ಅತಿಥಿ ಉಪನ್ಯಾಸಕರ ಕಷ್ಟಕ್ಕೆ ಸ್ಪಂದಿಸಿದ ಮಾಜಿ ಶಾಸಕ ನೇಮಿರಾಜ್

Public TV
1 Min Read

ಬಳ್ಳಾರಿ: ಕೊರೊನಾ ಮಾಹಾಮಾರಿಯಿಂದಾಗಿ ಕೆಲಸ ಇಲ್ಲದೆ ಸಂಬಳ ಇಲ್ಲದೆ ಸಂಸಾರ ನಡೆಸಲು ಸಾಧ್ಯವಾಗದ ಸ್ಥಳೀಯ ಅತಿಥಿ ಉಪನ್ಯಾಸಕರ ಸಹಾಯಕ್ಕೆ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಮುಂದಾಗಿದ್ದಾರೆ.

ಸರ್ಕಾರಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ಕಷ್ಟಕ್ಕೆ ಸ್ಪಂದಿಸಿ, ಅವರಿಗೆಲ್ಲ ಆಹಾರದ ಕಿಟ್‍ಗಳನ್ನು ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ಸೇರಿದಂತೆ 200ಕ್ಕೂ ಹೆಚ್ಚಿನ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ. ಇದೇ ಸಮಯದಲ್ಲಿ ಎಲ್ಲ ಅತಿಥಿ ಉಪನ್ಯಾಸಕರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ.

ಈ ವೇಳೆ ಮಾತನಾಡಿದ ನೇಮಿರಾಜನಾಯ್ಕ್, ಹಲವಾರು ತಿಂಗಳುಗಳಿಂದ ಸಂಬಳವಿಲ್ಲದೆ ಅತ್ಯಂತ ಕಷ್ಟದ ಸ್ಥಿತಿಯಲ್ಲಿರುವ ಈ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೆರವಾಗಬೇಕು. ನಾಡಿದ್ದು ಬಳ್ಳಾರಿ ಜಿಲ್ಲೆಯ ಅತಿಥಿ ಉಪನ್ಯಾಸಕರ ನಿಯೋಗವನ್ನು ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ರವರ ಬಳಿ ಕರೆದುಕೊಂಡು ಹೋಗುತ್ತೇನೆ. ಅವರೊಂದಿಗೆ ಚರ್ಚಿಸಿ ಸಂಬಳ ಹೆಚ್ಚಳ, ಕೆಲಸದ ಖಾಯಂ ಮಾಡಲು ಬೇಕಾದ ನೆರವು ನೀಡುವುದಾಗಿ ತಿಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *