ಅಧಿಕಾರಿಗಳ ಗ್ರಾಮ ವಾಸ್ತವ್ಯ: ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

Public TV
1 Min Read

ರಾಯಚೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಹಿನ್ನೆಲೆ ಲಿಂಗಸುಗೂರು ತಾಲೂಕಿನ ಕಳ್ಳಿಲಿಂಗಸುಗೂರಿನಲ್ಲಿ ಇಂದು ಅಪರ ಜಿಲ್ಲಾಧಿಕಾರಿಯಾದ ದುರುಗೇಶ್ ಗ್ರಾಮ ವಾಸ್ತವ್ಯ ಮಾಡುತ್ತಿರುವುದರಿಂದ ಗ್ರಾಮಸ್ಥರು ಅಧಿಕಾರಿಗಳಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕುಂಭ, ಕಳಸ, ಡೊಳ್ಳು ಸಹಿತ ಮೆರವಣಿಗೆ ಮೂಲಕ ಅಧಿಕಾರಿಗಳನ್ನು ಗ್ರಾಮಕ್ಕೆ ಬರಮಾಡಿಕೊಂಡಿದ್ದಾರೆ. ಸಾರ್ವಜನಿಕರಿಂದ ಎಡಿಸಿ ದುರಗೇಶ್ ಅಹವಾಲು ಸ್ವೀಕರಿಸುತ್ತಿದ್ದಾರೆ. ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಸಿಗುವ ಭರವಸೆಯಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನ ಅಧಿಕಾರಿಗಳ ಮುಂದೆ ತೋಡಿಕೊಳ್ಳುತ್ತಿದ್ದಾರೆ.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಕಳ್ಳಿಲಿಂಗಸೂಗೂರಿನ ನಾಗಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದೆ. ಅಪರ ಜಿಲ್ಲಾಧಿಕಾರಿ ದುರುಗೇಶ್ ಜೊತೆಯಲ್ಲಿ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಅಹವಾಲು ಸ್ವೀಕರಿಸುವ ಜೊತೆ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಸದ್ಬಳಕೆ ಬಗ್ಗೆ ಅಧಿಕಾರಿಗಳು ಗ್ರಾಮಸ್ಥರಿಗೆ ಅರಿವು ಮೂಡಿಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *