ಅತ್ತಿಗೆಯನ್ನು ಕೊಂದು ನೇಣಿಗೆ ಶರಣಾದ ನಾದಿನಿ

Public TV
1 Min Read

ಮಂಡ್ಯ: ಕೌಟುಂಬಿಕ ಕಲಹದೊಂದಿಗೆ ಪ್ರಾರಂಭವಾದ ಅತ್ತಿಗೆ-ನಾದಿಯ ಜಗಳ ಮಾರಾಮಾರಿ ನಡೆದು ಕೊಲೆ ಮತ್ತು ಆತ್ಮಹತ್ಯೆಗೆ ಕಾರಣವಾಗಿರುವ ಘಟನೆ ಮಂಡ್ಯ ತಾಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೌಟುಂಬಿಕ ಜಗಳದಿಂದಾಗಿ ಅತ್ತಿಗೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ನಾದಿನಿ ಕೊನೆಗೆ ತಾನು ಸಹ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂಬದಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಿಯಾಂಕ (32) ನಾದಿನಿಯಿಂದ ಕೊಲೆಯಾದ ಅತ್ತಿಗೆಯಾಗಿದ್ದು, ಗಿರಿಜಾ(31) ಅತ್ತಿಗೆಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ನಾದಿನಿಯಾಗಿದ್ದಾಳೆ. ಇದನ್ನೂ ಓದಿ: ಕೋವಿಡ್ ಕೇರ್ ಸೆಂಟರ್‌ನಲ್ಲಿ ಕುಟುಂಬ- ಶಾರ್ಟ್ ಸಕ್ಯೂಟ್‍ನಿಂದ ಮನೆ ಬೆಂಕಿಗಾಹುತಿ

ಕೌಟುಂಬಿಕ ವಿಚಾರಕ್ಕೆ ಪ್ರಿಯಾಂಕ ಹಾಗೂ ಗಿರಿಜಾ ಅವರ ನಡುವೆ ಪದೇ ಜಗಳವಾಗುತ್ತಿತ್ತು ಎನ್ನಲಾಗುತ್ತಿತ್ತು. ನಿನ್ನೆ ಇವರಿಬ್ಬರ ಜಗಳ ತಾರಕಕ್ಕೆ ಏರಿದ್ದು ಇಬ್ಬರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಗಿರಿಜಾ, ಪ್ರಿಯಾಂಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ. ನಂತರ ಭಯಗೊಂಡ ಗಿರಿಜಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *