ಅಕ್ರಮ ಗಣಿಗಾರಿಕೆ ನಿಲ್ಲಿಸುವುದು ನನ್ನ ಹೋರಾಟ: ಸುಮಲತಾ

Public TV
1 Min Read

-ನಾನು ದ್ವೇಷದ ರಾಜಕಾರಣ ಮಾಡುತ್ತಿಲ್ಲ

ಬೆಂಗಳೂರು: ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತಷ್ಟೇ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಇದನ್ನೂ ಓದಿ: ಸುಮಲತಾ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ

ರಾಜಭವನ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಮಸ್ಯೆ ಸೃಷ್ಟಿಸಿಲ್ಲ, ಯಾರು ಸಮಸ್ಯೆ ಸೃಷ್ಟಿಸಿದಾರೋ ಅವರು ಅರ್ಥ ಮಾಡ್ಕೊಂಡ್ರೆ ಸಾಕು. ಅಕ್ರಮ ಗಣಿಗಾರಿಕೆ ನಿಲ್ಲಿಸುವ ವಿಚಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಕಷ್ಟ ಅಂತ ನನಗೂ ಗೊತ್ತು. ಆದರೆ ನನ್ನ ಪ್ರಯತ್ನ ನಾನು ಮಾಡುತ್ತೇನೆ. ಸಂಸತ್ ನಲ್ಲೂ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ಪ್ರಸ್ತಾಪ ಮಾಡ್ತೇನೆ. ಈ ಸಂಬಂಧ ಸಿಎಂ ಅವರನ್ನೂ, ಗಣಿ ಸಚಿವರನ್ನೂ ಭೇಟಿ ಮಾಡ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 5ನೇ ತರಗತಿ ಮಕ್ಕಳಿಗೆ ಶಾಲೆಯಿಂದಲೇ ಉಚಿತ ಕಾಂಡೋಮ್- ಪೋಷಕರು ಆಕ್ರೋಶ

ಅಕ್ರಮ ಗಣಿಗಾರಿಕೆ ಬಗ್ಗೆ ಎಲ್ಲರ ಗಮನಕ್ಕೆ ತಂದಿದ್ದೇನೆ. ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತದೆ. ನಾನು ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ. ಅಂಬರೀಷ್ ಅವರ ಲಕ್ಷಾಂತರ ಅಭಿಮಾನಿಗಳಿಗೂ ನೋವಾಗಿದೆ. ಆದರೆ ನಾವು ಅವರ ದಾರಿಯಲ್ಲಿ ಹೋಗುವುದು ಬೇಡ ಅಂತ ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುತೇನೆ ಎಂದು ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *