ಅಂಗನವಾಡಿ ಕೇಂದ್ರಕ್ಕೆ ಹಾವುಗಳ ಕಾಟ – ಅಧಿಕಾರಿಗಳ ವಿರುದ್ಧ ಆಕ್ರೋಶ

Public TV
1 Min Read

ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕ ಕಡಬೂರಿನ ಅಂಗನವಾಡಿ ಸಂಖ್ಯೆ 1 ಕ್ಕೆ ಹಾವುಗಳ ಕಾಟ ಹೆಚ್ಚಾಗಿದ್ದು, ಸಿಬ್ಬಂದಿ ಅಂಗನವಾಡಿಗೆ ಹೋಗಲು ಹೆದರುತ್ತಿದ್ದಾರೆ. ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟೆಗಳು ಹೆಚ್ಚಾಗಿ ಬೆಳೆದಿರುವುದರಿಂದ ಪ್ರತೀದಿನ ಹಾವುಗಳು ಪ್ರತ್ಯಕ್ಷವಾಗುತ್ತಿವೆ.

ವಿಷಪೂರಿತ ಜಂತುಗಳು ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಸಹ ಆತಂಕಗೊಂಡಿದ್ದಾರೆ. ಇಂದು ಮಕ್ಕಳು ಹಾಗೂ ಗರ್ಭಿಣಿ, ಬಾಣಂತಿಯರಿಗೆ ವಿತರಿಸಬೇಕಿದ್ದ ಆಹಾರ ಸಾಮಗ್ರಿ ಇರಿಸಿದ್ದ ಸ್ಥಳದಲ್ಲೇ ಹಾವು ಪ್ರತ್ಯಕ್ಷವಾಗಿದೆ. ಆಹಾರ ಸಾಮಗ್ರಿಗಳನ್ನ ತೆಗದು ಗ್ರಾಮಸ್ಥರು ಹಾವನ್ನು ಕೊಂದಿದ್ದಾರೆ.

ಅಂಗನವಾಡಿ ಕೇಂದ್ರದ ಸುತ್ತಲಿನ ವಾತಾವರಣ ಸರಿಯಿಲ್ಲದ ಕಾರಣ ಹಾವು, ಚೇಳು ಕಾಣಿಸಿಕೊಳ್ಳುತ್ತಲೇ ಇರುತ್ತವೆ. ವಿಷ ಜಂತುಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಗಸ್ಟ್‌ನಲ್ಲಿ ಪರೀಕ್ಷೆಗೆ ಅವಕಾಶ – ಕೊರಟಗೆರೆ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಭರವಸೆ

Share This Article
Leave a Comment

Leave a Reply

Your email address will not be published. Required fields are marked *