ಅಂಗಡಿಗಳ ಮೇಲಿದ್ದ ಕನ್ನಡ ಅಕ್ಷರಗಳಿಗೆ ಮಸಿ ಬಳಿದು ಪುಂಡಾಟ ಮೆರೆದ ಶಿವಸೇನೆ

Public TV
1 Min Read

ಚಿಕ್ಕೋಡಿ/ಬೆಳಗಾವಿ: ಶಿವಸೇನೆ ಪುಂಡರು ಮತ್ತೆ ಪುಂಡಾಟಿಕೆ ಪ್ರದರ್ಶನ ಮಾಡಿದ್ದು, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಮಳಿಗೆಗಳ ಮೇಲಿದ್ದ ಕನ್ನಡದ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.

ಕೊಲ್ಲಾಪೂರದ ಸುಪ್ರಸಿದ್ಧ ಮಹಾಲಕ್ಷ್ಮೀ ಯಾತ್ರಿ ನಿವಾಸದ ಕಟ್ಟಡ ಮೇಲಿದ್ದ ಕನ್ನಡ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದು, ಕನ್ನಡ ಬೋರ್ಡ್ ಹಾಕಿದರೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಮಳಿಗೆಗಳ ಮಾಲೀಕರಿಗೆ ಶಿವಸೇನೆ ಪುಂಡರು ಬೆದರಿಕೆಯೊಡ್ಡಿದ್ದಾರೆ.

ಕೊಲ್ಲಾಪುರ ಶಿವಸೇನೆ ಮುಖಂಡ ಸಂಜಯ್ ಪವಾರ್ ಕೊಲ್ಲಾಪುರದ ಐತಿಹಾಸಿಕ ಮಹಾಲಕ್ಷ್ಮಿ ಮಂದಿರ ಬಳಿಯ ಮಳಿಗೆಗಳ ಮಾಲೀಕರಿಗೂ ಬೆದರಿಕೆ ಹಾಕಿದ್ದಾರೆ. ಐತಿಹಾಸಿಕ ದೇವಸ್ಥಾನಕ್ಕೆ ಕರ್ನಾಟಕದ ಲಕ್ಷಾಂತರ ಭಕ್ತರೂ ಹೋಗುತ್ತಾರೆ. ದೇವಸ್ಥಾನದ ಬಳಿ ಬಹುತೇಕ ಮಳಿಗೆಗಳ ಮೇಲೆ ಕನ್ನಡ ಅಕ್ಷರದ ಬೋರ್ಡ್‍ಗಳಿದ್ದು, ಲಕ್ಷ್ಮೀ ದೇವಸ್ಥಾನದ ಬಳಿಯೂ ಶಿವಸೇನೆ ಪುಂಡರ ಭಾಷಾ ರಾಜಕಾರಣ ಮಾಡಿ, ಪುಂಡಾಟಿಕೆಗೆ ಮೆರೆದಿದ್ದಾರೆ. ಶಿವಸೇನೆಯ ಈ ನಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *