ಅಂಬುಲೆನ್ಸ್ ಕಳುಹಿಸದ ಆರೋಗ್ಯ ಇಲಾಖೆ- 1 ಕಿ.ಮೀ ನಡೆದುಕೊಂಡೆ ಬಂದ ಸೋಂಕಿತೆ

Public TV
1 Min Read

ಕೊಪ್ಪಳ: ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತ ಮಹಿಳೆಯೊಬ್ಬಳು ಒಂದು ಕಿಲೋ ಮೀಟರ್ ನಡೆದುಕೊಂಡು ಬಂದು ಕೋವಿಡ್ ಆಸ್ಪತ್ರೆಗೆ ದಾಖಲಾದ ಘಟನೆ ಬೆಳಕಿಗೆ ಬಂದಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಈ ಘಟನೆ ನಡೆದಿದ್ದು, ಕಳೆದ ರಾತ್ರಿ ಮಹಿಳೆಯಲ್ಲಿ ಕೊರೊನಾ ದೃಢ ಪಡುತ್ತಿದಂತೆ ಆರೋಗ್ಯ ಇಲಾಖೆ ಅಂಬುಲೆನ್ಸ್ ಕಳುಹಿಸಿಕೊಡದಿದ್ದಾಗ ತನ್ನ ಪತಿಯೊಂದಿಗೆ ಒಂದು ಕಿಲೋ ಮೀಟರ್ ನಡೆದುಕೊಂಡು ಬಂದು ಕೋವಿಡ್ ಆಸ್ಪತ್ರೆಗೆ ಸೇರಿದ್ದಾಳೆ. ಅಂಬುಲೆನ್ಸ್ ಕಳಿಸಿ ಎಂದು ಕೇಳಿಕೊಂಡರೂ ಸಹ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ.

ಇದರಿಂದ ಯಾವ ಆಟೋ ಆಸರೆ ಪಡೆಯದೆ, ನನ್ನಿಂದ ಇನ್ನೊಬ್ಬರಿಗೆ ಸೋಂಕು ತಗುಲಬಹುದು ಎಂದು ಅರಿತ ಮಹಿಳೆ ತನ್ನ ಪತಿಯೊಂದಿಗೆ ನಡೆದುಕೊಂಡೆ ಆಸ್ಪತ್ರೆ ಸೇರಿದ್ದಾಳೆ. ಗಂಗಾವತಿ ನಗರದ ಮುರಾರಿ ನಗರ ನಿವಾಸಿಯಾಗಿರುವ ಮಹಿಳೆ ಕಳೆದ 15 ದಿನಗಳ ಹಿಂದೆ ಬೆಂಗಳೂರಿನಿಂದ ಗಂಗಾವತಿಗೆ ಆಗಮಿಸಿದ್ದರು. ರೋಗ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಂಟಲು ದ್ರವದ ಟೆಸ್ಟ್ ಮಾಡಿಸಲಾಗಿತ್ತು.

ಕಳೆದ ರಾತ್ರಿ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಹಿಳೆ ಅಂಬುಲೆನ್ಸ್ ಆಸರೆಯಿಲ್ಲದೆ ಕೋವಿಡ್ ಆಸ್ಪತ್ರೆ ಸೇರಿದ್ದಾಳೆ. ಅಂಬುಲೆನ್ಸ್ ಕಳೆಸಿ ಕೊಡದ ಆರೋಗ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *