ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್‍ವೈ ಪುತ್ರಿ ನೇಮಕ

Public TV
0 Min Read

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ನೇಮಕವಾಗಿದ್ದಾರೆ.

ಯಡಿಯೂರಪ್ಪ ಅವರ ಅವರು ಮೊದಲ ಪುತ್ರಿ ಅರುಣಾದೇವಿ ಉದಯಕುಮಾರ್ ಅವರನ್ನು ಇಂದು ಮಹಿಳಾ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಯ್ತು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಅರುಣಾದೇವಿ ಅವರು ಅಧಿಕಾರ ಸ್ವೀಕರಿಸಿದರು.

ಇದೇ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ನೇಮಕಗೊಂಡರು. ಅರುಣಾದೇವಿಯವರು ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಉಪಸ್ಥಿತಿಯಲ್ಲಿ ಪದಗ್ರಹಣ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *