ಅಂತ್ಯಸಂಸ್ಕಾರಕ್ಕೆ ತೆರಳಿ ವಾಪಸಾಗುತ್ತಿದ್ದವರ ಕಾರು ಅಪಘಾತ- ಮೂವರ ಸಾವು

Public TV
1 Min Read

– ಲಾರಿ, ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಾರಿ, ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮೃತರನ್ನು ಪದ್ದಮ್ಮ (40), ಅಂಬಣ್ಣ (65), ರಾಮಣ್ಣ(99) ಎಂದು ಗುರುತಿಸಲಾಗಿದೆ. ಉಳಿದಂತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಶಿವನಗೌಡ ಹಾಗೂ ಗುಂಡಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಜಾಲಹಳ್ಳಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವದುರ್ಗದ ಹೊಸೂರು ಸಿದ್ದಾಪುರ ಗ್ರಾಮಕ್ಕೆ ಅಂತ್ಯಸಂಸ್ಕಾರಕ್ಕೆ ತೆರಳಿ ವಾಪಸ್ ಮರಳುವಾಗ ಅಪಘಾತ ನಡೆದಿದೆ. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಿವರಾಜ್ ಅಂತ್ಯ ಸಂಸ್ಕಾರಕ್ಕೆ ತೆರಳಿದ್ದ ಸಂಬಂಧಿಕರು ಕಾರಿನಲ್ಲಿ ಊರಿಗೆ ವಾಪಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರೆಲ್ಲರೂ ಲಿಂಗಸೂಗೂರು ತಾಲೂಕಿನ ದೇವರಬೂಪೂರು ಗ್ರಾಮಕ್ಕೆ ಸೇರಿದವರಾಗಿದ್ದಾರೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *