರಿಸಿದ್ದಾರೆ.

ಸಲಹೆ -4:
200 ಕೇಸ್ ಮೇಲ್ಪಟ್ಟರೇ ಬೆಂಗಳೂರಿಗೆ ಮಹಾ ಅಪಾಯವಾಗುವ ಸಾಧ್ಯತೆಯಿದೆ. ಈಗಲೇ ಬೆಡ್ ಇಲ್ಲ, ಖಾಸಗಿಯವರನ್ನು ನಂಬಬೇಡಿ, ಅವರು ತಯಾರಿ ಇಲ್ಲ. ವೆಂಟಿಲೇಟರ್, ಐಸಿಯು ರೆಡಿ ಮಾಡಿ ಇಟ್ಟುಕೊಳ್ಳಿ. ಕಲ್ಯಾಣ ಮಂಟಪ, ಕ್ರೀಡಾಂಗಣ, ಖಾಸಗಿ ಹೋಟೆಲ್‌ಗಳನ್ನು ಕೋವಿಡ್‌ ಕೇಂದ್ರಗಳನ್ನಾಗಿ ಮಾಡಿ ಬೆಡ್‌ ಹಾಕಿ ಎಂದು ಹೇಳಿದ್ದಕ್ಕೆ ಸಿಎಂ ಈಗಾಗಲೇ ಎಲ್ಲವೂ ತಯಾರಾಗಿದೆ ಎಂದು ತಿಳಿಸಿದ್ದಾರೆ. ಆದರೆ ವಾಸ್ತವದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ರೆಡಿ ಇಲ್ಲ, ಬೆಡ್ ಗಳನ್ನು ರೆಡಿ ಮಾಡಿಲ್ಲ ಐಸೋಲೇಷನ್ ವಾರ್ಡ್ ಗಳು ಇಲ್ವೇ ಇಲ್ಲ.

ಸಲಹೆ – 5:
ಬೆಂಗಳೂರಿನಲ್ಲಿ ಕಮ್ಯೂನಿಟಿಗೆ ಹರಡಿರುವ ಸಾಧ್ಯತೆಯಿದೆ. ಪರೀಕ್ಷೆ ಇನ್ನು ಸ್ಪೀಡ್ ಆಗಬೇಕು ಎಂದಿದ್ದಕ್ಕೆ ಸಮುದಾಯಕ್ಕೆ ಹರಡಿದ್ದನ್ನು ಸರ್ಕಾರ ಒಪ್ಪಿಕೊಳ್ಳಲು ತಯಾರಿಲ್ಲ ಎಂದು ಉತ್ತರಿಸಿದ್ದಾರೆ.

ಸಲಹೆ – 6:
ಕೆಲ ತಜ್ಞರು ಮುಂದಿನ ರಣ ಭೀಕರ ಪರಿಸ್ಥಿತಿ ಎದುರಿಸಲು ಲಾಕ್ ಡೌನ್ ಅಸ್ತ್ರದ ಬಗ್ಗೆಯೂ ಪ್ರಸ್ತಾವನೆ ಮಾಡಿದ್ದಾರೆ. ನಿತ್ಯ ಒಂದು ಸಾವಿರ ಕೇಸ್ ಬಂದ್ರೆ ಲಾಕ್ ಡೌನ್ ಮಾಡಲೇಬೇಕು ಅಂದಿದ್ದಾರೆ. ಆದ್ರೇ ಲಾಕ್ ಡೌನ್‍ಗೆ ಮಾತ್ರ ಸಿಎಂ ಒಪ್ಪಲು ರೆಡಿಯೇ ಇಲ್ಲ.

ತಜ್ಞರ ಸಲಹೆ ಏನು?
1. ಬೆಂಗಳೂರಿಗೆ ಅಂತರ್ ಜಿಲ್ಲಾ ವಾಹನ ಓಡಾಟವನ್ನು 3 ವಾರ ಸಂಪೂರ್ಣ ಬಂದ್ ಮಾಡಿ. ಬೆಂಗಳೂರಿನಿಂದ ಹಳ್ಳಿಗೆ ಕೊರೊನಾ ವ್ಯಾಪಿಸುವುದನ್ನು ತಡೆಯಬಹುದು.
2. ಬೆಂಗಳೂರಿನಲ್ಲಿ 2 ವಾರ ಪರಿಸ್ಥಿತಿ ಮಾನಿಟರ್ ಮಾಡಿ
3. ದಿನಕ್ಕೆ ಸಾವಿರ ಪ್ರಕರಣ ಬಂದಾಗ ಬಹುತೇಕ ಲಾಕ್‍ಡೌನ್ ನಿರ್ಧಾರ ಮಾಡೋಣ
4. ಬೆಂಗಳೂರಿನಲ್ಲಿ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಎದುರಾಗಿದೆ. ಇದನ್ನು ಈಗಲೇ ತಡೆಯಬೇಕು

5. ಮನೆಗಳು ದೊಡ್ಡದಾಗಿದ್ದರೆ, ಅಲ್ಲಿಯೇ ಚಿಕಿತ್ಸೆ ನೀಡಲು ಮುಂದಾಗಿ
6. ಕೊರೋನಾ ಪರೀಕ್ಷೆಯನ್ನು ಹೆಚ್ಚಳ ಮಾಡಿ ನಿರ್ಲಕ್ಷ್ಯ ಮಾಡಬೇಡಿ
7. ಕಂಟೈನ್ಮೆಂಟ್ ಝೋನ್ ಕಟ್ಟುನಿಟ್ಟಾಗಿ ಪಾಲನೆ ಆಗ್ತಿಲ್ಲ, ಇದನ್ನು ಬಿಗಿಗೊಳಿಸಿ

Share This Article
Leave a Comment

Leave a Reply

Your email address will not be published. Required fields are marked *