ಅಕ್ರಮ ಗಡಿ ನುಸುಳಲು ಪ್ರಯತ್ನ – 24 ಗಂಟೆಯಲ್ಲಿ ಐವರು ಉಗ್ರರು ಮಟಾಶ್

Public TV
1 Min Read

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಅಕ್ರಮವಾಗಿ ಗಡಿ ನುಸುಳಲು ಪ್ರಯತ್ನಿಸಿದ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಂತ್‍ನಾಗ್‍ನ ವಾಘಮಾ ಪ್ರದೇಶದಲ್ಲಿ ಇಂದು ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಅನಂತ್‍ನಾಗ್ ಪೊಲೀಸರು ಮತ್ತು ಭದ್ರತಾ ಪಡೆಗಳು ಐದು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಮೂವರು ಉಗ್ರರ ಬಗ್ಗೆ ಮಾಹಿತಿ ಇತ್ತು. ಅವರಲ್ಲಿ ಒಬ್ಬರು ಜೆಕೆಐಎಫ್‍ನ ಕಮಾಂಡರ್ ಮತ್ತೊಬ್ಬ ಉಗ್ರ ಜಹೀದ್ ದಾರ್ ಭಾರತದ ಒಳಗೆ ನುಸುಳಲು ಯಶಸ್ವಿಯಾಗಿದ್ದರು. ಜಮ್ಮು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಈ ಪ್ರದೇಶವನ್ನು ಸುತ್ತುವರೆದಿದ್ದು ದಾಳಿ ಮಾಡಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *